ಉತ್ತರಾಯಣ ಉತ್ಸವ | ಆರು ಮಂದಿಗೆ ಉರುಳಾದ ಗಾಳಿಪಟದ ಮಾಂಜಾ ದಾರ; ನೂರಾರು ಮಂದಿಗೆ ಗಾಯ

Date:

Advertisements

ಜನವರಿ 14ರಂದು ಗುಜರಾತ್‌ನಲ್ಲಿ ಉತ್ತರಾಯಣ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಗಾಳಿಪಟದ ಹರಿತವಾದ ಮಾಂಜಾ ದಾರ ಆರು ಮಂದಿಯ ಕೊರಳಿಗೆ ಉರುಳಾಗಿ ಪರಿಣಮಿಸಿ ಸಾವನ್ನಪ್ಪಿದ್ದಾರೆ, ನೂರಕ್ಕೂ ಅಧಿಕ ಮಂದಿಗೆ ಗಾಯವಾಗಿದೆ ಎಂದು ಹೇಳಲಾಗಿದೆ.

ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ಹಲವು ಮಂದಿಗೆ ತೀವ್ರವಾದ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಹಬ್ಬದ ದಿನದಂದೇ ರಾಜ್ಯದಲ್ಲಿ ತುರ್ತು ಸೇವೆಗೆ ಒತ್ತಡ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ತಮಿಳುನಾಡು | ಗಾಳಿಪಟಕ್ಕೆ ಬಳಸುವ ಮಾಂಜಾ ದಾರ; ತಯಾರಿಕೆ – ಮಾರಾಟ ನಿಷೇಧ

Advertisements

ಇನ್ನು 14ರಂದು ರಾತ್ರಿ 9 ಗಂಟೆಯ ವೇಳೆ 108 ತುರ್ತು ಸಹಾಯವಾಣಿಗೆ 4,256 ಕರೆಗಳು ಬಂದಿದೆ. ಹಬ್ಬದ ನಡುವೆ ಈ ಸೇವೆಯನ್ನು ತುರ್ತಾಗಿ ನೀಡುವಲ್ಲಿ ಅಡಚಣೆ ಉಂಟಾಗಿದೆ ಎಂದು ಹೇಳಲಾಗಿದೆ.

ರಾಜ್‌ಕೋಟ್‌ನಲ್ಲಿ ಗಾಳಿಪಟದ ದಾರ ಗಂಟಲನ್ನೇ ಸೀಳಿದ್ದು ಬೈಕ್ ಸವಾರ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಸುರೇಂದ್ರ ನಗರದಲ್ಲಿಯೂ ಇದೇ ರೀತಿಯ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇನ್ನು ಹಲೋಲ್‌ನ ರಹತ್ಲಾವ್ ಗ್ರಾಮದ 5 ವರ್ಷದ ಕುನಾಲ್ ಎಂಬ ಬಾಲಕ ಕತ್ತನ್ನು ಗಾಳಿಪಟದ ದಾರ ಸೀಳಿದ್ದು ಬಾಲಕ ಸಾವನ್ನಪ್ಪಿದ್ದಾನೆ.

ಇನ್ನು ಕಸ್ಬಾ ಪ್ರದೇಶದಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿದ್ದ ಗಾಳಿಪಟ ದಾರವನ್ನು ತೆಗೆದುಹಾಕಲು ಪ್ರಯತ್ನಿಸುವಾಗ ಮಹಿಳೆಯೊಬ್ಬರು ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಇನ್ನು ಮಹಿಳೆಯನ್ನು ರಕ್ಷಿಸಲು ಯತ್ನಿಸಿದ ಸಹೋದರ ಕೂಡಾ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಉತ್ತರಾಯಣ ಆಚರಣೆಯ ಸಮಯದಲ್ಲಿ ಮೆಹ್ಸಾನಾ ಜಿಲ್ಲೆಯಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ವಡ್ನಾಗರ ತಾಲೂಕಿನ ವಡ್ಬಾರ್ ಗ್ರಾಮದ 35 ವರ್ಷದ ಮನ್ಸಾಜಿ ರಗುಂಜಿ ಠಾಕೋರ್ ದಾರ ತಗುಲಿ ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಮಾಂಜಾ ದಾರ ಬಳಕೆ ನಿಷೇಧ; ಬಳಕೆ ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ: ಡಿಸಿ

ಇನ್ನು ಉತ್ತರಾಯಣ ಹಬ್ಬದ ಸಂದರ್ಭದಲ್ಲಿ ಪ್ರಾಣಿಗಳು, ಪಕ್ಷಿಗಳು ಮತ್ತು ಜನರಿಗೆ ಗಾಯಗಳಾಗಿರುವ ವರದಿಯಾಗಿದೆ. ಸಂಜೆ 6 ಗಂಟೆಯ ಹೊತ್ತಿಗೆ ಕರುಣಾ ಅನಿಮಲ್ ಆ್ಯಂಬುಲೆನ್ಸ್ 1,402 ತುರ್ತು ಕರೆಗಳನ್ನು ಸ್ವೀಕರಿಸಿದ್ದು, ಈ ಪೈಕಿ ಪ್ರಾಣಿಗಳ ರಕ್ಷಣೆಗೆ 758 ಮತ್ತು ಪಕ್ಷಿಗಳ ರಕ್ಷಣೆಗೆ 644 ಕರೆಗಳು ಬಂದಿದೆ.

ಸಾಮಾನ್ಯವಾಗಿ ಪ್ರತಿದಿನ 3,000ರಿಂದ 4,000 ತುರ್ತು ಸೇವೆಯ ಕರೆಗಳು 108ಕ್ಕೆ ಬರುತ್ತದೆ. ಆದರೆ ಜನವರಿ 14 ಮತ್ತು 15 ರಂದು ಕರೆಗಳ ಪ್ರಮಾಣ ಶೇಕಡ 70ರಷ್ಟು ಹೆಚ್ಚಳವಾಗಿದೆ. ಜನವರಿ 14ರಂದು ಅಂದಾಜು 4,900 ಮತ್ತು ಜನವರಿ 15ರಂದು 4,500 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಉತ್ತರಾಯಣ ಹಬ್ಬದ ಹಿನ್ನೆಲೆಯಲ್ಲಿ ಗಾಳಿಪಟ ಹಾರಿಸಲು ಬಳಸುವ ಎಲ್ಲಾ ರೀತಿಯ ಗಾಜು ಲೇಪಿತ ದಾರಗಳನ್ನು ನಿಷೇಧಿಸಲಾಗಿದೆ ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ. ಆದರೂ ಕೂಡಾ ಬಳಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X