ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

Date:

Advertisements

ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು ಜಾಮೀನು ನಿಯಮಗಳನ್ನು ಉಲ್ಲಂಘಿಸುವುದಿಲ್ಲ ಎಂದು ತಿಳಿಸಿದೆ.

ಕೇಜ್ರಿವಾಲ್‌ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅದು ಅವರ ಊಹೆ. ಈ ಬಗ್ಗೆ ನಾವೇನು ಹೇಳುವುದಿಲ್ಲ. ಜೂನ್‌ 2 ರಂದು ನ್ಯಾಯಾಲಯಕ್ಕೆ ಶರಣಾಗಬೇಕು ಎಂಬ ನಮ್ಮ ಆದೇಶ ಸ್ಪಷ್ಟವಾಗಿದೆ. ಕಾನೂನಿನ ಅನ್ವಯದಂತೆ ಕೋರ್ಟ್ ನಿರ್ಧಾರ ಕೈಗೊಂಡಿದೆ ಎಂದು ಜಾರಿ ನಿರ್ದೇಶನಾಲಯ ಪರ ವಕೀಲರಿಗೆ ಕೋರ್ಟ್ ತಿಳಿಸಿತು.

ನಾವು ಯಾವುದೇ ವಿನಾಯಿತಿ ನೀಡಿಲ್ಲ. ನಮ್ಮ ನಿರ್ಧಾರದ ಬಗ್ಗೆ ಟೀಕೆಗಳನ್ನು ಸ್ವಾಗತಿಸುತ್ತೇವೆ. ಇದನ್ನು ನಾವು ವಿವಾದವಾಗಿ ಮುಂದುವರೆಸುವುದಿಲ್ಲ. ನಮ್ಮ ಆದೇಶ ಸ್ಪಷ್ಟವಾಗಿದೆ. ನಾವು ದಿನಾಂಕವನ್ನು ನಿಗದಿಪಡಿಸಿದ್ದೇವೆ. ಮಧ್ಯಂತರ ಜಾಮೀನಿಗೆ ಕಾರಣಗಳನ್ನು ನೀಡಿದ್ದೇವೆ ಎಂದು ಹೇಳಿದ ಸುಪ್ರೀಂ ಕೋರ್ಟ್ ಜಾಮೀನನ್ನು ರದ್ದುಪಡಿಸಿ ಕೇಜ್ರಿವಾಲ್‌ ಅವರನ್ನು ಮತ್ತೆ ಜೈಲಿಗೆ ವಾಪಸ್‌ ಕಳಿಸಲು ನಿರಾಕರಿಸಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

ಈ ಮೊದಲು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಸಾಲಿಟರ್‌ ಜನರಲ್‌ ತುಷಾರ್ ಮೆಹತಾ, ಪ್ರಚಾರದ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ಎಎಪಿ ಪರವಾಗಿ ಮತ ಚಲಾಯಿಸಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂದು ಹೇಳುತ್ತಿರುವುದನ್ನು ಕೋರ್ಟ್‌ಗೆ ಮನವರಿಕೆ ಮಾಡಿದರು.

“ಇದು ಕೋರ್ಟ್‌ ನೀಡಿದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ನ್ಯಾಯಾಂಗದ ಕೆನ್ನೆಗೆ ಬಾರಿಸಿದಂತಾಗಿದೆ” ಎಂದು ವಾದ ಮಂಡಿಸಿದರು. ಆದರೆ ಕೋರ್ಟ್ ಸಾಲಿಟರ್‌ ಜನರಲ್‌ ವಾದವನ್ನು ಪರಿಗಣಿಸಲಿಲ್ಲ.

ಮೇ.12 ರಂದು ಸೋಮವಾರ ಚುನಾವಣಾ ಭಾಷಣ ಮಾಡಿದ್ದ ಕೇಜ್ರಿವಾಲ್, ನಾನು ಜೂನ್‌ 2 ರಂದು ಜೈಲಿಗೆ ಮರಳಲಿದ್ದು, ಜೈಲಿನಿಂದಲೇ ಜೂ.4 ರಂದು ಫಲಿತಾಂಶ ನೋಡುತ್ತೇನೆ. ಇಂಡಿಯಾ ಒಕ್ಕೂಟ ಜಯಗಳಿಸಿದರೆ ನಾನು ಜೂ.5 ರಂದು ವಾಪಸ್‌ ಜೈಲಿನಿಂದ ಬರುತ್ತೇನೆ ಎಂದು ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X