ಗಾಂಧಿ ಕೊಲೆ ಸಂಭ್ರಮಿಸಿ, ಗೋಡ್ಸೆಗೆ ಜೈಕಾರ ಕೂಗಿದ ಹಿಂದು ಮಹಾಸಭಾ

Date:

Advertisements

ಜನವರಿ 30 ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮ ದಿನ. ದೇಶಾದ್ಯಂತ ಗಾಂಧಿ ಹುತಾತ್ಮ ದಿನವನ್ನು ಅಚರಿಸಲಾಗುತ್ತಿರುವ ಸಮಯದಲ್ಲೇ, ಹಿಂದು ಮಹಾಸಭಾ ಗಾಂಧಿ ಕೊಲೆಯ ಸಂಭ್ರಮಾಚರಣೆ ಮಾಡಿದೆ. ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಗೆ ಜೈಕಾರ ಕೂಗಿ, ಸಂಭ್ರಮಿಸಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿನ ‘ಅಮರ ಹುತಾತ್ಮ ನಾಥೂರಾಮ್ ಗೋಡ್ಸೆ ನಾನಾ ಅಪ್ಟೆ ಧಾಮ’ದಲ್ಲಿ ಹಿಂದು ಮಹಾಸಭಾದ ಮುಖಂಡರು ಮತ್ತು ಕಾರ್ಯಕರ್ತರು ಗಾಂಧಿ ಅವರ ಕೊಲೆಯನ್ನು ಸಂಭ್ರಮಿಸಿದ್ದಾರೆ. ಗಾಂಧಿ ಅವರನ್ನು ಹತ್ಯೆಗೈದ ಹಂತ ಗೋಡ್ಸೆಯನ್ನು ಹೊಗಳಿ, ಜೈಕಾರ ಕೂಗಿದ್ದಾರೆ.

ಹಿಂದು ಮಹಾಸಭಾದ ನಾಯಕ, ನಾನಾ ಅಪ್ಟೆ ಧಾಮದ ಸಂಸ್ಥಾಪಕ ಪಂಡಿತ್ ಅಶೋಕ್ ಶರ್ಮಾ ನೇತೃತ್ವದಲ್ಲಿ ಗಾಂಧಿ ಹಂತಕ ಗೋಡ್ಸೆಯನ್ನು ಸಂಭ್ರಮಿಸಿದ ಕಾರ್ಯಕ್ರಮ ನಡೆದಿದೆ.

Advertisements

ಗಾಂಧಿ ಹತ್ಯೆಯಲ್ಲಿ ಭಾಗಿಯಾದ ಹಂತಕರಾದ ನಾಥೂರಾಮ ಗೋಡ್ಸೆ ಮತ್ತು ನಾರಾಯಣ ನಾನಾ ಅಪ್ಟೆ ಅವರ ಕುಟುಂಬವನ್ನು ಸನ್ಮಾನಿಸುತ್ತೇವೆಂದು ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.

“ಭಾರತದಿಂದ ಗಾಂಧಿವಾದವನ್ನು ತೊಡೆದುಹಾಕಬೇಕು. ಗಾಂಧಿಯ ಆತ್ಮವನ್ನು ಇಲ್ಲವಾಗಿಸಬೇಕು. ಗಾಂಧಿ ಅವರನ್ನು ‘ರಾಷ್ಟ್ರಪಿತ’ ಎನ್ನಬಾರದು. ಆ ಬಿರುದನ್ನು ತೆಗೆಯಬೇಕು” ಎಂದು ಒತ್ತಾಯಿಸಿದ್ದಾರೆ.

1948ರ ಜನವರಿ 30ರಂದು ಬಿರ್ಲಾ ಮಂದಿರದ ಬಳಿ ಗಾಂಧಿ ಅವರನ್ನು ಹಿಂದು ಮಹಾಸಭಾದ ಸದಸ್ಯನಾಗಿದ್ದ ಗೋಡ್ಸೆ ಗುಂಡಿಕ್ಕಿ ಹತ್ಯೆಗೈದಿದ್ದ. ಗೋಡ್ಸೆಯನ್ನು ಬಂಧಿಸಿ, 1949ರಲ್ಲಿ ಅಂಬಾಲ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X