ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಕಂಪ್ಯೂಟರ್ ಆಮದಿಗೆ ಕೇಂದ್ರ ನಿರ್ಬಂಧ

Date:

Advertisements

ಕೇಂದ್ರ ಸರ್ಕಾರವು ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಿದೆ.

“ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್‌ ಕಂಪ್ಯೂಟರ್‌ಗಳು, ಎಚ್‌ಎಸ್‌ಎನ್ 8741 ಅಡಿಯಲ್ಲಿ ಬರುವ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಮತ್ತು ಸರ್ವರ್‌ಗಳ ಆಮದನ್ನು ನಿರ್ಬಂಧಿಸಲಾಗಿದೆ. ನಿರ್ಬಂಧಿತ ಆಮದುಗಳಿಗೆ ಮಾನ್ಯ ಪರವಾನಗಿ ಇದ್ದರೆ ಮಾತ್ರ ಆಮದನ್ನು ಅನುಮತಿಸಲಾಗುವುದು,” ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ.

ಆಮದು ನಿರ್ಬಂಧಿತ ವಸ್ತುಗಳನ್ನು ನೀವು ಆಮದು ಮಾಡಲು ಬಯಸಿದರೆ ಮಾನ್ಯ ಪರವಾನಗಿ ಇರಬೇಕಾಗುತ್ತದೆ. ಪರವಾನಗಿ ಇದ್ದರೆ ಮಾತ್ರ ಆಮದಿಗೆ ಅವಕಾಶ ನೀಡಲಾಗುತ್ತದೆ. ಬ್ಯಾಗೇಜ್ ನಿಯಮಗಳ ಅಡಿಯಲ್ಲಿ ಮಾಡಲಾಗುವ ಆಮದುಗಳ ಮೇಲೆ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಸರ್ಕಾರದ ಅಧಿಸೂಚನೆಯು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಒಂದು ಸೇರಿ ದೇಶದ 20 ವಿವಿ ನಕಲಿ : ಯುಜಿಸಿ ಘೋಷಣೆ

ಬ್ಯಾಗೇಜ್ ನಿಯಮಗಳು ಭಾರತೀಯ ಗಡಿಯನ್ನು ಪ್ರವೇಶಿಸುವ ಅಥವಾ ಗಡಿಯಿಂದ ಹೊರಹೋಗುವ ಪ್ರತಿಯೊಬ್ಬ ಪ್ರಯಾಣಿಕರಿಗೆ ಕಸ್ಟಮ್ಸ್ ತಪಾಸಣೆಯ ನಿಯಮ ಜಾರಿಗೊಳಿಸಲಾಗುತ್ತದೆ. ಪ್ರಮುಖವಾಗಿ ಸ್ಥಳೀಯವಾಗಿ ಈ ವಸ್ತುಗಳ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆಮದಿನ ಮೇಲೆ ನಿರ್ಬಂಧ ಹೇರಲಾಗಿದೆ. ಆಮದುಗಳು ಅನ್ವಯವಾಗುವ ಸುಂಕದ ಪಾವತಿಗೆ ಒಳಪಟ್ಟಿರುತ್ತವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆರ್‌ ಅಂಡ್ ಡಿ, ಟೆಸ್ಟಿಂಗ್, ರಿಪೇರಿ ಮತ್ತು ಪ್ರಾಡಕ್ಟ್‌ ಡೆವಲಪ್‌ಮೆಂಟ್‌ನಿಂದಾಗಿ ಆಮದು ಮಾಡಿಕೊಳ್ಳುವುದಾದರೆ 20 ವಸ್ತುಗಳನ್ನು ಆಮದು ಮಾಡಲು ಪರವಾನಗಿ ಇದ್ದಲ್ಲಿ ವಿನಾಯಿತಿ ಇರುತ್ತದೆ. ಈ ಆಮದು ವಸ್ತುಗಳನ್ನು ತಿಳಿಸಲಾದ ಉದ್ದೇಶಗಳಿಗೆ ಮಾತ್ರ ಬಳಕೆ ಮಾಡಬೇಕು ಮತ್ತು ಮಾರಾಟ ಮಾಡಲಾಗದು ಎಂಬ ಷರತ್ತಿನ ಮೇಲೆ ಮಾತ್ರ ಅನುಮತಿ ನೀಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X