ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ನೀಡಬೇಕಾಗಿಲ್ಲ ಎಂದ ಗುಜರಾತ್ ಹೈಕೋರ್ಟ್; ಕೇಜ್ರಿವಾಲ್‌ಗೆ ₹25 ಸಾವಿರ ದಂಡ

Date:

  • ಮುಖ್ಯ ಮಾಹಿತಿ ಆಯೋಗದ  ಆದೇಶ ರದ್ದುಗೊಳಿಸಿರು ಹೈಕೋರ್ಟ್
  • ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಒದಗಿಸಲು ನಿರ್ದೇಶನ ನೀಡಿದ್ದ ಸಿಐಸಿ

ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಒದಗಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಏಕಸದಸ್ಯ ಪೀಠವು ಮುಖ್ಯ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ರದ್ದುಗೊಳಿಸಿದೆ. ಜೊತೆಗೆ ನವದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ₹25 ಸಾವಿರ ದಂಡ ವಿಧಿಸಿದೆ.

ಪ್ರಧಾನ ಮಂತ್ರಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ (ಪಿಐಒ), ಗುಜರಾತ್ ವಿಶ್ವವಿದ್ಯಾಲಯ ಹಾಗೂ ದೆಹಲಿ ವಿಶ್ವವಿದ್ಯಾಲಯದ ಪಿಐಒಗಳಿಗೆ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವರಗಳನ್ನು ಒದಗಿಸುವಂತೆ ಆಯೋಗ ನಿರ್ದೇಶಿಸಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರ ಸ್ನಾತಕೋತ್ತರ ಪದವಿಗೆ ಸಂಬಂಧಿಸಿ ಕೇಂದ್ರ ಮಾಹಿತಿ ಆಯೋಗದ ಈ ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಾಂಬೆ ಐಐಟಿ ದಲಿತ ವಿದ್ಯಾರ್ಥಿ ದರ್ಶನ್ ತಂದೆಗೆ ಪೊಲೀಸರಿಂದ ಕಿರುಕುಳ; ಮಹಾರಾಷ್ಟ್ರ ಸಿಎಂಗೆ ಪತ್ರ

ಪ್ರಧಾನಿ ಮೋದಿ ಅವರ ಎಂಎ ಪದವಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಒದಗಿಸಲು ಗುಜರಾತ್ ವಿಶ್ವವಿದ್ಯಾಲಯಕ್ಕೆ 2016ರಲ್ಲಿ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನಿರ್ದೇಶನ ನೀಡಿತ್ತು. ಪ್ರಧಾನಿ ಅವರ ಪದವಿ ವಿವರವನ್ನು ಒದಗಿಸಲು ಆದೇಶಿಸುವಂತೆ ನವದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸಿಐಸಿಗೆ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್ ಅವರಿಗೆ ವಿಧಿಸಿರುವ ದಂಡವನ್ನು ಗುಜರಾತ್ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಈ ತೀರ್ಪಿಗೆ ತಡೆ ನೀಡಲು ಕೂಡ ನ್ಯಾಯಮೂರ್ತಿ ಬೈರನ್ ವೈಷ್ಣವ್ ಅವರ ಪೀಠ ನಿರಾಕರಿಸಿದೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ಮೋದಿ ಅವರ ಸ್ನಾತಕೋತ್ತರ ಪದವಿಯ ವಿವರಗಳನ್ನು ನೀಡುವಂತೆ 2016ರಲ್ಲಿ ಗುಜರಾತ್ ವಿಶ್ವವಿದ್ಯಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಸೂಚನೆ ನೀಡಿತ್ತು.

ವಿಶ್ವವಿದ್ಯಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ, “ನೀವು ನಾಮನಿರ್ದೇಶನವನ್ನು (ಚುನಾವಣೆಯಲ್ಲಿ ಸಲ್ಲಿಸಿದ) ನೋಡಿದರೆ ಅದು ಅವರ ಶೈಕ್ಷಣಿಕ ಅರ್ಹತೆ ಉಲ್ಲೇಖಿಸುತ್ತದೆ. ಹೀಗಾಗಿ, ನಾವು ಪದವಿ ಪ್ರಮಾಣಪತ್ರ ಕೇಳುತ್ತಿದ್ದೇವೆ, ವಿನಾ ಅಂಕಪಟ್ಟಿ ಅಲ್ಲ” ಎಂದು ವಾದಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಪ್ರಕಾರ, ಅವರು 1978ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಪದವಿ ಮತ್ತು 1983ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡಮಾರುತ | ತಮಿಳುನಾಡಿನಲ್ಲಿ ಹೈ ಅಲರ್ಟ್‌; ಶಾಲಾ-ಕಾಲೇಜು ರಜೆ ಘೋಷಣೆ

ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿದೆ. ಈ ಹಿನ್ನೆಲೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನತ್ತ...

ಮಿಚಾಂಗ್ ಚಂಡಮಾರುತಕ್ಕೆ ಆಂಧ್ರ – ತಮಿಳುನಾಡು ತತ್ತರ; 120 ರೈಲುಗಳ ಸಂಚಾರ ರದ್ದು

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ...

ಅಧಿಕೃತ ಚುನಾವಣಾ ಫಲಿತಾಂಶ ಪ್ರಕಟಿಸಿದ ಆಯೋಗ: ಯಾವ ರಾಜ್ಯಗಳಲ್ಲಿ ಯಾರಿಗೆ ಎಷ್ಟು ಸ್ಥಾನ?

ಇಂದು ಪ್ರಕಟಗೊಂಡ ಚುನಾವಣಾ ಫಲಿತಾಂಶಗಳ ಬಗ್ಗೆ ಚುನಾವಣಾ ಆಯೋಗ ಎಲ್ಲ ರಾಜ್ಯಗಳ...

ಈ ಫಲಿತಾಂಶ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮುನ್ಸೂಚನೆ: ಪ್ರಧಾನಿ ನರೇಂದ್ರ ಮೋದಿ

'ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವು 2024ರ...