ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಖ್ಯ ಶಿಕ್ಷಕನ ವಿಕೃತಿ

Date:

Advertisements

ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಮುಖ್ಯಶಿಕ್ಷಕ ಮತ್ತು ಓರ್ವ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿರುವ ಖಾಸಗಿ ಶಾಲೆಯಲ್ಲಿ ಮಂಗಳವಾರ ಘಟನೆ ನಡೆದಿದೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಾಣಿಸಿದ್ದ ಕಾರಣಕ್ಕೆ, ಯಾವ ವಿದ್ಯಾರ್ಥಿನಿ ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿದ್ದಾರೆ. ಮುಟ್ಟಾದವರು ಮತ್ತು ಮುಟ್ಟಾಗದವರನ್ನು ಎರಡು ಗುಂಪುಗಳಾಗಿ ವಿಂಗಡಿಸಿದ್ದರೆ ಎಂದು ಆರೋಪಿಸಲಾಗಿದೆ.

10 ರಿಂದ 12 ವರ್ಷದೊಳಗಿನ ವಿದ್ಯಾರ್ಥಿನಿಯರನ್ನು ಬಟ್ಟೆ ಬಿಚ್ಚಿಸಿ ಪರೀಕ್ಷಿಸುವಂತೆ ಮಹಿಳಾ ಸಿಬ್ಬಂದಿಗೆ ಮುಖ್ಯ ಶಿಕ್ಷಕ ಸೂಚಿಸಿದ್ದರು. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಮಹಿಳಾ ಸಿಬ್ಬಂದಿ ವಿದ್ಯಾರ್ಥಿನಿಯರ ಒಳ ಉಡುಪನ್ನು ಮುಟ್ಟಿ ಪರೀಕ್ಷಿಸಿದ್ದಾರೆ. ಈ ವೇಳೆ, ಓರ್ವ ವಿದ್ಯಾರ್ಥಿನಿ ಸ್ಯಾನಿಟರಿ ಪ್ಯಾಡ್ ಧರಿಸಿದ್ದರು. ಆಕೆಯನ್ನು ಶಿಕ್ಷಕರು ಮತ್ತು ಕೆಲವು ವಿದ್ಯಾರ್ಥಿಗಳು ಅಪಮಾನಿಸಿದ್ದಾರೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?; ಪತ್ರಕರ್ತನ ಪಯಣ | ಕನ್ನಡ ಪತ್ರಿಕೋದ್ಯಮದ ಅರೆಶತಮಾನದ ನಿಷ್ಠುರ ಕಥನ

ಪ್ರಕರಣ ಸಂಬಂಧ ಮುಖ್ಯಶಿಕ್ಷಕ, ಇಬ್ಬರು ಸಹಾಯಕ ಶಿಕ್ಷಕರು, ಮಹಿಳಾ ಸಿಬ್ಬಂದಿ ಹಾಗೂ ಇಬ್ಬರು ಟ್ರಸ್ಟಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಖ್ಯಶಿಕ್ಷಕ ಮತ್ತು ಮಹಿಳಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ತಿನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಮನಿಸಿ: ಮುಟ್ಟು ಒಂದು ಸಹಜ ಜೈವಿಕ ಪ್ರಕ್ರಿಯೆಯಾಗಿದ್ದರೂ, ಭಾರತದಲ್ಲಿ ಇದನ್ನು ಅಪವಿತ್ರವೆಂದು ಪರಿಗಣಿಸಿ, ಮುಟ್ಟಾದವರನ್ನು ಶೋಷಣೆಗೆ ಒಳಪಡಿಸುವ ಅನಿಷ್ಠ ಆಚರಣೆಗಳು ಇನ್ನೂ ಭಾರತದಲ್ಲಿ ಗಾಢವಾಗಿವೆ. ಈ ಮೂಢನಂಬಿಕೆಗಳಿಂದಾಗಿ ಮಹಿಳೆಯರನ್ನು ಮನೆಯಿಂದ ದೂರವಿಡುವುದು, ದೇವಸ್ಥಾನಕ್ಕೆ ಪ್ರವೇಶ ನಿಷೇಧಿಸುವುದು, ಅಥವಾ ಸಾಮಾಜಿಕ ಕಾರ್ಯಕ್ರಮಗಳಿಂದ ಹೊರಗಿಡುವಂತಹ ತಾರತಮ್ಯದ ನಡವಳಿಕೆಗಳು ನಡೆಯುತ್ತವೆ. ಇದು ಮಹಿಳೆಯರ ಆತ್ಮಗೌರವ, ಶಿಕ್ಷಣ, ಮತ್ತು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ.ಋತುಸ್ರಾವವನ್ನು ಅಪವಿತ್ರವೆಂದು ಕಾಣದೆ, ಇದನ್ನು ಮಹಿಳೆಯ ಆರೋಗ್ಯ ಮತ್ತು ಶಕ್ತಿಯ ಸಂಕೇತವಾಗಿ ಗೌರವಿಸುವ ಮನೋಭಾವ ಬೆಳೆಸಿದಾಗ ಮಾತ್ರ ಸಮಾಜದಲ್ಲಿ ಸಬಲೀಕರಣ ಸಾಧ್ಯವಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X