ಸಿಂಧು ಜಲ ಒಪ್ಪಂದ ಸ್ಥಗಿತಗೊಳಿಸುವುದು ಕಾನೂನುಬಾಹಿರವಲ್ಲ: ಪಾಕ್ ಹೇಳಿಕೆ ತಿರಸ್ಕರಿಸಿದ ಭಾರತ

Date:

Advertisements

ಸಿಂಧು ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವು ‘ಕಾನೂನುಬಾಹಿರ’ ಎಂಬ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಆರೋಪವನ್ನು ಭಾರತ ತಿರಸ್ಕರಿಸಿದೆ. “ಈ ನಿರ್ಧಾರವು ಅಂತಾರಾಷ್ಟ್ರೀಯ ಕಾನೂನುಗಳ ಪ್ರಕಾರ ಕಾನೂನುಬದ್ಧವಾಗಿದೆ” ಎಂದು ಭಾರತ ಹೇಳಿದೆ.

ಶುಕ್ರವಾರ, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಸಿಂಧು ಜಲ ಒಪ್ಪಂದವನ್ನು ಮುರಿದು ಲಕ್ಷಾಂತರ ಜನರ ಜೀವಕ್ಕೆ ಅಪಾಯವನ್ನುಂಟುಮಾಡುವ ಮೂಲಕ ಭಾರತ ಕೆಂಪು ರೇಖೆಯನ್ನು ದಾಟಲು ಪ್ರಯತ್ನಿಸುತ್ತಿದೆ. ಆದರೆ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

Advertisements

ಈ ಬಗ್ಗೆ ಜಲಶಕ್ತಿ ಸಚಿವಾಲಯದ ಸಿಂಧು ಜಲ ಒಪ್ಪಂದದ ಸಲಹೆಗಾರ ಮತ್ತು ಮಾಜಿ ಆಯುಕ್ತ(ಸಿಂಧು) ಕುಶ್ವಿಂದರ್ ವೋಹ್ರಾ ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಸಿಂಧು ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವು ಚಾಲ್ತಿಯಲ್ಲಿರುವ ಅಂತಾರಾಷ್ಟ್ರೀಯ ಕಾನೂನುಗಳ ಪ್ರಕಾರ ಕಾನೂನುಬದ್ಧವಾಗಿ ಮಾನ್ಯವಾಗಿದೆ” ಎಂದರು.

“ಅಂತಾರಾಷ್ಟ್ರೀಯ ಒಪ್ಪಂದಗಳ ಮೇಲಿನ ವಿಯೆನ್ನಾ ಸಮಾವೇಶವು ಸಿಂಧು ಜಲ ಒಪ್ಪಂದದ ಮೇಲೆ ಕಟ್ಟುನಿಟ್ಟಾಗಿ ಅನ್ವಯಿಸುವುದಿಲ್ಲ. ಏಕೆಂದರೆ ಅದು 1980ರಲ್ಲಿ ಮಾತ್ರ ಜಾರಿಗೆ ಬಂದಿದೆ. 1980ರ ಮೊದಲು ಮಾಡಲಾದ ಒಪ್ಪಂದಗಳು ಅದರ ವ್ಯಾಪ್ತಿಗೆ ಬರುವುದಿಲ್ಲ. ಸಿಂಧು ಜಲ ಒಪ್ಪಂದಕ್ಕೆ 1960ರಲ್ಲಿ ಸಹಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಮೂಲಭೂತ ಸಂದರ್ಭಗಳು ಬದಲಾದಾಗ, ಪರಿಸ್ಥಿತಿ ಬಂದಾಗ ಸಿಂಧು ಜಲ ಒಪ್ಪಂದವನ್ನು ಅಮಾನತುಗೊಳಿಸಬಹುದು ಅಥವಾ ರದ್ದುಗೊಳಿಸಬಹುದು ಎಂದೂ ಹೇಳಿದರು. “ಸಿಂಧು ಜಲ ಒಪ್ಪಂದದ ಮೂಲಾಧಾರವಾಗಿದ್ದ ಸೌಹಾರ್ದತೆ ಮತ್ತು ಸ್ನೇಹದ ಮನೋಭಾವಕ್ಕೆ ವಿರುದ್ಧವಾಗಿ ಪಾಕಿಸ್ತಾನ ನಿರಂತರವಾಗಿ ವರ್ತಿಸುತ್ತಿರುವುದರಿಂದ ಭಾರತ ತನ್ನ ಹಕ್ಕು ಬಳಸಿಕೊಂಡು ಒಪ್ಪಂದವನ್ನು ಸ್ಥಗಿತಗೊಳಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸಿಂಧು ನದಿ ನೀರು ಹರಿಸಲೇಬೇಕು – ಇಲ್ಲದಿದ್ದರೆ ಭಾರತಕ್ಕೇ ಗಂಭೀರ ಸಮಸ್ಯೆ!

“ಭಾರತದ ನಿರ್ಧಾರವನ್ನು ಪ್ರಶ್ನಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ವೇದಿಕೆಗಳಿಗೆ ಹೋದರೂ, ಇಂದಿನ ಸನ್ನಿವೇಶಗಳು ಬದಲಾಗಿವೆ. ವಿಶೇಷವಾಗಿ ಇಸ್ಲಾಮಾಬಾದ್ ಸೌಹಾರ್ದತೆ ಮತ್ತು ಸ್ನೇಹದ ಮನೋಭಾವಕ್ಕೆ ವಿರುದ್ಧವಾಗಿ ವರ್ತಿಸುವುದು, ತಾಂತ್ರಿಕ ಬದಲಾವಣೆಗಳು, ಹವಾಮಾನ ಬದಲಾವಣೆಯ ಪರಿಣಾಮಗಳು ಸೇರಿದಂತೆ ಇತರವುಗಳಿವೆ” ಎಂದಿದ್ದಾರೆ.

1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಿರುವ ಸಿಂಧು ಜಲ ನೀರಿನ ಒಪ್ಪಂದವು ಎರಡೂ ದೇಶಗಳ ನಡುವೆ ಸಿಂಧು ನದಿ ವ್ಯವಸ್ಥೆಯ ನೀರಿನ ಹಂಚಿಕೆಗೆ ಸಂಬಂಧಿಸಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಮೂಲಕ ಭಯೋತ್ಪಾದನಾ ಸಂಘಟನೆ ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಕೊಂದ ಬಳಿಕ ಈ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X