ರಾಜಸ್ಥಾನ | ಕೋಟಾ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 12 ಮಂದಿ ಸಾವು

Date:

Advertisements

ರಾಜಸ್ಥಾನದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಕೋಟಾ ಸೇರಿದಂತೆ ಹಲವು ಜಿಲ್ಲಗಳಲ್ಲಿ ಈವರೆಗೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಕೋಟಾ, ಪಾಲಿ, ಜಾಲೋರ್ ಮತ್ತು ಧೋಲ್ಪುರ್ ಜಿಲ್ಲೆಗಳು ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿದೆ.

ಜೋಧ್‌ಪುರದಲ್ಲಿ ಕೊಳವೆ ಬಾವಿಯಲ್ಲಿ ಕೆಲಸ ಮಾಡುತ್ತಿದ್ದ ರೈತ ಮತ್ತು ಲೈನ್‌ಮ್ಯಾನ್ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಪಾಲಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಇಂದು(ಜುಲೈ 15) ಶಾಲೆಗಳಿಗೆ ರಜೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಭಾರೀ ಮಳೆ | ಗೊರೂರಿನ ಹೇಮಾವತಿ ಜಲಾಶಯದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ

Advertisements

ಜಾಲೋರ್ ಮತ್ತು ಜೋಧ್‌ಪುರದಲ್ಲಿ, ಮಾರ್ವಾರ್ ಜಂಕ್ಷನ್ ಮತ್ತು ಲುನಿ ನಡುವಿನ ಕೆಲವು ಪ್ರದೇಶಗಳಲ್ಲಿ ಹಳಿಗಳು ಮುಳುಗಿರುವುದರಿಂದ ರೈಲು ಸಂಚಾರ ವ್ಯತ್ಯಯವಾಗಿದೆ. ಪಾಲಿ ಮತ್ತು ಮಾರ್ವಾರ್ ಜಂಕ್ಷನ್ ನಡುವಿನ ಮಾರ್ಗಕ್ಕೂ ಪರಿಣಾಮ ಬೀರಿದೆ. ಹಲವು ರೈಲುಗಳ ವೇಳಾಪಟ್ಟಿ ಬದಲಾಗಿದೆ.

ಜೋಧ್‌ಪುರ-ಅಹಮದಾಬಾದ್‌ ಮಾರ್ಗದ ಸಬರಮತಿ ಎಕ್ಸ್‌ಪ್ರೆಸ್ ಅನ್ನು ಸಹ ರದ್ದುಗೊಳಿಸಲಾಗಿದೆ. ಮಾರ್ವಾರ್ ಜಂಕ್ಷನ್ ರೈಲು ವಿಭಾಗದ ಅಡಿಯಲ್ಲಿ ಮಾರ್ವಾರ್ ಜಂಕ್ಷನ್ ಮತ್ತು ಬೊಮಡೈನಲ್ಲಿ ಹಳಿಗಳು ಹಾನಿಗೊಳಗಾಗಿದೆ.

ಕೋಟಾ ಬ್ಯಾರೇಜ್‌ನಿಂದ ಎರಡು ಲಕ್ಷ ಕ್ಯೂಸೆಕ್‌ಗಳಿಗೂ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದ್ದು, ಉಕ್ಕಿ ಹರಿಯುವ ಚಂಬಲ್ ನದಿಯು ತಗ್ಗು ಪ್ರದೇಶಗಳನ್ನು ಮುಳುಗಿಸಿದೆ. ಮೀನುಗಾರಿಕೆಗಾಗಿ ತೆರಳಿದ್ದ ಏಳು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಒಬ್ಬರ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ರಾಜಸ್ಥಾನದಲ್ಲಿ ಹವಾಮಾನ ಇಲಾಖೆ ಪಾಲಿ, ಕೋಟಾ, ಜೋಧ್‌ಪುರ, ಚಿತ್ತೋರ್‌ಗಢ, ನಾಗೌರ್ ಮತ್ತು ಅಜ್ಮೀರ್‌ಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳ ಕಾಲ ಭಿಲ್ವಾರಾ, ಸಿರೋಹಿ, ಬರಾನ್, ಟೋಂಕ್ ಬುಂಡಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X