ಆಕ್ಷೇಪಾರ್ಹ ದೃಶ್ಯಗಳ ಕತ್ತರಿಗೆ ಒಪ್ಪಿಗೆ: ‘ಹಮಾರೆ ಬಾರಹ್’ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ

Date:

Advertisements

ಚಿತ್ರ ನಿರ್ಮಾಣಕಾರರು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಗೆ ಸೂಚಿಸಿದ ನಂತರ ‘ಹಮಾರೆ ಬಾರಹ್‌’ ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಸಿನಿಮಾವು ಜೂನ್‌ 21 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇಸ್ಲಾಂ ಮತ್ತು ಮುಸ್ಲಿಂ ಸಮುದಾಯದವರ ಬಗ್ಗೆ ನಕಾರಾತ್ಮಕವಾಗಿ ತೋರಿಸಲಾಗಿದೆ ಹಾಗೂ ಕುರಾನ್‌ಅನ್ನು ವಿಕೃತಗೊಳಿಸಲಾಗಿರುವ ಆಧಾರದ ಮೇಲೆ ‘ಹಾಮಾರೆ ಬಾರಹ್‌’ ಚಿತ್ರವನ್ನು ನಿಷೇಧಿಸಬೇಕೆಂದು ಕೋರಲಾಗಿದ್ದ ಮನವಿಯ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ.

ಬಿ ಪಿ ಕೊಲಾಬಾವಲ್ಲ ಹಾಗೂ ಫಿರ್‌ದೋಶ್‌ ಪೋನಿವಲ್ಲಾ ನೇತೃತ್ವದ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ಎರಡೂ ಕಡೆಯ ಪಕ್ಷದವರು ಕೋರ್ಟ್‌ ನೀಡಿದ ಆಕ್ಷೇಪಾರ್ಹವಾದ ಸಂಭಾಷಣೆಗಳನ್ನು ತೆರವುಗೊಳಿಸುವುದು ಸೇರಿ ಪರ್ಯಾಯ ಸಲಹೆಗೆ ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚುವರಿಯಾಗಿ 12 ಸೆಕೆಂಡ್‌ಗಳ ಕಾಲ ಹಕ್ಕು ನಿರಾಕರಣೆಯನ್ನು ಸಿನಿಮಾದಲ್ಲಿ ತೋರಿಸಬೇಕು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಚಿತ್ರ ನಿರ್ಮಾಣಕಾರರು ಅರ್ಜಿದಾರರು ಆಯ್ಕೆ ಮಾಡಿದ ಚಾರಿಟಿ ಸಂಸ್ಥೆಗೆ 5 ಲಕ್ಷ ರೂ. ಕಾನೂನು ವೆಚ್ಚವನ್ನು ಒದಗಿಸಬೇಕೆಂದು ತಿಳಿಸಲಾಗಿದೆ. ಕೇಂದ್ರೀಯ ಸಿನಿಮಾ ಪ್ರಮಾಣ ಪತ್ರ ಮಂಡಳಿಗೆ(ಸಿಬಿಎಫ್‌ಸಿ) ಜೂನ್‌ 20ರೊಳಗೆ ಮಾರ್ಪಾಡುಗಳೊಂದಿಗೆ ಮರು ಪ್ರಮಾಣಿಕರಿಸಬೇಕೆಂದು ಕೋರ್ಟ್ ಸೂಚಿಸಿದೆ.

ಸಿನಿಮಾ ಬಿಡುಗಡೆಗೆ ಈ ಮೊದಲು ತಡೆ ನೀಡಿದ್ದ ಸುಪ್ರೀಂ ಕೋರ್ಟ್, ಬಾಂಬೆ ಹೈಕೋರ್ಟ್‌ಗೆ ಅರ್ಜಿ ವಿಲೇವಾರಿಯ ಹೊಣೆ ವಹಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X