ಕುನಾಲ್ ಕಾಮ್ರಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಲು ಒಪ್ಪಿಗೆ ನೀಡಿದ ಮಹಾರಾಷ್ಟ್ರ ವಿಧಾನ ಪರಿಷತ್

Date:

Advertisements

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧದ ಹಾಸ್ಯ ಮಾಡಿದ್ದಕ್ಕಾಗಿ ಪೊಲೀಸ್ ಪ್ರಕರಣ ಎದುರಿಸುತ್ತಿರುವ ಹಾಸ್ಯ ಕಲಾವಿದ ಮತ್ತೊಂದು ತೊಂದರೆಯಲ್ಲಿ ಸಿಲುಕಿಕೊಂಡಿದ್ದು, ಅವರ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಲು ರಾಜ್ಯ ವಿಧಾನ ಪರಿಷತ್ ಒಪ್ಪಿಗೆ ನೀಡಿದೆ.

“ವಿಶ್ವಾಸದ್ರೋಹಿ” ಎಂಬ ಪದ ಬಳಕೆಗಾಗಿ ಕುನಾಲ್ ಕಾಮ್ರಾ ವಿರುದ್ಧದ ಹಕ್ಕುಚ್ಯುತಿ ನೋಟಿಸನ್ನು ವಿಧಾನ ಪರಿಷತ್‌ನ ವಿಶೇಷ ಹಕ್ಕುಗಳ ಸಮಿತಿ ಒಪ್ಪಿಕೊಂಡಿದೆ ಎಂದು ಸಭಾಪತಿ ರಾಮ್ ಶಿಂಧೆ ತಿಳಿಸಿದ್ದಾರೆ.

ಸಂಸತ್ ಸದಸ್ಯರು ಅಥವಾ ಶಾಸಕರು ತಮ್ಮ ಕಾರ್ತವ್ಯಗಳನ್ನು ನಿಭಾಯಿಸಲು ಅಗತ್ಯವಾಗಿ ಹೊಂದಿರುವ ವಿಶೇಷ ಹಕ್ಕುಗಳು ಮತ್ತು ರಕ್ಷಣೆಯನ್ನು ಕಡೆಗಣಿಸುವ ಮತ್ತು ಅಗೌರವಿಸುವ ವ್ಯಕ್ತಿಗಳ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಬಹುದಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಆಘಾತಕಾರಿ ಘಟನೆ | ಮಹಿಳೆ ಮೇಲೆ 18 ಕಾಮುಕರಿಂದ 18 ತಿಂಗಳು ನಿರಂತರ ಸಾಮೂಹಿಕ ಅತ್ಯಾಚಾರ

ರಾಜ್ಯ ಪ್ರವಾಸೋದ್ಯಮ ಖಾತೆ ಸಚಿವ ಮತ್ತು ಶಿವಸೇನೆ ಮುಖಂಡ ಶಂಭುರಾಜ್ ದೇಸಾಯಿ ಈ ಬಗ್ಗೆ ಸುದ್ದಿಗಾರರಿಗೆ ಮಾತನಾಡಿ, ಕುನಾಲ್ ಕಾಮ್ರಾ ಅವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಜತೆಗೆ ಪಕ್ಷದ ಕಾರ್ಯಕರ್ತರ ತಾಳ್ಮೆ ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದರು.

ಎಲ್ಲರೂ ತಾಳ್ಮೆಯಿಂದ ಇರುವಂತೆ ಶಿಂಧೆ ತಾಕೀತು ಮಾಡಿದ್ದಾರೆ. ಆದ್ದರಿಂದ ನಾವು ಸುಮ್ಮನಿದ್ದೇವೆ. ಆತ ಎಲ್ಲೇ ಅಡಗಿಕೊಂಡಿದ್ದರೂ ಹೇಗೆ ಹೊರಗೆಳೆದು ತರಬೇಕು ಎನ್ನುವುದು ಶಿವಸೇನೆ ಕಾರ್ಯಕರ್ತರಿಗೆ ಗೊತ್ತು. ಆದರೆ ಸಚಿವರಾಗಿ ನಾವು ಕೆಲ ನಿರ್ಬಂಧಗಳನ್ನು ಹೊಂದಿದ್ದೇವೆ ಎಂದು ದೇಸಾಯಿ ತಿಳಿಸಿದ್ದಾರೆ.

“ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ. ಆತ ಎಲ್ಲೇ ಅಡಗಿದ್ದರೂ ಪತ್ತೆ ಮಾಡಿ ಆತನಿಗೆ “ಪ್ರಸಾದ ನೀಡಿ” ಎಂದು ಪೊಲೀಸರನ್ನು ದೇಸಾಯಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X