ಸರ್ಕಾರದ ವಿದ್ಯಾರ್ಥಿ ವೇತನ ಇಂದಿನ ಶಿಕ್ಷಣದ ವೆಚ್ಚ ಪೂರೈಸಲು ಸಾಲದು: ಸಂಸದೀಯ ಸಮಿತಿ

Date:

Advertisements

ಸರ್ಕಾರ ನೀಡುವ ವಾರ್ಷಿಕ ವಿದ್ಯಾರ್ಥಿ ವೇತನವು ಇಂದಿನ ಕಾಲದಲ್ಲಿ ಶಿಕ್ಷಣದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ ಎಂದು ಸಂಸದೀಯ ಸ್ಥಾಯಿ ಸಮಿತಿಯು ಹೇಳಿದೆ. ಹಣದುಬ್ಬರವನ್ನು ನಿಯಂತ್ರಿಸಬೇಕಾದರೆ ವಿದ್ಯಾರ್ಥಿ ವೇತನದ ಮೊತ್ತವನ್ನು ಪರಿಶೀಲಿಸಬೇಕು ಎಂದು ಸಂಸದೀಯ ಸಮಿತಿ ಶಿಫಾರಸು ಮಾಡಿದೆ.

ಸೋಮವಾರ ಸಂಸತ್ತಿನಲ್ಲಿ ಸಮಿತಿಯು ತನ್ನ ವರದಿಯನ್ನು ಮಂಡಿಸಿದೆ. 2025-26ರ ಅನುದಾನ ಬೇಡಿಕೆಗಳ ಕುರಿತಾದ ತನ್ನ ಇತ್ತೀಚಿನ ವರದಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸ್ಥಾಯಿ ಸಮಿತಿಯು ಶಿಕ್ಷಣ ಸಚಿವಾಲಯ ಮತ್ತು ಇತರ ಪಾಲುದಾರರ ಸಹಯೋಗದೊಂದಿಗೆ ವಿದ್ಯಾರ್ಥಿ ವೇತನದ ಮೊತ್ತವನ್ನು ಪರಿಶೀಲಿಸುವಂತೆ ಇಲಾಖೆಗೆ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಮೈಸೂರು | ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

Advertisements

ಶಿಕ್ಷಣವನ್ನು ಮುಂದುವರಿಸಲು ವಿದ್ಯಾರ್ಥಿಗೆ ನೀಡಲಾಗುವ ವಾರ್ಷಿಕ ವಿದ್ಯಾರ್ಥಿ ವೇತನವು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಪ್ರಸ್ತುತ ಅಗತ್ಯವಿರುವ ವೆಚ್ಚವನ್ಜು ಪೂರೈಸುವಷ್ಟು ಇಲ್ಲ ಎಂದು ಸಮಿತಿಯು ಅಭಿಪ್ರಾಯಿಸಿದೆ.

ಹಾಗೆಯೇ ಅವಶ್ಯಕತೆ ಮತ್ತು ವಾಸ್ತವದಲ್ಲಿ ಹಂಚಲಾಗುವ ವಿದ್ಯಾರ್ಥಿ ವೇತನದ ನಡುವಿನ ವ್ಯತ್ಯಾಸವನ್ನು ಸಮಿತಿಯು ಉಲ್ಲೇಖಿಸಿದೆ. 2025-26ರ ಹಣಕಾಸು ವರ್ಷದಲ್ಲಿ 14,164.42 ಕೋಟಿ ರೂ.ಗಳ ಬಜೆಟ್ ಹಂಚಿಕೆ ಮಾಡಲಾಗಿದೆ. ಆದರೂ ಕೂಡಾ ಹಲವು ಯೋಜನೆಗಳಿಗೆ ಹಣದ ಕೊರತೆ ಕಂಡುಬಂದಿದೆ. ಇದರಿಂದಾಗಿ ಯೋಜನೆಯ ಲಾಭ ಅಧಿಕ ಜನರಿಗೆ ಲಭ್ಯವಾಗುತ್ತಿಲ್ಲ ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹಾಗೆಯೇ ಹಂಚಿಕೆಯಾದ ನಿಧಿಯನ್ನು ಸರಿಯಾಗಿ ಬಳಸುವ ಅಗತ್ಯವನ್ನು ಸಮಿತಿ ಒತ್ತಿ ಹೇಳಿದೆ. ಸರಿಯಾದ ಸಮಯಕ್ಕೆ ನಿಧಿ ಬಳಸದ ಕಾರಣ ಮತ್ತು ಯೋಜನೆ ಸರಿಯಾಗಿ ಜಾರಿ ಮಾಡದ ಕಾರಣದಿಂದಾಗಿ ಮೀಸಲಿಟ್ಟ ಹಣವು ಖರ್ಚಾಗದೆಯೇ ಉಳಿದಿದೆ ಎಂಬುದನ್ನು ಕೂಡಾ ವರದಿ ಹೇಳಿದೆ. ಇದೇ ಸಂದರ್ಭದಲ್ಲಿ ಪಾರದರ್ಶಕತೆಯ ಕೊರತೆಯನ್ನು ಕೂಡಾ ವರದಿ ಎತ್ತಿ ತೋರಿಸಿದೆ.

ಇದನ್ನು ಓದಿದ್ದೀರಾ? ಎಂಟು ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಜಮೀರ್ ಅಹಮದ್ ಖಾನ್

ಬಜೆಟ್ ಹಂಚಿಕೆ ವರ್ಷದಿಂದ ವರ್ಷಕ್ಕೆ ಕೊಂಚ ಪ್ರಮಾಣದಲ್ಲಿ ಅಧಿಕವಾಗುತ್ತಿದ್ದರೂ ವಿವಿಧ ಯೋಜನೆಗಳಿಗೆ ಹಣವನ್ನು ಸರಿಯಾಗಿ ಬಳಸಲಾಗಿಲ್ಲ ಎಂದು ಸಮಿತಿಯು ಹೇಳಿದೆ.

2022-23ರಲ್ಲಿ 6,410.09 ಕೋಟಿ ರೂ. ಮತ್ತು 2023-24 ರಲ್ಲಿ 7,830.26 ಕೋಟಿ ರೂ.ಗಳನ್ನು ವಿವಿಧ ಶೈಕ್ಷಣಿಕ ಯೋಜನೆಗಳಿಗಾಗಿ ಇಲಾಖೆಯ ವೆಚ್ಚ ಮಾಡಿದೆ ಎಂದು ಸಮಿತಿ ಉಲ್ಲೇಖಿಸಿದೆ. ಆದರೆ ವಿವಿಧ ಯೋಜನೆಗಳಿಗೆ ನಿಧಿ ಬಳಿಕ ಪದೇ ಪದೇ ಕಡಿಮೆಯಾಗುತ್ತಿರುವುದು ಸಮಸ್ಯೆಯಾಗಿದೆ. 2025ರ ಫೆಬ್ರವರಿವರೆಗೆ ಶೈಕ್ಷಣಿಕ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಇಲಾಖೆಯು ಕೇವಲ 3,403.51 ಕೋಟಿ ರೂ.ಗಳನ್ನು ಮಾತ್ರ ಖರ್ಚು ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X