ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

Date:

Advertisements

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆಯು ನಿರಂತರವಾಗಿ ಹೆಚ್ಚಾಗುತ್ತಿದೆ. ಈ ನಡುವೆ ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ ವರದಿಯಾಗಿದೆ.

ಮಂಗಳವಾರ ನಡೆದ ಈ ಭಾರೀ ಕಾಲ್ತುಳಿತದ ಬಳಿಕ ಇಲ್ಲಿನ ಸರ್ಕಾರಿ ಆಸ್ಪತ್ರೆಯೊಳಗೆ ನೂರಾರು ಶವಗಳಿದೆ. ಸಂತ್ರಸ್ತರ ಸಂಬಂಧಿಕರು ತಮ್ಮ ಪ್ರೀತಿಪಾತ್ರರ ಪಾರ್ಥಿವ ಶರೀರವನ್ನು ಮನೆಗೆ ಕೊಂಡೊಯ್ಯಲು ಆಸ್ಪತ್ರೆ ಆವರಣದಲ್ಲಿ ಕಾಯುತ್ತಿದ್ದಾರೆ.

ಮೃತರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಧಾರ್ಮಿಕ ಬೋಧಕ ಭೋಲೆ ಬಾಬಾ ಅವರ ಸತ್ಸಂಗ ನಡೆದಿದೆ. ಮಧ್ಯಾಹ್ನ 3.30ರ ಸುಮಾರಿಗೆ ಬಾಬಾ ಸ್ಥಳದಿಂದ ನಿರ್ಗಮಿಸುತ್ತಿದ್ದಂತೆ ಕಾಲ್ತುಳಿತ ಸಂಭವಿಸಿದೆ.

Advertisements

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ | ಹತ್ರಾಸ್ ಕಾಲ್ತುಳಿತ ಘಟನೆ: ಈವರೆಗೆ ಮೃತಪಟ್ಟವರ ಸಂಖ್ಯೆ 116

ಕಾಲ್ತುಳಿತ ನಡೆದ ಸ್ಥಳಕ್ಕೆ ಸಮೀಪವಿರುವ ಸಿಕಂದರಾ ರಾವ್ ಸಮುದಾಯ ಆರೋಗ್ಯ ಕೇಂದ್ರದ ಹೊರಗೆ ಅನೇಕರು ತಮ್ಮ ನಾಪತ್ತೆಯಾದ ಕುಟುಂಬ ಸದಸ್ಯರಿಗಾಗಿ ತಡರಾತ್ರಿಯವರೆಗೆ ಹುಡುಕಾಟ ನಡೆಸಿದ್ದಾರೆ.

ಇನ್ನು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜೇಶ್ ಎಂಬವರು, “ನಾನು ಸುದ್ದಿ ವಾಹಿನಿಯಲ್ಲಿ ನನ್ನ ತಾಯಿಯ ಚಿತ್ರವನ್ನು ನೋಡಿ ಅವರನ್ನು ಗುರುತಿಸಿದೆ. ಅವರು ನಮ್ಮ ಹಳ್ಳಿಯ ಇತರ ಎರಡು ಡಜನ್ ಜನರೊಂದಿಗೆ ಇಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದರು” ಎಂದು ಹೇಳಿದ್ದಾರೆ.


ಇನ್ನು ಅಂಶು ಮತ್ತು ಪಬಲ್ ಕುಮಾರ್ ಎಂಬವರು ತಮ್ಮ ಸೋದರಸಂಬಂಧಿಯ ತಂದೆ ಗೋಪಾಲ್ ಸಿಂಗ್ (40) ಅವರ ಹುಡುಕಾಟದಲ್ಲಿದ್ದು, “ಅವರು ಕಾರ್ಯಕ್ರಮಕ್ಕೆ ಹೋಗಿದ್ದರು ಆದರೆ ಇನ್ನೂ ಮನೆಗೆ ಹಿಂದಿರುಗಿಲ್ಲ. ಅವರು ಫೋನ್ ಕೂಡ ತೆಗೆದುಕೊಂಡು ಹೋಗಿಲ್ಲ. ಸಿಂಗ್ ಬಾಬಾ ಅವರ ಅನುಯಾಯಿ ಅಲ್ಲ. ಆದರೆ ಪರಿಚಯಸ್ಥರ ಒತ್ತಾಯದ ಮೇರೆಗೆ ಮೊದಲ ಬಾರಿಗೆ ಕಾರ್ಯಕ್ರಮಕ್ಕೆ ಹೋಗಿದ್ದರು” ಎಂದು ಪಿಟಿಐಗೆ ತಿಳಿಸಿದರು.

ಮಂಗಳವಾರ ತಡರಾತ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ನಾವು ಸತ್ಸಂಗ ನಡೆಸಿದ ಪ್ರದೇಶದಲ್ಲಿ ಹುಡುಕಾಟ ನಡೆಸಿದೆವು. ಬಾಬಾ ಅಲ್ಲಿ ಇಲ್ಲಿ” ಎಂದು ಎಎನ್‌ಐಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X