ಜ್ಞಾನವಾಪಿ | ಹಿಂದೂಗಳ ಪೂಜೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿದ್ದ ಮಸೀದಿ ಸಮಿತಿಯ ಅರ್ಜಿ ವಜಾ

Date:

Advertisements

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿದ್ದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್ ವಜಾಗೊಳಿಸಿದೆ.

ಹಿಂದೂಗಳ ಪ್ರಾರ್ಥನೆ ಮುಂದುವರಿಯಲಿದೆ ಎಂದು ನ್ಯಾಯಾಧೀಶ ರಂಜನ್ ಅಗರ್‌ವಾಲ್ ಅವರು ಮಸೀದಿ ಸಮಿತಿ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಕಳೆದ ತಿಂಗಳು ವಾರಣಾಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ನೆಲ ಮಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ತೀರ್ಪು ನೀಡಿತ್ತು.

Advertisements

ತಮ್ಮ ಪೂರ್ವಜರು ಡಿಸೆಂಬರ್ 1993ರವರೆಗೂ ಜ್ಞಾನವಾಪಿಯಲ್ಲಿ ಪೂಜೆ ಸಲ್ಲಿಸಿದ್ದರು ಎಂದು ಶೈಲೇಂದ್ರ ಕುಮಾರ್ ಪಾಠಕ್‌ ಎಂಬುವವರ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಎತ್ತಿ ಹಿಡಿದಿತ್ತು. ನಾನೊಬ್ಬ ಅನುಮಂಶಿಕ ಅರ್ಚಕನಾದ ಕಾರಣ ತಮಗೆ ಪೂಜೆ ಮಾಡಲು ಅವಕಾಶ ನೀಡಬೇಕೆಂದು ಪಾಠಕ್‌ ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಜ್ಞಾನವಾಪಿ ಮಸೀದಿಯು 4 ನೆಲಮಾಳಿಗೆಯನ್ನು ಹೊಂದಿದ್ದು, ಅದರಲ್ಲಿ ಒಂದು ವ್ಯಾಸ್‌ ಕುಟುಂಬಕ್ಕೆ ಸೇರಿದೆ. ಅರ್ಜಿದಾರರ ವಾದವನ್ನು ಮಸೀದಿ ಸಮಿತಿ ನಿರಾಕರಿಸಿದೆ. ನೆಲಮಾಳಿಗೆಯಲ್ಲಿ ಯಾವುದೇ ವಿಗ್ರಹಗಳು ಇರಲಿಲ್ಲ. ಹಾಗಾಗಿ 1993ರ ವರೆಗೂ ಪೂಜೆ ಮಾಡಿರುವ ಬಗ್ಗೆ ಪ್ರಶ್ನೆಗಳು ಉದ್ಭವಿಸುವುದಿಲ್ಲ ಎಂದು ಮಸೀದಿ ಸಮಿತಿ ಹೇಳಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಮಸೀದಿ ಸಮಿತಿ ವಾರಣಾಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವರದಿ ಹೊರಬಿದ್ದ ನಂತರ ವಾರಣಾಸಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು. ಈ ಮಸೀದಿಯನ್ನು ಔರಂಗಜೇಬ್‌ ಆಡಳಿತದ ವೇಳೆ ಹಿಂದು ದೇವಾಲಯದ ಅವಶೇಷಗಳ  ಮೇಲೆ ನಿರ್ಮಿಸಲಾಗಿತ್ತು ಎಂದು ವರದಿ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X