ಮರ್ಯಾದೆಗೇಡು ಹತ್ಯೆ | ತಳ ಸಮುದಾಯದ ಅಳಿಯನನ್ನು ಗುಂಡಿಕ್ಕಿ ಕೊಂದ ಜಾತಿವಾದಿ ಮಾವ

Date:

Advertisements

ಜಾತೀಯತೆ, ಜಾತಿ ದೌರ್ಜನ್ಯವನ್ನು ತೊಡೆದು ಹಾಕಲು ಸಂವಿಧಾನದಲ್ಲಿ ನಾನಾ ಕಾನೂನುಗಳನ್ನು ರೂಪಿಸಲಾಗಿದೆ. ಆದರೂ, ಪ್ರಬಲ ಜಾತಿಗಳಲ್ಲಿ ಜಾತಿ ರೋಗ ವಾಸಿಯಾಗಿಲ್ಲ. ಜಾತಿಯ ಕಾರಣಕ್ಕಾಗಿ ದೌರ್ಜನ್ಯಗಳು, ಅತ್ಯಾಚಾರಗಳು, ಹತ್ಯೆಗಳು ಮುಂದುವರೆದಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ತನ್ನ ಅಳಿತ ತಳ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅಳಿಯನನ್ನು ಜಾತಿವಾದಿ ಮಾವನೊಬ್ಬ ಗುಂಡಿಕ್ಕಿ ಕೊಂದರುವ ಅಮಾನುಷ ‘ಮರ್ಯಾದೆಗೇಡು ಹತ್ಯೆ’ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ದರ್ಭಂಗಾದಲ್ಲಿ ಘಟನೆ ನಡೆದಿದೆ. ದರ್ಭಂಗಾ ವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ನರ್ಸಿಂಗ್‌ ವಿದ್ಯಾರ್ಥಿ ರಾಹುಲ್‌ ಎಂಬವರನ್ನು ಆತನ ಮಾವ ಕೊಂದಿದ್ದಾನೆ.

ತಳಸಮುದಾಯದ ರಾಹುಲ್ ಮತ್ತು ಆತನ ಸಹಪಾಠಿ, ಪ್ರಬಲ ಜಾತಿಯ ಯುವತಿ ಪರಸ್ಪರ ಪ್ರೀತಿಸಿ ಇದೇ ವರ್ಷದ ಏಪ್ರಿಲ್‌ನಲ್ಲಿ ವಿವಾಹವಾಗಿದ್ದರು. ಆ ಕಾರಣಕ್ಕಾಗಿಯೇ ಯುವತಿ ತಂದೆ ಪ್ರೇಮಶಂಕರ್‌ ಝಾ ಎಂಬಾತ ರಾಹುಲ್‌ನನ್ನು ಕಾಲೇಜಿನ ಆವರಣದಲ್ಲಿಯೇ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ವರದಿಯಾಗಿದೆ.

Advertisements

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಎದುರಾಳಿಗಳ ಕೈಕಾಲು ಕಟ್ಟಿ, ತಾನು ಗೆಲ್ಲುವುದು ಬಿಜೆಪಿ ಹುನ್ನಾರ

ರಾಹುಲ್ ಮೇಲೆ ಪ್ರೇಮಾಶಂಕರ್ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಕಾಲೇಜಿನ ವಿದ್ಯಾರ್ಥಿಗಳು ಹಿಡಿದು, ಥಳಿಸಿದ್ದಾರೆ. ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಹುಲ್ ಹತ್ಯೆಯನ್ನು ಖಂಡಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಾಮಾಜಿಕ ಜಾಗೃತಿ, ಅರಿವು ಮೂಡಿಸಲು ಸಾವಿರಾರು ಕಾರ್ಯಕ್ರಮಗಳು ನಡೆಯುತ್ತಿದ್ದರೂ ಕೂಡಾ ಜನರಲ್ಲಿ ಅಂಟಿಕೊಂಡಿರುವ ಜಾತಿಯ ವೈರಸ್‌ ಇನ್ನೂ ತೊಲಗದೇ ಇರುವುದು ವಿಪರ್ಯಾಸ. ಭಾರತೀಯ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಸಮಾನತೆಯನ್ನು ಬೋಧಿಸಲಾಗಿದೆ. ಆದರೂ ಇಂದಿಗೂ ಜಾತಿ ಧರ್ಮಗಳ ಕಾರಣಕ್ಕಾಗಿ ತಮ್ಮ ಮಕ್ಕಳನ್ನು ಹತ್ಯೆಗೈಯ್ಯುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X