ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

Date:

Advertisements

ಇಸ್ರೋ ಇಂದು (ಅಕ್ಟೋಬರ್ 21)ರ ಬೆಳಗ್ಗೆ 10.0 ಗಂಟೆ ಸುಮಾರಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಮಾನವಸಹಿತ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ.

ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್​ ಮಾಡೆಲ್​​ ಒಳಗೊಂಡ ಎರಡೂ ಮಾಡೆಲ್​ಗಳನ್ನು ಹೊತ್ತು ರಾಕೆಟ್​​​​​ ಸಾಗಿದ್ದು ನೌಕೆಯನ್ನು ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಹಾರಿಸಲಾಯಿತು. ನಂತರ ನೌಕೆಯು ಬಂಗಾಳ ಕೊಲ್ಲಿಯ ಸಮುದ್ರಕ್ಕೆ ಯಶಸ್ವಿಯಾಗಿ ಇಳಿಯಿತು.

“ಯೋಜನೆಯ ಯಶಸ್ಸನ್ನು ಘೋಷಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಸಿಬ್ಬಂದಿ ತಪ್ಪಿಸಿಕೊಳ್ಳುವ ವ್ಯವಸ್ಥೆಯನ್ನು ಪ್ರದರ್ಶಿಸುವುದು ಕಾರ್ಯಾಚರಣೆಯ ಉದ್ದೇಶವಾಗಿತ್ತು” ಎಂದು ಇಸ್ರೋ ಅಧ್ಯಕ್ಷ ಸೋಮನಾಥನ್‌ ತಿಳಿಸಿದ್ದಾರೆ.

Advertisements

ಗಗನಯಾನವನ್ನು ಬೆಳಿಗ್ಗೆ 8.45ಕ್ಕೆ ಉಡಾವಣೆಗೊಳಿಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಉಡಾವಣೆಗೂ 5 ಸೆಕೆಂಡ್‌ ಮೊದಲು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ನಂತರ ತಾಂತ್ರಿಕ ಸಮಸ್ಯೆಗಳನ್ನು ಪತ್ತೆಹಚ್ಚಿ ದೋಷಗಳನ್ನು ಸರಿಪಡಿಸಲಾಗಿತ್ತು.  ಹವಾಮಾನ ವೈಪರಿತ್ಯದಿಂದ ಸಮಯವನ್ನು 10 ಗಂಟೆಗೆ ಬದಲಾವಣೆ ಮಾಡಲಾಗಿತ್ತು.

ಮೂರು ದಿನಗಳ ಕಾಲ 400 ಕಿಲೋಮೀಟರ್‌ಗಳಷ್ಟು ದೂರಕ್ಕೆ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವುದು ಗಗನಯಾನ ನೌಕೆಯ ಉದ್ದೇಶವಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

ಚಂದ್ರಯಾನ–3 ಯೋಜನೆಯ ಸಂದರ್ಭದಲ್ಲೂ ಇಸ್ರೋ ಇಂಥದ್ದೊಂದು ಪರೀಕ್ಷಾರ್ಥ ಪ್ರಯೋಗವನ್ನು ನಡೆಸಿತ್ತು. ಅದು ಇಸ್ರೊಗೆ ಯಶಸ್ಸು ತಂದುಕೊಟ್ಟಿತ್ತು. ಇದರ ಫಲವಾಗಿ ವಿಕ್ರಂ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ದಕ್ಷಿಣ ಧ್ರುವದ ಸಮೀಪ ಇಳಿಯಲು ಸಾಧ್ಯವಾಗಿತ್ತು. ಹೀಗಾಗಿ ಗಗನಯಾನ ಯೋಜನೆಯಲ್ಲಿ ಗಗನಯಾತ್ರಿಗಳ ಸುರಕ್ಷತೆಗಾಗಿ ಈ ಪ್ರಯೋಗ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X