ಹೀಗೆ ಮುಂದುವರೆದರೆ ಭೂಪಟದಿಂದ ರಾಜ್ಯವೇ ಅಳಿಸಿಹೋಗುತ್ತದೆ: ಸುಪ್ರೀಂ ಕೋರ್ಟ್‌ ಎಚ್ಚರಿಕೆ

Date:

Advertisements

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಪರಿಸರ ಅಸಮತೋಲನ ಉಂಟಾಗಿದೆ. ಪರಿಣಾಮ, ಪ್ರವಾಹ, ಶಾಖ ಹೆಚ್ಚತ್ತಿದೆ. ಇದು ಹೀಗೆಯೇ ಮುಂದುವರೆದರೆ ಭೂಪಟದಿಂದ ಹಿಮಾಚಲ ಪ್ರದೇಶ ರಾಜ್ಯವೇ ಅಳಿಸಿಹೋಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಕಟುವಾಗಿ ನುಡಿದಿದೆ. ಅರಣ್ಯ ನಾಶವನ್ನು ಖಂಡಿಸಿದೆ.

ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳನ್ನು ‘ಹಸಿರು ಪ್ರದೇಶ’ ಎಂದು ಘೋಷಿಸಲು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಕೆಲವು ಕಾರ್ಪೋರೇಟ್‌ಗಳು ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು, “ಹಿಮಾಚಲ ಪ್ರದೇಶದ ಪರಿಸ್ಥಿತಿ ಹದಗೆಟ್ಟಿದೆ. ಇಂತ ಪರಿಸ್ಥಿತಿಯಲ್ಲಿ ಹಸಿರು ಪ್ರದೇಶದ ಘೋಷಣೆ ಅತೀ ಮುಖ್ಯ. ಇದು ನಿರ್ದಿಷ್ಟ ಪ್ರದೇಶದಲ್ಲಿ ನಿರ್ಮಾಣ ಚಟುವಟಿಕೆಗಳನ್ನು ತಡೆಯುತ್ತದೆ. ಇಲ್ಲವಾದಲ್ಲಿ, ಇಡೀ ರಾಜ್ಯವೇ ಭೂಪಟದಿಂದ ಕಾಣೆಯಾಗಿಬಿಡುತ್ತದೆ” ಎಂದು ಹೇಳಿಕೆ. ಅರ್ಜಿಯನ್ನು ವಜಾಗೊಳಿಸಿದೆ.

Advertisements

ಈ ಲೇಖನ ಓದಿದ್ದೀರಾ?: ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

“ಆದಾಯ ಗಳಿಸುವುದೇ ಮುಖ್ಯವಲ್ಲ. ಪರಿಸರ ಮತ್ತು ಪರಿಸರ ವಿಜ್ಞಾನವನ್ನು ಬಲಿಕೊಟ್ಟು ಆದಾಯ ಗಳಿಸಲು ಸಾಧ್ಯವಿಲ್ಲ ಆದಾಯಕ್ಕಿಂತ ಪ್ರಕೃತಿ ಮುಖ್ಯ. ಇದು ಆಳುವವರಿಗೂ ಮನವರಿಕೆಯಾಗಬೇಕು” ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕಿವಿಮಾತು ಹೇಳಿದೆ.

“ಹಿಮಾಚಲ ಪ್ರದೇಶದ ಪರಿಸ್ಥಿತಿ ಹದಗೆಟ್ಟಿದೆ. ಪರಿಸರ ಅಸಮತೋಲನ ತೀವ್ರಗೊಂಡಿದ್ದು, ಗಂಭೀರ ನೈಸರ್ಗಿಕ ವಿಕೋಪಗಳಿಗೆ ಕಾರಣವಾಗಿದೆ. ನಿರಂತರ ಭೂಕುಸಿತ, ಮನೆಗಳು ಮತ್ತು ಕಟ್ಟಡಗಳು ಕುಸಿಯುವುದು, ರಸ್ತೆ ಕುಸಿತ ಮುಂತಾದ ವಿದ್ಯಮಾನಗಳಿಗೆ ಪ್ರಕೃತಿ ಕಾರಣವಲ್ಲ, ಮಾನವರು ಕಾರಣ. ಹಿಮಾಚಲವು ಹಿಮಾಲಯ ಪರ್ವತಗಳ ಅಡಿಯಲ್ಲಿ ನೆಲೆಸಿದೆ. ಇಲ್ಲಿ ಯಾವುದೇ ಯೋಜನೆಯನ್ನು ಆರಂಭಿಸುವ ಮೊಲು ಭೂವಿಜ್ಞಾನಿಗಳು, ಪರಿಸರ ತಜ್ಞರು ಮತ್ತು ಸ್ಥಳೀಯರ ಅಭಿಪ್ರಾಯವನ್ನು ಪಡೆಯುವುದು ಮುಖ್ಯ. ಪ್ರಕೃತಿ ವಿಕೋಪವನ್ನು ತಡೆಯಲು ಈಗಲೂ ಎಚ್ಚೆತ್ತುಕೊಳ್ಳಲಿದ್ದರೆ, ಭವಿಷ್ಯವೇ ಇಲ್ಲವಾಗುತ್ತದೆ” ಎಂದು ಕೋರ್ಟ್‌ ಎಚ್ಚರಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X