ಕೋರ್ಟ್‌ನಲ್ಲಿ ನ್ಯಾಯಾಧೀಶೆಯನ್ನು ನಿಂದಿಸಿದ ನ್ಯಾಯಾಧೀಶ; 2 ದಿನಗಳ ಬಳಿಕ ಕ್ಷಮೆಯಾಚಿಸಿದ ಜಡ್ಜ್‌

Date:

Advertisements

ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯವಿದ್ದ ಕಾರಣ ಹಿರಿಯ ನ್ಯಾಯಾಧೀಶರೊಬ್ಬರು ತಮ್ಮ ಸಹೋದ್ಯೋಗಿ ನ್ಯಾಯಾಧೀಶೆಯನ್ನು ನಿಂದಿಸಿರುವ ಘಟನೆ ಗುಜರಾತ್‌ ಹೈಕೋರ್ಟ್‌ನಲ್ಲಿ ನಡೆದಿದೆ. ನಿಂದನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಎರಡು ದಿನಗಳ ಬಳಿಕ ಕ್ಷಮೆಯಾಚಿಸಿದ್ದಾರೆ.

ಹೈಕೋರ್ಟ್‌ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು ತಮ್ಮ ಸಹೋದ್ಯೋಗಿಯನ್ನು ಸೋಮವಾರ ನ್ಯಾಯಾಲಯದಲ್ಲಿ ನಿಂದಿಸಿದ್ದರು. ಘಟನೆ ಸಂಬಂಧ ಬುಧವಾರ ವಿಷಾಧ ವ್ಯಕ್ತಪಡಿಸಿದ್ದು, ನ್ಯಾಯಾಧೀಶೆ ಬಳಿ ಕ್ಷಮೆ ಕೇಳಿದ್ದಾರೆ. (ದಸರಾ ನಿಮಿತ್ತ ಮಂಗಳವಾರ ರಜೆ ಇತ್ತು)

ಸೋಮವಾರ ಪ್ರಕರಣವೊಂದರ ಸಂಬಂಧ ನ್ಯಾಯಮೂರ್ತಿ ವೈಷ್ಣವ್ ಅವರು ನ್ಯಾಯಾಧೀಶೆ ಮೌನಾ ಭಟ್ ಅವರೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ್ದರು. ಪ್ರಕರಣದ ಆದೇಶ ನೀಡುವಾಗ ಭಟ್ ಅವರು ವೈಷ್ಣವ್ ಅವರ ನಿಲುವನ್ನು ಒಪ್ಪಿರಲಿಲ್ಲ. ಆ ಕಾರಣಕ್ಕೆ ಅವರ ಮೇಲೆ ನಿಂದನಾತ್ಮಕವಾಗಿ ಮಾತನಾಡಿದ್ದರು.

Advertisements

“ಸೋಮವಾರ ನಡೆದದ್ದು ಆಗಬಾರದಿತ್ತು. ನಾನು ತಪ್ಪು ಮಾಡಿದೆ. ಅದಕ್ಕಾಗಿ ಕ್ಷಮಿಸಿ.  ನಾವು ಹೊಸ ವಿಚಾರಣೆಗಳನ್ನು ಪ್ರಾರಂಭಿಸೋಣ” ಎಂದು ನ್ಯಾಯಮೂರ್ತಿ ವೈಷ್ಣವ್ ಅವರು ನ್ಯಾಯಮೂರ್ತಿ ಮೌನ ಭಟ್ ಅವರ ಎದುರು ಕ್ಷಮೆ ಕೇಳಿದ್ದಾರೆ.

ನ್ಯಾಯಮೂರ್ತಿಗಳಾದ ವೈಷ್ಣವ್ ಮತ್ತು ಭಟ್ ಅವರ ನಡುವಿನ ಮಾತಿನ ಚಕಮಕಿ ನಡೆದಿದ್ದ ವಿಡಿಯೋವನ್ನು ಗುಜರಾತ್ ಹೈಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಿಂದ ತೆಗೆದುಹಾಕಲಾಗಿದೆ, ಘಟನೆಗೆ ಸಂಬಂಧಿಸಿದ ವೈರಲ್‌ ವಿಡಿಯೋದಲ್ಲಿ ನ್ಯಾಯಮೂರ್ತಿ ಭಟ್ ಅವರು ನ್ಯಾಯಮೂರ್ತಿ ವೈಷ್ಣವ್‌ಗೆ ಏನೋ ಹೇಳುತ್ತಿರುವುದು ಕಾಣಿಸುತ್ತದೆ.

ಈ ವೇಳೆ ನ್ಯಾಯಮೂರ್ತಿ ವೈಷ್ಣವ್, “ಹಾಗಾದರೆ ನೀವು ಭಿನ್ನಾಭಿಪ್ರಾಯ ಹೊಂದಿದ್ದೀರಿ… ನಾವು ಒಂದು ವಿಚಾರದಲ್ಲಿ ಭಿನ್ನವಾಗಿದ್ದೇವೆ ಇನ್ನೊಂದರಲ್ಲಿಯೂ ಭಿನ್ನವಾಗಿರಬಹುದು” ಎಂದು ಸಿಟ್ಟಿನಿಂದ ಹೇಳಿದ್ದಾರೆ. ಆಗ ನ್ಯಾಯಮೂರ್ತಿ ಭಟ್, ‘ಇದು ಭಿನ್ನಾಭಿಪ್ರಾಯದ ಪ್ರಶ್ನೆಯಲ್ಲ’ ಎಂದರು. ಇದಕ್ಕೆ ನ್ಯಾಯಮೂರ್ತಿ ವೈಷ್ಣವ್, “ಹಾಗಾದರೆ ಗೊಣಗಬೇಡಿ, ನೀವು ಪ್ರತ್ಯೇಕ ಆದೇಶ ನೀಡಿ, ನಾವು ಬೇರೆ ವಿಷಯಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಹೇಳಿರುವುದು ಕಂಡುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X