ಹಿಮಾಚಲ ಪ್ರದೇಶ | ಭಾರೀ ಮಳೆಗೆ 52 ಮಂದಿ ಬಲಿ: ಏಳು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹದ ಭೀತಿ

Date:

Advertisements

ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಏಳು ಜಿಲ್ಲೆಗಳ ಕೆಲವು ಭಾಗಗಳಲ್ಲಿ ದಿಡೀರ್ ಪ್ರವಾಹ ಉಂಟಾಗುವ ಅಪಾಯವಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಮಂಗಳವಾರ ಎಚ್ಚರಿಕೆ ನೀಡಿದೆ.

ಚಂಬಾ, ಕಾಂಗ್ರಾ, ಮಂಡಿ, ಕುಲ್ಲು, ಶಿಮ್ಲಾ, ಸೋಲನ್ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ಪ್ರವಾಹ ಅಪಾಯ ಅಧಿಕವಾಗಿದೆ. ಹವಾಮಾನ ಇಲಾಖೆಯು ಈಗಾಗಲೇ ‘ಯೆಲ್ಲೋ’ ಅಲರ್ಟ್‌ ಅನ್ನು ಕೂಡಾ ಘೋಷಿಸಿದೆ. ಮುಂದಿನ ಸೋಮವಾರದವರೆಗೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶ | ಮಳೆಯ ಅಬ್ಬರ; ಭೂಕುಸಿತಕ್ಕೆ 350 ಮಂದಿ ಬಲಿ

Advertisements

ಹಿಮಾಚಲ ಪ್ರದೇಶದ ತುರ್ತು ಕಾರ್ಯಾಚರಣೆ ಕೇಂದ್ರ(SEOC) ಪ್ರಕಾರ, ರಾಜ್ಯದಲ್ಲಿ 163 ಟ್ರಾನ್ಸ್‌ಫಾರ್ಮರ್‌ಗಳು ಮತ್ತು 174 ನೀರು ಸರಬರಾಜು ಯೋಜನೆಗಳ ಮೇಲೆ ಭಾರೀ ಮಳೆಯ ಪ್ರಭಾವ ಉಂಟಾಗಿವೆ.

ಜೂನ್ 1ರಿಂದ ಜುಲೈ 8ರವರೆಗೆ ಹಿಮಾಚಲ ಪ್ರದೇಶದಲ್ಲಿ ವಾಡಿಕೆಯಂತೆ 152.6 ಮಿಮೀ ಮಳೆಯಾಗಬೇಕಿತ್ತು. ಆದರೆ ಈ ಅವಧಿಯಲ್ಲಿ ಮಂಡಿ ಜಿಲ್ಲೆಯಲ್ಲಿ ಶೇ. 110ರಷ್ಟು, ಶಿಮ್ಲಾ ಶೇ.89 ಮತ್ತು ಉನಾ ಶೇ. 86ರಷ್ಟು ಮಳೆಯಾಗಿದೆ.

ಜೂನ್ 20ರಂದು ಮಾನ್ಸೂನ್ ಹಿಮಾಚಲ ಪ್ರದೇಶವನ್ನು ಅಪ್ಪಳಿಸಿತ್ತು. ಅದಿನಿಂದ ಈವರೆಗೆ ಹಿಮಾಚಲ ಪ್ರದೇಶದಲ್ಲಿ 23 ದಿಢೀರ್ ಪ್ರವಾಹ, 19 ಮೇಘಸ್ಫೋಟ ಮತ್ತು 16 ಭೂಕುಸಿತಗಳು ಸಂಭವಿಸಿದೆ. ರಾಜ್ಯದಲ್ಲಿ ಇದುವರೆಗೆ ಮಳೆಯಿಂದಾಗಿ 52 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡಿ ಜಿಲ್ಲೆಯಲ್ಲಿ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಕಳೆದ ವಾರ ತುನಾಗ್, ಗೋಹರ್ ಮತ್ತು ಕರ್ಸೋಗ್ ಉಪವಿಭಾಗಗಳಲ್ಲಿ ನಾಪತ್ತೆಯಾದ 28 ಜನರನ್ನು ಪತ್ತೆಹಚ್ಚಲು ಡ್ರೋನ್‌ಗಳು ಮತ್ತು ಸ್ನಿಫರ್ ನಾಯಿಗಳನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X