ಭಾರತದ ಪ್ರಮುಖ 10 ನಗರಗಳಲ್ಲಿ ಬಿಸಿಗಾಳಿ ಹೆಚ್ಚಳ; ರೆಡ್‌ ಅಲರ್ಟ್ ಘೋಷಣೆ

Date:

Advertisements

ದೇಶದ ಹಲವಾರು ಭಾಗಗಳಲ್ಲಿ ಬಿಸಿ ಗಾಳಿ, ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು ಕೆಲವು ನಗರಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ‘ರೆಡ್‌ ಅಲರ್ಟ್’ ಘೋಷಿಸಿದೆ. ರಾಜಸ್ಥಾನ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಮಧ್ಯಪ್ರದೇಶಗಳಿಗೆ ಐಎಂಡಿ ಎಚ್ಚರಿಕೆ ನೀಡಿದೆ.

ದೆಹಲಿಯಲ್ಲಿ ಗರಿಷ್ಠ 46 ಡಿಗ್ರಿ ತಾಪಮಾನ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಉತ್ತರ ಪ್ರದೇಶದಲ್ಲಿ ಬಿಸಿಗಾಳಿ ಅಧಿಕವಾಗಿದ್ದು ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

“ರಾಜಸ್ಥಾನದ ಅನೇಕ ಅಥವಾ ಹೆಚ್ಚಿನ ಭಾಗಗಳಲ್ಲಿ ಬಿಸಿಗಾಳಿ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿಯ ಕೆಲವು ಅಥವಾ ಹಲವು ಭಾಗಗಳಲ್ಲಿ ತಾಪಮಾನ ಅಧಿಕವಾಗಿರಲಿದೆ. ಪಶ್ಚಿಮ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮೇ 27ರಿಂದ 29ರವರೆಗೆ ತಾಪಮಾನ ಅಧಿಕವಾಗಿರಲಿದೆ. ಅದಾದ ಬಳಿಕ ಕ್ರಮೇಣ ಕಡಿಮೆಯಾಗಲಿದೆ” ಎಂದು ಐಎಂಡಿ ಬುಲೆಟಿನ್‌ನಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ?  ಬಿಸಿಗಾಳಿ | ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಶಾರೂಖ್ ಖಾನ್

ಮಂಗಳವಾರದಂದು, ರಾಜಸ್ಥಾನದ ಚುರು ದೇಶದಲ್ಲಿ ಅತಿ ಹೆಚ್ಚು ತಾಪಮಾನ 50.5 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಾಗಿದೆ. ರಾಜಸ್ಥಾನದಲ್ಲಿ ಮಂಗಳವಾರ ಬಿಸಿಗಾಳಿಗೆ ಮೂವರು ಸಾವನ್ನಪ್ಪಿದರೆ, ತಾಪಮಾನದಿಂದ ಅಸ್ವಸ್ಥತೆಗೆ ಒಳಗಾಗಿರುವವರ ಸಂಖ್ಯೆಯು 3,965ಕ್ಕೆ ಏರಿಕೆಯಾಗಿದೆ.

ಅತೀ ಅಧಿಕ ತಾಪಮಾನವಿರುವ ಹತ್ತು ನಗರಗಳು

1. ಚುರು, ರಾಜಸ್ಥಾನ: 50.5°C
2. ಸಿರ್ಸಾ, ಹರಿಯಾಣ: 50.3°C
3. ಮುಂಗೇಶಪುರ, ದೆಹಲಿ: 49.9°C
4. ಝಾನ್ಸಿ, ಉತ್ತರ ಪ್ರದೇಶ: 49.0°C
5. ಪೃಥ್ವಿಪುರ (ನಿವಾರಿ), ಮಧ್ಯಪ್ರದೇಶ: 48.5°C
6. ದಾಲ್ತೋಂಗಂಜ್, ಜಾರ್ಖಂಡ್: 47.5°C
7. ಭಟಿಂಡಾ, ಪಂಜಾಬ್: 47.2°C
8. ಡೆಹ್ರಿ, ಬಿಹಾರ: 47.0°C
9. ಮುಂಗೇಲಿ, ಛತ್ತೀಸ್‌ಗಢ: 47.0°C
10. ಬೌಧ್, ಒಡಿಶಾ: 45.9°C

ಇದನ್ನು ಓದಿದ್ದೀರಾ?  ರೆಮಲ್ ಚಂಡಮಾರುತ| ಬಂಗಾಳ, ಬಾಂಗ್ಲಾದೇಶದಲ್ಲಿ 16 ಮಂದಿ ಸಾವು

ಮಳೆ ಮುನ್ಸೂಚನೆ ನೀಡಿದ ಐಎಂಡಿ

ದೇಶದ ಕೆಲವು ರಾಜ್ಯಗಳಲ್ಲಿ ಬಿಸಿಯ ತಾಪ ಅಧಿಕವಾಗಿದ್ದರೆ, ಇನ್ನೂ ಕೆಲವು ಪ್ರಮುಖ ನಗರಗಳಲ್ಲಿ ರೆಮಲ್ ಚಂಡಮಾರುತದಿಂದಾಗಿ ಭಾರೀ ಮಳೆಯಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಕಾರಣ ರೆಡ್‌ ಅಲರ್ಟ್ ಘೋಷಿಸಲಾಗಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮೇ 29ರಂದು ಸುಮಾರು 115.5 ರಿಂದ 204.4 ಮಿಮೀ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಮೇ 9ರಿಂದ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X