ಅಣ್ಣನ ಜೊತೆ ಜಗಳ; ಕೋಪದಲ್ಲಿ ಮೊಬೈಲ್‌ ನುಂಗಿದ 15 ವರ್ಷದ ಬಾಲಕಿ!

Date:

ಸಹೋದರನ ಜೊತೆ ಜಗಳವಾಡಿದ ಬಾಲಕಿಯೊಬ್ಬಳು ಕೋಪದಲ್ಲಿ ಮೊಬೈಲ್‌ಅನ್ನು ನುಂಗಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.

ಮೊಬೈಲ್‌ ನುಂಗಿದ ಬಳಿಕ ವಿಪರೀತ ಹೊಟ್ಟೆ ನೋವು ಅನುಭವಿಸಿದ್ದ ಬಾಲಕಿಯನ್ನು ಗ್ವಾಲಿಯರ್‌ನ ಜಯಾರೋಗ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಬಾಲಕಿಯ ಹೊಟ್ಟೆಯಿಂದ ಫೋನ್ ಹೊರತೆಗೆದಿದ್ದಾರೆ.

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಅಮಯಾನ್ ಪ್ರದೇಶದ ನಿವಾಸಿಯಾಗಿರುವ ಬಾಲಕಿ ತನ್ನ ಅಣ್ಣನ ಜೊತೆ ಯಾವುದೋ ವಿಷಯಕ್ಕೆ ಜಗಳವಾಡಿದ್ದಳು. ಬಳಿಕ ಕೋಪಗೊಂಡು ತನ್ನ ಕೀಪ್ಯಾಡ್ ಮೊಬೈಲ್ ಫೋನ್ ನುಂಗಿದ್ದಾಳೆ. ಬಳಿಕ ವಿಪರೀತ ಹೊಟ್ಟೆನೋವಿನಿಂದ ಬಳಲಿದ ಬಾಲಕಿ, ಅತಿಯಾಗಿ ವಾಂತಿ ಮಾಡತೊಡಗಿದ್ದಳು. ಇದರಿಂದ ಆತಂಕಗೊಂಡ ಹೆತ್ತವರು ಬಾಲಕಿಯನ್ನು ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ ವಿಷಯದ ಗಂಭೀರತೆಯನ್ನು ಅರಿತ ವೈದ್ಯರು, ತಕ್ಷಣವೇ ಗ್ವಾಲಿಯರ್‌ನ ಜಯಾರೋಗ್ಯ ಆಸ್ಪತ್ರೆಗೆ ಕರೆದೊಯ್ಯವಂತೆ ಸೂಚಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Girl swallowed a Chinese cell phone

ಈ ಸುದ್ದಿ ಓದಿದ್ದೀರಾ?: ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

ಜೆಎಎಚ್‌ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಬಾಲಕಿಯನ್ನು ಅಲ್ಟ್ರಾಸೌಂಡ್, ಎಕ್ಸ್-ರೇ  ಹಾಗೂ ಸಿಟಿ ಸ್ಕ್ಯಾನ್ ಸೇರಿದಂತೆ  ಹಲವು ರೀತಿಯ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ಹೊಟ್ಟೆಯಲ್ಲಿ ಮೊಬೈಲ್ ಸಿಕ್ಕಿಹಾಕಿಕೊಂಡಿರುವುದು ಪತ್ತೆಯಾಗಿದೆ. ಸುಮಾರು ಒಂದು ಗಂಟೆಯ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರು ಬಾಲಕಿಯ ಹೊಟ್ಟೆಯಿಂದ ಮೊಬೈಲ್ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೊಬೈಲ್ ನುಂಗಿ ಆಸ್ಪತ್ರೆಗೆ ದಾಖಲಾದ ಮತ್ತು ಶಸ್ತ್ರಚಿಕಿತ್ಸೆ ಮಾಡಿ ಮೊಬೈಲ್ ಹೊರತೆಗೆದ ಮೊದಲ ಪ್ರಕರಣ ಇದಾಗಿದೆ ಎಂದು ಡಾ ನವೀನ್ ಕುಶ್ವಾಹಾ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...