ಹತ್ರಾಸ್ ಕಾಲ್ತುಳಿತ| ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದೇಶ

Date:

Advertisements

ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹತ್ರಾಸ್‌ ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ದುರಂತದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಲಿದೆ.

ನಿವೃತ್ತ ಐಎಎಸ್ ಅಧಿಕಾರಿ ಹೇಮಂತ್ ರಾವ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭವೇಶ್ ಕುಮಾರ್ ಸಿಂಗ್ ನ್ಯಾಯಾಂಗ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್, “ನಾವು ಈ ವಿಚಾರದಲ್ಲಿ ಪಿತೂರಿಯ ದೃಷ್ಟಿಕೋನವನ್ನು ತಳ್ಳಿಹಾಕುವಂತಿಲ್ಲ. ಎಲ್ಲಾ ರೀತಿಯಲ್ಲಿಯೂ ಸಮಿತಿಯು ತನಿಖೆ ನಡೆಸಲಿದೆ” ಎಂದು ಹೇಳಿದೆ.

Advertisements

“ಸಮಿತಿಯು ಈ ತನಿಖೆಯಲ್ಲಿ ಪೂರ್ಣಗೊಳಿಸಿ ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯಲು, ಇಂತಹ ಘಟನೆಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನ್ಯಾಯಾಂಗ ಆಯೋಗವು ಸೂಚಿಸಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?   ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಇನ್ನು, “ಕಾಲ್ತುಳಿತ ಸಂಭವಿಸಿದ ಸಂದರ್ಭದಲ್ಲಿ ಭೋಲೆ ಬಾಬಾ ಅವರ ಸ್ವಯಂಸೇವಕರು ಅದರ ನಿರ್ವಹಣೆ ಮಾಡುತ್ತಿದ್ದರು. ಜಿಲ್ಲಾಡಳಿತದ ಅಧಿಕಾರಿಗಳಿಗೆ ಪೆಂಡಲ್ ಒಳಗೆ ಹೋಗಲು ಅವಕಾಶವಿರಲಿಲ್ಲ” ಎಂದು ಆಗ್ರಾ ವಲಯದ ಎಡಿಜಿ ಅನುಪಮ್ ಕುಲಶ್ರೇಷ್ಠ ನೇತೃತ್ವದ ವಿಶೇಷ ತನಿಖಾ ತಂಡವು ಸಲ್ಲಿಸಿದ ಆರಂಭಿಕ ವರದಿಯನ್ನು ಉಲ್ಲೇಖಿಸಿ ಯುಪಿ ಸಿಎಂ ಹೇಳಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಬಾಬಾನ ಚಿತ್ರಗಳು ಮತ್ತು ವೀಡಿಯೊಗಳನ್ನು ಉಲ್ಲೇಖಿಸಿದ ಆದಿತ್ಯನಾಥ್, ಇದು ಬಾಬಾ ಅವರ ರಾಜಕೀಯ ಸಂಪರ್ಕವನ್ನು ತೋರಿಸುತ್ತದೆ ಎಂದರು. “ಪೆಂಡಲ್ ಹೊರಗೆ ಪೊಲೀಸ್ ಸಿಬ್ಬಂದಿಗಳು ಇದ್ದರು. ಕಾಲ್ತುಳಿತದ ನಂತರ ಗಾಯಾಳುಗಳಿಗೆ ಸಹಾಯ ಮಾಡುವ ಪ್ರಯತ್ನವನ್ನು ಕೂಡಾ ಮಾಡದೆ ಬಾಬಾ ಅವರ ಸ್ವಯಂಸೇವಕರು ಅಲ್ಲಿಂದ ಓಡಿಹೋಗಿದ್ದಾರೆ” ಎಂದು ಹೇಳಿದರು.

ಇನ್ನು ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರು ಉಲ್ಲೇಖಿಸದೆ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರವೇ ಭೋಲೆ ಬಾಬಾರ ರಕ್ಷಣೆ ಮಾಡಲು ಯತ್ನಿಸುತ್ತಿದೆ. ಆದರೆ ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಬಲಿಯುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ಹತ್ರಾಸ್ ಕಾಲ್ತುಳಿತ ದುರಂತ | ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವು!

ಈ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್, “ತನಿಖೆ ಮುಂದುವರೆದಂತೆ, ದುರಂತದ ಜವಾಬ್ದಾರಿ ಯಾರೆಂದು ಹೆಸರು ಸೇರಿಸಲಾಗುವುದು” ಎಂದು ಹೇಳಿದರು.

ಇನ್ನು ಬಾಬಾ ಪರಾರಿಯಾಗಿದ್ದು, ಪೊಲೀಸರು ಟ್ರಸ್ಟ್ ಮೇಲೆ ದಾಳಿ ಮಾಡಿದ್ದಾರೆ. ಬಾಬಾ ಪರಾರಿಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಹತ್ರಾಸ್ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ. ಬುಧವಾರ, ಮೈನ್‌ಪುರಿ ಜಿಲ್ಲೆಯ ರಾಮ್ ಕುಟಿರ್ ಚಾರಿಟೇಬಲ್ ಟ್ರಸ್ಟ್‌ನಲ್ಲಿರುವ ಬಾಬಾ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X