ಹೇಮಂತ್ ಸೊರೇನ್ ಪುನಃ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಆಯ್ಕೆ ಸಂಭವ

Date:

Advertisements

ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಂಚಿಯ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೇಮಂತ್‌ ಸೊರೇನ್ ಅವರು ಪುನಃ ಜಾರ್ಖಂಡ್‌ನ ಮುಖ್ಯಮಂತ್ರಿಯಾಗುವ ಸಂಭವವಿದೆ.

ಬಲ್ಲ ಮೂಲಗಳ ಪ್ರಕಾರ, ಮೈತ್ರಿ ಒಕ್ಕೂಟದ ಶಾಸಕರು ಮುಖ್ಯಮಂತ್ರಿ ಬದಲಾವಣೆಗೆ ತಮ್ಮ ಒಮ್ಮತ ತಿಳಿಸಲು ಈಗಾಗಲೇ ರಾಂಚಿಗೆ ತಲುಪಿದ್ದಾರೆ. ಹೇಮಂತ್ ಸೊರೇನ್‌ ಪುನಃ ಸಿಎಂ ಆದರೆ ಮೂರನೇ ಬಾರಿ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಆಯ್ಕೆಯಾಗದಂತಾಗುತ್ತದೆ.

ಹಾಲಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರಿಗೆ ಯುಪಿಎ ಸಂಯೋಜನಾ ಸಮಿತಿಯ ಅಧ್ಯಕ್ಷ ಹಾಗೂ ಜೆಎಂಎಂ ಕಾರ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಯಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಮೂಲಗಳ ಪ್ರಕಾರ, ಇಂಡಿಯಾ ಒಕ್ಕೂಟದ ಶಾಸಕರು ರಾಜ್ಯಪಾಲರಾದ ಸಿ ಪಿ ರಾಧಾಕೃಷ್ಣನ್‌ ಅವರನ್ನು ಭೇಟಿ ಮಾಡಿದ ನಂತರ ಚಂಪೈ ಸೊರೆನ್‌ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಿದ್ದಾರೆ. ತರುವಾಯು ಹೇಮಂತ್‌ ಸೊರೆನ್‌ ಸರ್ಕಾರ ರಚನೆಗೆ ಹಕ್ಕು ಸಾಧಿಸಲಿದ್ದಾರೆ. ಅದಕ್ಕೂ ಮೊದಲು ಜೆಎಂಎಂ ಶಾಸಕಾಂಗ ಪಕ್ಷ ಹಾಗೂ ಎನ್‌ಡಿಎ ಒಕ್ಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರು ಭೂ ಹಗರಣ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಮೊದಲ ಬಾರಿಗೆ ತಮ್ಮ ನಿವಾಸದಲ್ಲಿ ಮೈತ್ರಿ ಪಕ್ಷವನ್ನು ಒಳಗೊಂಡು ಎಲ್ಲ ಪಕ್ಷದ ಶಾಸಕರ ಸಭೆಯನ್ನು ಕರೆದಿದ್ದಾರೆ.

ಇವೆಲ್ಲ ಬೆಳವಣಿಗೆಳ ನಡುವೆ ಇನ್ನೆರೆಡು ಮೂರು ದಿನದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದರ ಹೊರತಾಗಿಯೂ ಜೈಲಿನಿಂದ ಬಿಡುಗಡೆಯಾದ ನಂತರ ಹೇಮಂತ್‌ ಸೊರೇನ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X