ವಂಚನೆ ಪ್ರಕರಣ: ಗೌತಮ್‌ ಗಂಭೀರ್‌ ವಿರುದ್ಧದ ತನಿಖೆಗೆ ನ್ಯಾಯಾಲಯ ಆದೇಶ

Date:

Advertisements

ಫ್ಲ್ಯಾಟ್ ಖರೀದಿದಾರರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಇತರರನ್ನು ಆರೋಪಮುಕ್ತಗೊಳಿಸಿದ್ದ ಆದೇಶವನ್ನು ರದ್ದು ಮಾಡಿರುವ ದೆಹಲಿ ನ್ಯಾಯಾಲಯ ಹೊಸದಾಗಿ ತನಿಖೆಗೆ ಆದೇಶಿಸಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ರದ್ದು ಮಾಡಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶವು ಗಂಭೀರ್ ವಿರುದ್ಧದ ಆರೋಪಗಳನ್ನು ನಿರ್ಧರಿಸುವಲ್ಲಿ ಅಸಮರ್ಪಕ ಅಭಿವ್ಯಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

‘ಗಂಭೀರ್ ಅವರ ಮೇಲೆ ಬಂದಿರುವ ಆರೋಪವು ವಂಚನೆಯಲ್ಲಿ ಅವರ ಪಾತ್ರದ ಬಗ್ಗೆ ತನಿಖೆಗೆ ಪುಷ್ಠಿ ಒದಗಿಸುತ್ತದೆ’ ಎಂದು ಆದೇಶದಲ್ಲಿ ಹೇಳಿದ್ದಾರೆ.

Advertisements

ರಿಯಲ್ ಎಸ್ಟೇಟ್ ಕಂಪನಿಗಳಾದ ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್, ಎಚ್‌ಆರ್‌ಐಪಿ ಲಿಮಿಟೆಡ್,ಯುಎಂಎಎಕೆ ಲಿಮಿಟೆಡ್ ಮತ್ತು ಕಂಪನಿಗಳ ಜಂಟಿ ಉದ್ಯಮದ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಗಂಭೀರ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಕುಟುಂಬದವರು ಮನೆಯಲ್ಲಿದ್ದಾಗಲೇ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಮನೆ ದರೋಡೆ: ಅಪಾರ ವಸ್ತು ಕಳವು

ಬ್ರಾಂಡ್ ಅಂಬಾಸಿಡರ್ ಆಗಿ ಹೂಡಿಕೆದಾರರೊಂದಿಗೆ ನೇರ ಸಂಪರ್ಕ ಹೊಂದಿರುವ ಏಕೈಕ ಆರೋಪಿ ಗಂಭೀರ್ ಆಗಿದ್ದು, ಆದರೂ ಅವರನ್ನು ಆರೋಪದಿಂದ ಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಗಂಭೀರ್ ಅವರನ್ನು ಆರೋಪದಿಂದ ಮುಕ್ತಗೊಳಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದಲ್ಲಿ, ಗಂಭೀರ್ ರುದ್ರಾ ಬಿಲ್ಡ್ವೆಲ್ ರಿಯಾಲ್ಟಿ ಪ್ರೈವೇಟ್‌ಗೆ ₹6 ಕೋಟಿ ಪಾವತಿಸಿರುವ ಮತ್ತು ಕಂಪನಿಯಿಂದ ₹4.85 ಕೋಟಿ ಪಡೆದಿರುವ ಬಗ್ಗೆ ಉಲ್ಲೇಖವಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ನಡೆದಿರುವ ವಂಚನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿಯಲ್ಲಿ ಅನುಸೂಚಿತ ಅಪರಾಧವಾಗಿರುವುದರಿಂದ, ಪ್ರಕರಣವನ್ನು ಇ.ಡಿ ತನಿಖೆ ಮಾಡಬೇಕಾದ ಅಗತ್ಯ ಬೀಳಬಹುದು ಎಂದು ನ್ಯಾಯಾಲಯ ಅಭಿಮತ ವ್ಯಕ್ತಪಡಿಸಿದೆ

ದೆಹಲಿಯ ರೌಸ್‌ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಚಾರಣಾ ನ್ಯಾಯಾಲಯ ನೀಡಿದ ಆದೇಶದ ವಿರುದ್ಧ ಮೂರು ಪರಿಶೀಲನಾ ಅರ್ಜಿಗಳನ್ನು ಅದೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X