ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

Date:

ಇಸ್ರೋ ಇಂದು (ಅಕ್ಟೋಬರ್ 21)ರ ಬೆಳಗ್ಗೆ 10.0 ಗಂಟೆ ಸುಮಾರಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಮಾನವಸಹಿತ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ.

- Advertisement -

ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್​ ಮಾಡೆಲ್​​ ಒಳಗೊಂಡ ಎರಡೂ ಮಾಡೆಲ್​ಗಳನ್ನು ಹೊತ್ತು ರಾಕೆಟ್​​​​​ ಸಾಗಿದ್ದು ನೌಕೆಯನ್ನು ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಹಾರಿಸಲಾಯಿತು. ನಂತರ ನೌಕೆಯು ಬಂಗಾಳ ಕೊಲ್ಲಿಯ ಸಮುದ್ರಕ್ಕೆ ಯಶಸ್ವಿಯಾಗಿ ಇಳಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಯೋಜನೆಯ ಯಶಸ್ಸನ್ನು ಘೋಷಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಸಿಬ್ಬಂದಿ ತಪ್ಪಿಸಿಕೊಳ್ಳುವ ವ್ಯವಸ್ಥೆಯನ್ನು ಪ್ರದರ್ಶಿಸುವುದು ಕಾರ್ಯಾಚರಣೆಯ ಉದ್ದೇಶವಾಗಿತ್ತು” ಎಂದು ಇಸ್ರೋ ಅಧ್ಯಕ್ಷ ಸೋಮನಾಥನ್‌ ತಿಳಿಸಿದ್ದಾರೆ.

ಗಗನಯಾನವನ್ನು ಬೆಳಿಗ್ಗೆ 8.45ಕ್ಕೆ ಉಡಾವಣೆಗೊಳಿಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಉಡಾವಣೆಗೂ 5 ಸೆಕೆಂಡ್‌ ಮೊದಲು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ನಂತರ ತಾಂತ್ರಿಕ ಸಮಸ್ಯೆಗಳನ್ನು ಪತ್ತೆಹಚ್ಚಿ ದೋಷಗಳನ್ನು ಸರಿಪಡಿಸಲಾಗಿತ್ತು.  ಹವಾಮಾನ ವೈಪರಿತ್ಯದಿಂದ ಸಮಯವನ್ನು 10 ಗಂಟೆಗೆ ಬದಲಾವಣೆ ಮಾಡಲಾಗಿತ್ತು.

ಮೂರು ದಿನಗಳ ಕಾಲ 400 ಕಿಲೋಮೀಟರ್‌ಗಳಷ್ಟು ದೂರಕ್ಕೆ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವುದು ಗಗನಯಾನ ನೌಕೆಯ ಉದ್ದೇಶವಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

ಚಂದ್ರಯಾನ–3 ಯೋಜನೆಯ ಸಂದರ್ಭದಲ್ಲೂ ಇಸ್ರೋ ಇಂಥದ್ದೊಂದು ಪರೀಕ್ಷಾರ್ಥ ಪ್ರಯೋಗವನ್ನು ನಡೆಸಿತ್ತು. ಅದು ಇಸ್ರೊಗೆ ಯಶಸ್ಸು ತಂದುಕೊಟ್ಟಿತ್ತು. ಇದರ ಫಲವಾಗಿ ವಿಕ್ರಂ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ದಕ್ಷಿಣ ಧ್ರುವದ ಸಮೀಪ ಇಳಿಯಲು ಸಾಧ್ಯವಾಗಿತ್ತು. ಹೀಗಾಗಿ ಗಗನಯಾನ ಯೋಜನೆಯಲ್ಲಿ ಗಗನಯಾತ್ರಿಗಳ ಸುರಕ್ಷತೆಗಾಗಿ ಈ ಪ್ರಯೋಗ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...