ಹಾಥರಸ್ ಕಾಲ್ತುಳಿತ | ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲಾಗದು: ಭೋಲೆ ಬಾಬಾ!

Date:

ಸುಮಾರು 121 ಮಂದಿಯ ಜೀವವನ್ನು ಬಲಿ ಪಡೆದುಕೊಂಡ ಹಾಥರಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ, “ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ತನ್ನದೇ ಸತ್ಸಂಗದ ಬಳಿಕ ನೂರಾರು ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಭೋಲೆ ಬಾಬಾ, ಈ ಘಟನೆ ಬಳಿಕ ತಾನು ಆಳವಾದ ಖಿನ್ನತೆಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.

“ಏನು ನಡೆಯಬೇಕೋ ಅದನ್ನು ತಪ್ಪಿಸಲು ಯಾರಿಂದಲೂ ಕೂಡಾ ಸಾಧ್ಯವಿಲ್ಲ. ಎಲ್ಲರೂ ಇಂದು ಅಥವಾ ನಾಳೆ ಸಾಯಲೇಬೇಕು. ಪ್ರತಿಯೊಬ್ಬರೂ ಒಂದು ದಿನ ಸಾಯಬೇಕು. ಸಮಯ ಮಾತ್ರ ನಿಶ್ಚಿತ. ನಾನು ಈ ಘಟನೆಯಿಂದ ಖಿನ್ನತೆಗೆ ಒಳಗಾಗಿದ್ದೇನೆ. ಆದರೆ ಅದೃಷ್ಟವನ್ನು ತಪ್ಪಿಸುವವರು ಯಾರು? ಇಂದಲ್ಲ ನಾಳೆ ಸಾಯಲೇಬೇಕು” ಎಂದರು.

ವಿಷ ಅನಿಲ ಸಿಂಪಡಿಸಿದ ಬಳಿಕ ಜನರು ಗಾಬರಿಗೊಂಡು ಈ ಕಾಲ್ತುಳಿತ ನಡೆದಿದೆ ಎಂಬ ಪ್ರತ್ಯಕ್ಷದರ್ಶಿ ಹೇಳಿಕೆಗಳನ್ನು ಒಪ್ಪಿಕೊಂಡ ಭೋಲೆ ಬಾಬಾ, “ಕಾಲ್ತುಳಿತದ ಹಿಂದೆ ಪಿತೂರಿಯಿದೆ. ಕೆಲವು ವ್ಯಕ್ತಿಗಳು ನಮ್ಮ ಸಂಸ್ಥೆ ನಡೆಸುತ್ತಿರುವ ಆಧ್ಯಾತ್ಮಿಕ ಆಚರಣೆಗಳನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಹಾಥರಸ್ ಕಾಲ್ತುಳಿತ ದುರಂತ : ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ನಿರಾಕರಣೆ

ವಿಶೇಷ ತನಿಖಾ ತಂಡ (ಎಸ್‌ಐಟಿ), ನ್ಯಾಯಾಂಗ ಆಯೋಗ ಮತ್ತು ಮಾನವ ಕಲ್ಯಾಣ ಸೌಹಾರ್ದ ಸಂಘದ ಅನುಯಾಯಿಗಳು ಸತ್ಯವನ್ನು ಬಹಿರಂಗಪಡಿಸಲು ಮತ್ತು ದುರಂತ ಘಟನೆಯ ಹಿಂದಿನ ಸಂಚುಕೋರರನ್ನು ಪತ್ತೆಹಚ್ಚುತ್ತಾರೆ ಎಂಬ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದೂ ಕೂಡಾ ಹೇಳಿದರು.

ಜುಲೈ 2ರಂದು ಹತ್ರಾಸ್‌ನ ಸಿಕಂದರಾರು ಪ್ರದೇಶದಲ್ಲಿ ನಡೆದ ಭೋಲೆ ಬಾಬಾರವರ ‘ಸತ್ಸಂಗ’ದಲ್ಲಿ ಕಾಲ್ತುಳಿತ ಸಂಭವಿಸಿದ್ದು, 121 ಜನರು ಸಾವನ್ನಪ್ಪಿದ್ದಾರೆ. ಘಟನೆಯ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತು ನ್ಯಾಯಾಂಗ ಆಯೋಗ ಎರಡನ್ನೂ ರಚಿಸಿದೆ.

ಸಿಕಂದರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರು ಮಾತ್ರ ಆರೋಪಿ ಎಂದು ಪಟ್ಟಿ ಮಾಡಿಲ್ಲ. ಆದರೆ ಜುಲೈ 9ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಎಸ್‌ಐಟಿ ವರದಿಯಲ್ಲಿ ಜನದಟ್ಟಣೆಯೇ ಕಾಲ್ತುಳಿತದ ಹಿಂದಿನ ಪ್ರಮುಖ ಕಾರಣ ಎಂದು ಹೇಳಲಾಗಿದ್ದು, ಘಟನೆಯಲ್ಲಿ ‘ಪಿತೂರಿ’ಯನ್ನು ತಳ್ಳಿಹಾಕಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ...

ವಿಚಿತ್ರ-ವಿಕೃತ ಘಟನೆ: ವರದಕ್ಷಿಣೆಯಾಗಿ ‘ಕಿಡ್ನಿ’ ಕೊಡುವಂತೆ ಸೊಸೆಗೆ ಅತ್ತೆ-ಮಾವ ಕಿರುಕುಳ

ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ರಾಕೆಟ್‌ನಲ್ಲಿ ಆಮ್ಲಜನಕ ಸೋರಿಕೆ, ಭಾರತದ ಶುಭಾಂಶು ಇರುವ ಅಂತರಿಕ್ಷಯಾನ ಮುಂದೂಡಿಕೆ

ತಾಂತ್ರಿಕ ದೋಷದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ತಂಡ ತೆರಳಬೇಕಿದ್ದ...

Download Eedina App Android / iOS

X