ಒತ್ತುವರಿ ಆರೋಪ: ಮಾಜಿ ಕ್ರಿಕೆಟಿಗ, ಟಿಎಂಸಿ ಸಂಸದ ಯೂಸುಫ್ ಪಠಾಣ್‌ಗೆ ನೋಟಿಸ್

Date:

Advertisements

ಗುಜರಾತ್‌ನ ಬಿಜೆಪಿ ಆಡಳಿತವಿರುವ ವಡೋದರ ಮಹಾನಗರ ಪಾಲಿಕೆ(ವಿಎಂಸಿ) ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ನೂತನವಾಗಿ ಪಶ್ಚಿಮ ಬಂಗಾಳದಿಂದ ಆಯ್ಕೆಯಾಗಿರುವ ಸಂಸದ ಯೂಸುಫ್‌ ಪಠಾಣ್‌ ಅವರಿಗೆ ಪಾಲಿಕೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪದ ಮೇಲೆ ನೋಟಿಸ್ ನೀಡಿದೆ.

ಬಿಜೆಪಿಯ ಮಾಜಿ ಪಾಲಿಕೆ ಸದಸ್ಯರಾದ ವಿಜಯ್‌ ಪವಾರ್‌ ದೂರಿನ ಮೇರೆಗೆ ವಿಎಂಸಿಯ ಸ್ಥಾಯಿ ಸ್ಥಮಿತಿ ಅಧ್ಯಕ್ಷರಾದ ಶೀತಲ್‌ ಮಿಸ್ತ್ರಿ ಅವರು ಜೂನ್‌ 6 ರಂದು ನೋಟಿಸ್‌ ಜಾರಿಗೊಳಿಸಿದ್ದಾರೆ.

“ನಮಗೆ ಯೂಸುಫ್ ಪಠಾಣ್ ಅವರ ಮೇಲೆ ಯಾವುದೇ ದ್ವೇಷವಿಲ್ಲ. ಮಾಜಿ ಕ್ರಿಕೆಟಿಗರ ಬಳಿಯಿರುವ ಜಾಗ ವಿಎಂಸಿ ವ್ಯಾಪ್ತಿಗೆ ಸೇರಿದೆ. ಒತ್ತುವರಿ ಮಾಡಿಕೊಂಡಿರುವ ವಿಎಂಸಿಯ ಜಾಗವನ್ನು 2012ರಲ್ಲಿ ನಿರ್ಮಾಣ ಕಾಮಗಾರಿ ಪ್ರಯುಕ್ತ ತಮಗೆ ನೀಡುವಂತೆ ಪ್ರತಿ ಚದುರ ಮೀಟರ್‌ಗೆ 57 ಸಾವಿರ ರೂ. ನೀಡುವುದಾಗಿ ತಿಳಿಸಿದ್ದರು. ಆದರೆ ವಿಎಂಸಿ ಆಡಳಿತ ಮಂಡಳಿ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ ಅನುಮತಿ ನೀಡಿರಲಿಲ್ಲ” ಎಂದು ವಿಜಯ್‌ ಪವಾರ್‌ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಒತ್ತುವರಿ ಜಾಗಕ್ಕೆ ಯೂಸುಫ್‌ ಪಠಾಣ್‌ ತಂತಿ ಬೇಲಿಯನ್ನು ಅಳವಡಿಸಿಕೊಂಡಿದ್ದು, ಪಾಲಿಕೆರ ಅಧಿಕಾರಿಗಳ ತನಿಖೆ ವೇಳೆ ತಿಳಿದುಬಂದಿದೆ. ನಂತರದಲ್ಲಿ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಪವಾರ್‌ ತಿಳಿಸಿದ್ದಾರೆ.

“ಜಾಗ ತೆರವುಗೊಳಿಸಲು ನೋಟಿಸ್‌ ಜಾರಿಗೊಳಿಸಿದ್ದು, ಕೆಲವು ವಾರಗಳ ಕಾಲ ನಾವು ಕಾಯುತ್ತೇವೆ. ಜಾಗವನ್ನು ಬಿಡದಿದ್ದಲ್ಲಿ ಮುಂದಿನ ಕ್ರಮ ಜರುಗಿಸುವ ಬಗ್ಗೆ ನಿರ್ಧರಿಸಲಾಗುತ್ತದೆ” ಎಂದು ಶೀತಲ್‌ ಮಿಸ್ತ್ರಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X