‘ಆತ್ಮಗೌರವಕ್ಕಿಂತ ಯಾವುದೂ ದೊಡ್ಡದಲ್ಲ’; ಗುಜರಾತ್ ಬಿಜೆಪಿ ಶಾಸಕ ರಾಜೀನಾಮೆ

Date:

Advertisements

ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿದೆ. ಈ ನಡುವೆ ಗುಜರಾತ್‌ನ ಬಿಜೆಪಿ ಶಾಸಕ ಕೇತನ್ ಇನಾಮದಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ನಾನು ನನ್ನ ಒಳದನಿ ಏನು ಹೇಳುತ್ತದೋ ಅದನ್ನು ಮಾಡಿದ್ದೇನೆ. ಆತ್ಮಗೌರವಕ್ಕಿಂತ ಯಾವುದೂ ದೊಡ್ಡದಲ್ಲ” ಎಂದು ಹೇಳಿದ್ದಾರೆ.

ತನ್ನ ರಾಜೀನಾಮೆಗೆ ಯಾರ ಒತ್ತಡವೂ ಇಲ್ಲ ಎಂದು ಕೇತನ್ ಇನಾಮದಾರ್ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಡೋದರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಂಜನ್ ಭಟ್ ಗೆಲುವಿಗಾಗಿಯೂ ನಾನು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ವಡೋದರಾ ಜಿಲ್ಲೆಯ ಸಾವ್ಲಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಶಾಸಕರಾದ ಕೇತನ್ ಇನಾಮದಾರ್ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ಪತ್ರದಲ್ಲಿ ತನ್ನ ಒಳದನಿಯನ್ನು ಕೇಳಿ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.

Advertisements

ಜನವರಿ 2020ರಲ್ಲಿಯೂ ಕೇತನ್ ಇನಾಮದಾರ್ ರಾಜೀನಾಮೆ ಘೋಷಿಸಿದ್ದರು. ಆದರೆ ಇದನ್ನು ಸ್ಪೀಕರ್ ಸ್ವೀಕರಿಸಿರಲಿಲ್ಲ. ಮಂಗಳವಾರ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕೇತನ್ “ಇದು ಯಾರದೇ ಒತ್ತಡದಿಂದಾಗಿ ತೆಗೆದುಕೊಂಡ ನಿರ್ಧಾರವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಹಳೆಯ ಕಾರ್ಯಕರ್ತರನ್ನು ಪಕ್ಷವು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳುತ್ತಿಲ್ಲ ಎಂದು ನನಗೆ ದೀರ್ಘ ಸಮಯದಿಂದ ಅನಿಸುತ್ತಿದೆ. ನಾನು ನಾಯಕತ್ವಕ್ಕೆ ಇದರ ಬಗ್ಗೆ ತಿಳಿಸಿದ್ದೇನೆ” ಎಂದು ಹೇಳಿರುವ ಕೇತನ್, “11 ವರ್ಷಗಳಿಂದ ಸಾವ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದು ಈಗ ಪಕ್ಷದೊಂದಿಗೆಯೇ ಉಳಿಯಲಿದ್ದೇನೆ” ಎಂದಿದ್ದಾರೆ.

“ಆದರೆ ನಾನು 2020ರಲ್ಲಿ ಹೇಳಿದಂತೆ ನಮ್ಮ ಆತ್ಮಗೌರವಕ್ಕಿಂತ ಯಾವುದೂ ದೊಡ್ಡದಲ್ಲ. ಹಾಗೆಯೇ ಇದು ಬರೀ ಕೇತನ್ ಇನಾಮದಾರ್ ಧ್ವನಿಯೇನಲ್ಲ. ಪಕ್ಷದ ಎಲ್ಲ ಕಾರ್ಯಕರ್ತರ ಧನಿಯಾಗಿದೆ. ಪಕ್ಷದ ಹಳೆಯ ಕಾರ್ಯಕರ್ತರನ್ನು ಕಡೆಗಣಿಸಬಾರದು ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ” ಎಂದರು.

ಬಿಜೆಪಿ ಪ್ರಸ್ತುತ 182 ವಿಧಾನಸಭೆ ಸೀಟುಗಳ ಪೈಕಿ 156 ಸೀಟುಗಳನ್ನು ಹೊಂದಿದೆ. ಮೇ 7ರಂದು ಗುಜರಾತ್‌ನ 26 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ಮಾಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X