ಸಹೋದರ ರಾಹುಲ್ ಗಾಂಧಿ ಹಿಂದೂಗಳ ವಿರುದ್ಧ ಮಾತನಾಡಿಲ್ಲ: ಪ್ರಿಯಾಂಕಾ ಗಾಂಧಿ

Date:

Advertisements

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗಳನ್ನು ‘ಹಿಂಸಾತ್ಮಕ ಹಿಂದೂಗಳು’ ಎಂದು ಕರೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, “ನನ್ನ ಸಹೋದರ ಹಿಂದೂಗಳನ್ನು ಅವಮಾನಿಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ.

ಸಂಸತ್‌ ಭವನದಿಂದ ಹೊರಟ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧು ವಾದ್ರಾ, “ನನ್ನ ಸಹೋದರ ರಾಹುಲ್ ಗಾಂಧಿ ಹಿಂದೂಗಳನ್ನು ಅವಮಾನಿಸಲು ಸಾಧ್ಯವಿಲ್ಲ. ಬಿಜೆಪಿ ಬಗ್ಗೆ ಹಾಗೂ ಪಕ್ಷದ ನಾಯಕರ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ್ದಾರೆ” ಎಂದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಇಂದು ತಮ್ಮ ಮೊದಲ ಭಾಷಣ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ಮತ್ತು ಈ ಕುರಿತು ಕ್ಷಮೆ ಯಾಚಿಸುವಂತೆ ಒತ್ತಾಯಿಸಿದೆ. ಇದಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮೊದಲ ಭಾಷಣದಲ್ಲೇ ಶಿವ ದೇವರ ಫೋಟೋ ತೋರಿಸಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಹೇಳಿದ್ದೇನು?

ಇಂದು ಲೋಕಸಭೆಯಲ್ಲಿ ಶಿವನ ಫೋಟೋವನ್ನು ಹಿಡಿದು ಮಾತನಾಡಿದ್ದ ರಾಹುಲ್ ಗಾಂಧಿ, “ನಮ್ಮ ಮಹಾಪುರುಷರೆಲ್ಲರೂ ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ. ನೀವು ಯಾವುದೇ ರೀತಿಯಲ್ಲಿ ಹಿಂದೂ ಅಲ್ಲ.” ಎಂದು ಬಿಜೆಪಿ ನಾಯಕರತ್ತ ಕೈ ತೋರಿಸಿ ಹೇಳಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ, “ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಅತ್ಯಂತ ಗಂಭೀರವಾದ ಆರೋಪವಾಗಿದೆ” ಎಂದು ಹೇಳಿದ್ದರು.

ಅದಕ್ಕೆ ತಿರುಗುತ್ತರ ನೀಡಿದ್ದ ರಾಹುಲ್ ಗಾಂಧಿ, “ನಾನು ಪ್ರಧಾನಿ ಮೋದಿ, ಬಿಜೆಪಿ-ಆರ್‌ಎಸ್‌ಎಸ್​ ಹಿಂಸಾತ್ಮಕ ಧೋರಣೆ ತಳೆದಿದೆ ಎಂದು ಹೇಳಿದ್ದು. ಮೋದಿ, ಆರ್​ಎಸ್​ಎಸ್​, ಬಿಜೆಪಿ ಮಾತ್ರ ಹಿಂದೂ ಸಮುದಾಯವಲ್ಲ” ಎಂದು ತಿರುಗೇಟು ನೀಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X