ಗುಜರಾತ್ | ಕಾಗದದಲ್ಲೇ 1,906 ಶೌಚಾಲಯ ಕಟ್ಟಿದ ಪುರಸಭೆ; ಅಚ್ಚರಿಯಲ್ಲ – ಹಗರಣ!

Date:

Advertisements

ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್‌ನ ಭರೂಚ್‌ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ ಸೃಷ್ಟಿಸಿ, ಸುಮಾರು 2 ಕೋಟಿ ರೂ. ಹಣ ಲೂಟಿ ಮಾಡಲಾಗಿದೆ.

ಆರ್‌ಟಿಐ ಕಾರ್ಯಕರ್ತ, ನಿವೃತ್ತ ಶಿಕ್ಷಕ ಪ್ರವೀಣ್ ಮೋದಿ ಅವರು ಈ ಹಗರಣವನ್ನು ಬಯಲಿಗೆಳೆದಿದ್ದಾರೆ. ಪ್ರತಿ ಮನೆಗೂ ಶೌಚಾಲಯ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರವು ನೀಡಿದ್ದ ಅನುದಾನದಲ್ಲಿ ಪುರಸಭೆಯವರು ಅಕ್ರಮ ಎಸಗಿದ್ದಾರೆ. ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಹಣ ಲಪಟಾಯಿಸಿದ್ದಾರೆ ಎಂದು ಪ್ರವೀಣ್ ಮೋದಿ ಆರೋಪಿಸಿದ್ದಾರೆ.

“ಐದು ಖಾಸಗಿ ಟ್ರಸ್ಟ್‌ಗಳಾದ ಆನಂದ್ ಕಡಿ ಗ್ರಾಮೋಧ್ಯೋಗ್ ಟ್ರಸ್ಟ್, ನವಚೇತನ ವಿಕಾಸ್ ಟ್ರಸ್ಟ್, ಕಾಮದಾರ್ ಕಲ್ಯಾಣ್ ಮಂಡಲ್, ಮಹಾತ್ಮಾ ಗಾಂಧಿ ಗ್ರಾಮನಿರ್ಮಾಣ ಟ್ರಸ್ಟ್ ಹಾಗೂ ವಸುಂಧರಾ ಸಾರ್ವಜನಿಕ ಟ್ರಸ್ಟ್‌ ಮೂಲಕ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 1,906 ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅಂಕಲೇಶ್ವರ ಪುರಸಭೆಯ ದಾಖಲೆಗಳಲ್ಲಿ ವಿವರಿಸಲಾಗಿದೆ. ಆದರೆ, ದಾಖಲೆಗಳಲ್ಲಿ ಉಲ್ಲೇಖಿಸಿರುವ ಹಲವು ಸ್ಥಳಗಳಲ್ಲಿ ಯಾವುದೇ ಶೌಚಾಲಯವನ್ನು ನಿರ್ಮಿಸಲಾಗಿಲ್ಲ. ವಿವಾಹ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ಸಮಯದಲ್ಲಿ ನೀಡಲಾಗಿದ್ದ ಆಧಾರ್‌ ಕಾರ್ಡ್‌ನಂತಹ ಗುರುತಿನ ಚೀಟಿಗಳನ್ನು ಪುರಸಭೆಯಲ್ಲಿ ಅಕ್ರಮಕ್ಕೆ ಬಳಸಿಕೊಳ್ಳಲಾಗಿದೆ” ಎಂದು ಪ್ರವೀಣ್ ಆಪಾದಿಸಿದ್ದಾರೆ.

Advertisements

ಗಮನಾರ್ಹ ವಿಚಾರವೆಂದರೆ, “ಐಷಾರಾಮಿ ಬಂಗಲೆಗಳಲ್ಲಿ ವಾಸಿಸುತ್ತಿರುವವರಿಗೂ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ದಾಖಲೆಗಳನ್ನು ಉಲ್ಲೇಖಿಸಲಾಗಿದೆ. ಆದರೆ, ಉಲ್ಲೇಖಿತ ಐಷಾರಾಮಿ ಕುಟುಂಬಗಳು ಯಾವುದೇ ರೀತಿಯ ಸಹಾಯಧನಕ್ಕಾಗಿ ಅರ್ಜಿಗಳನ್ನೇ ಸಲ್ಲಿಸಿಲ್ಲ” ಎಂದು ಅವರು ವಿವರಸಿದ್ದಾರೆ.

ಈ ಲೇಖನ ಓದಿದ್ದೀರಾ?: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಅನುಮಾನ – ವಿವಾದಗಳದೇ ಮೇಲುಗೈ!

“2012ರಲ್ಲಿ ವಿವಾಹವಾಗಿದ್ದ ನೀರವ್ ಮತ್ತು ಕ್ರಿಮಾ ಹಜಾರಿವಾಲಾ ಅವರು ವಿವಾಹ ಪ್ರಮಾಣಪತ್ರಕ್ಕಾಗಿ ಆಧಾರ್ ಕಾರ್ಡ್‌ ಸಲ್ಲಿಸಿದ್ದರು. ಅದನ್ನು ದುರುಪಯೋಗ ಮಾಡಿಕೊಂಡು, ಶೌಚಾಲಯಕ್ಕೆ ಸಹಾಯಧನ ನೀಡಿರುವುದಾಗಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಆದರೆ, ನೀರವ್ ಕುಟುಂಬವು ತಾವು ಯಾವುದೇ ಸಹಾಯಧನ ಪಡೆದಿಲ್ಲ. ಅದಕ್ಕಾಗಿ ಅರ್ಜಿಯನ್ನೂ ಸಲ್ಲಿಸಿಲ್ಲ. ಇದು ನಮ್ಮ ಗೌರವಕ್ಕೆ ಧಕ್ಕೆ ತಂದಿದೆ. ಪುರಸಭೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೀರವ್ ಒತ್ತಾಯಿಸಿದ್ದಾರೆ. ಇಂತಹ ಹಲವಾರು ವಿಚಾರಗಳಿಗಾಗಿ ಅರ್ಜಿ ಸಲ್ಲಿಸಿದ್ದವರ ಆಧಾರ್‌ ಕಾರ್ಡ್‌ಗಳ ದುರುಪಯೋಗವಾಗಿದ್ದು, ಅಕ್ರಮಕ್ಕೆ ಬಳಸಿಕೊಳ್ಳಲಾಗಿದೆ” ಎಂದು ಪ್ರವೀಣ್ ತಿಳಿಸಿದ್ದಾರೆ.

ಶೌಚಾಲಯದ ಸಹಾಯಧನ ಹಗರಣದ ಮೇಲೆ ತಕ್ಷಣವೇ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಬಯಲಿಗೆಳೆಯಬೇಕು ಎಂದು ಆರ್‌ಟಿಐ ಕಾರ್ಯಕರ್ತ ಪ್ರವೀಣ್ ಮೋದಿ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಡಿಎಸ್‌ಪಿಗೆ ಲಿಖಿತ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X