ಹಿಮಾಚಲ ಪ್ರದೇಶ | ಪ್ರವಾಹದಲ್ಲಿ ಕೊಚ್ಚಿ ಹೋದ ಒಂಬತ್ತು ಮಂದಿ, 150 ಕಿ.ಮೀ. ದೂರದಲ್ಲಿ ನಾಲ್ವರ ಮೃತದೇಹ ಪತ್ತೆ

Date:

Advertisements

ಹಿಮಾಚಲ ಪ್ರದೇಶದ ಪಾಂಗ್ಲುಯೆಡ್ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಎರಡು ಕುಟುಂಬಗಳ ಒಟ್ಟು ಒಂಬತ್ತು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ವರ ಮೃತದೇಹ ಜ್ವಾಲಾಪುರದಲ್ಲಿ 150 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಇನ್ನೂ ಐವರು ಕಾಣೆಯಾಗಿದ್ದಾರೆ.

ಹತ್ತು ದಿನಗಳ ಹಿಂದೆ ಒಟ್ಟು ಒಂಬತ್ತು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಇನ್ನೂ ಕಾಣೆಯಾದ ಐವರ ಶೋಧ ಮುಂದುವರೆಸಿದೆ. ಈ ಕುಟುಂಬದಲ್ಲಿ 23 ವರ್ಷದ ಖೇಮ್ ಲತಾ ಎಂಬ ಯುವತಿ ಮಾತ್ರ ಬದುಕುಳಿದಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಭಾರೀ ಮಳೆಯಿಂದಾಗಿ ಪ್ರವಾಹ; ಮೂವರ ಸಾವು

Advertisements

ಜೂನ್ 20ರಂದು ಮುಂಗಾರು ಆರಂಭವಾದಾಗಿನಿಂದ ಈವರೆಗೆ ಹಿಮಾಚಲ ಪ್ರದೇಶದಲ್ಲಿ ಒಟ್ಟು 91 ಮಂದಿ ಸಾವನ್ನಪ್ಪಿದ್ದಾರೆ, 34 ಜನರು ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹ ಮತ್ತು ಮೇಘಸ್ಫೋಟದಿಂದಾಗಿ ಗಾಯಗೊಂಡವರ ಸಂಖ್ಯೆ 130ಕ್ಕೆ ಏರಿದೆ.

ಮಳೆಯ ಅಬ್ಬರದಿಂದಾಗಿ ಹಲವು ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಒಂದು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ 207 ರಸ್ತೆಗಳನ್ನು ಮುಚ್ಚಲಾಗಿದೆ. 132 ವಿದ್ಯುತ್ ಪರಿವರ್ತಕಗಳು ಕಾರ್ಯನಿರ್ವಹಿಸುತ್ತಿಲ್ಲ. ಸುಮಾರು 840 ನೀರಿನ ಯೋಜನೆಗಳು ಸಹ ಸದ್ಯ ಸ್ಥಗಿತಗೊಂಡಿವೆ.

ಸೇನೆ, ಎನ್‌ಡಿಆರ್‌ಎಫ್ ತಂಡಗಳು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ(ಎಸ್‌ಡಿಆರ್‌ಎಫ್), ಇಂಡೋ ಟಿಬೆಟಿಯನ್ ಗಡಿ ಪೊಲೀಸ್(ಐಟಿಬಿಪಿ) ಮತ್ತು ಹಿಮಾಚಲ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಕಾಣೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.

ಜುಲೈ 16ರವರೆಗೆ ಹಿಮಾಚಲ ಪ್ರದೇಶದ ಹವಾಮಾನ ಕೆಟ್ಟದಾಗಿರುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿದೆ. ಕಾಂಗ್ರಾ ಮತ್ತು ಸಿರ್ಮೌರ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X