ಒಡಿಶಾ | ರಾತ್ರಿಯಿಡೀ ಕಾಲುನಡಿಗೆಯಲ್ಲೇ 28 ಕಿ.ಮೀ ಸಾಗಿ ವಧುವಿನ ಗ್ರಾಮ ತಲುಪಿದ ವರ

Date:

Advertisements
  • ರಾಯಗಢದ ವಧುವಿನ ಗ್ರಾಮದಲ್ಲಿ ನಿಗದಿಯಾಗಿದ್ದ ವಿವಾಹ
  • ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವ ಚಾಲಕರ ಸಂಘ

ಚಾಲಕರ ಮುಷ್ಕರದ ಹಿನ್ನೆಲೆ ಮರುದಿನ ವಿವಾಹವಾಗಬೇಕಿದ್ದ ವರ ಹಾಗೂ ಆತನ ಕುಟುಂಬ ರಾತ್ರಿಯಿಡೀ 28 ಕಿ.ಮೀ ಕಾಲು ನಡಿಗೆಯಲ್ಲೇ ವಧುವಿನ ಗ್ರಾಮ ಸೇರಿದ ಅಪರೂಪದ ಘಟನೆ ಒಡಿಶಾದಲ್ಲಿ ಶುಕ್ರವಾರ (ಮಾರ್ಚ್ 17) ವರದಿಯಾಗಿದೆ.

ರಾಯಗಢ ಜಿಲ್ಲೆಯಲ್ಲಿ ವಧುವಿನ ಗ್ರಾಮದಲ್ಲಿ ವಿವಾಹ ನಿಗದಿಯಾಗಿತ್ತು. ಗುರುವಾರ (ಮಾರ್ಚ್ 16) ಚಾಲಕರು ಮುಷ್ಕರ ಹೂಡಿದ್ದ ಕಾರಣ ವಧುವಿನ ಗ್ರಾಮಕ್ಕೆ ತೆರಳಲು ವರನ ಕುಟುಂಬದವರಿಗೆ ಯಾವ ವಾಹನ ಸೌಲಭ್ಯವೂ ದೊರೆಯಲಿಲ್ಲ. ವಿವಾಹ ಮಹೋತ್ಸವಕ್ಕೆ ತೆರಳಬೇಕಾದ ಅನಿವಾರ್ಯತೆ ಕಾರಣ ವರನ ಕುಟುಂಬ ಕಾಲುನಡಿಗೆ ಮೂಲಕ ತೆರಳಲು ನಿರ್ಧರಿಸಿತು.

ಕಲ್ಯಾಣ್‌ಸಿಂಗ್‌ಪುರದ ಬ್ಲಾಕ್‌ನ ಸುನಖಂಡಿ ಪಂಚಾಯತ್‌ನಿಂದ ದಿಬಲಪಾಡು ಗ್ರಾಮವನ್ನು ತಲುಪಲು ಕೆಲವು ಮಹಿಳೆಯರೂ ಸೇರಿದಂತೆ ವರ ಹಾಗೂ ಆತನ ಕುಟುಂಬ ಗುರುವಾರ ರಾತ್ರಿ ಇಡೀ ಕಾಲುನಡಿಗೆಯಲ್ಲಿ ಸಾಗಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Advertisements

“ಚಾಲಕರ ಮುಷ್ಕರದಿಂದಾಗಿ ಸಂಚಾರ ಸೌಲಭ್ಯ ಇರಲಿಲ್ಲ. ನಾವು ಇಡೀ ರಾತ್ರಿ ಕಾಲು ನಡಿಗೆಯ ಮೂಲಕ ಸಾಗಿ ವಧುವಿನ ಗ್ರಾಮ ತಲುಪಿದೆವು. ನಮ್ಮ ಬಳಿ ಬೇರೆ ಆಯ್ಕೆ ಇರಲಿಲ್ಲ” ಎಂದು ವರನ ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ಇಬ್ಬರ ವಿವಾಹ ಶುಕ್ರವಾರ ಬೆಳಿಗ್ಗೆ ಜರುಗಿದೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನದ ಯುವಕನಿಗೆ ಯಶಸ್ವಿ ತೋಳು ಕಸಿ ಶಸ್ತ್ರಚಿಕಿತ್ಸೆ; ಏಷ್ಯಾದಲ್ಲೇ ಮೊದಲೆಂಬ ಹೆಗ್ಗಳಿಕೆ

ವಿವಾಹದ ನಂತರ ತಮ್ಮ ಗ್ರಾಮಕ್ಕೆ ಹಿಂತಿರುಗಲು ಚಾಲಕರ ಸಂಘ ಮುಷ್ಕರ ಹಿಂಪಡೆಯುವುದನ್ನು ಕಾಯುತ್ತ ವಧುವಿನ ನಿವಾಸದಲ್ಲಿ ಉಳಿದಿದೆ.

ವಿಮೆ ಸೌಲಭ್ಯ, ನಿವೃತ್ತಿ ವೇತನ, ಕಲ್ಯಾಣ ಮಂಡಳಿ ರಚನೆ ಮೊದಲಾದ ಬೇಡಿಕೆಗಳಿಗೆ ಆಗ್ರಹಿಸಿ ಚಾಲಕ ಏಕತಾ ಮಹಾಸಂಘವು ಬುಧವಾರದಿಂದ (ಮಾರ್ಚ್ 15) ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಚಾಲಕರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X