ಭೀಕರ ಕೃತ್ಯ | ಬಾಲಕನನ್ನು ವಿವಸ್ತ್ರಗೊಳಿಸಿ, ಇರಿದು ಕೊಂದ 8 ಮಂದಿ ದುಷ್ಕರ್ಮಿಗಳು

Date:

Advertisements

ದುಷ್ಕರ್ಮಿಗಳ ಗುಂಪೊಂದು 14 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ ಭೀಕರವಾಗಿ ಇರಿದು ಕೊಂದಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ನಾಲ್ವರು ಬಾಲಾಪರಾಧಿಗಳು ಸೇರಿದಂತೆ 8 ಜನರ ಗುಂಪು ಈ ಕೃತ್ಯ ಎಸಗಿದೆ ಎಂದು ಪೊಪಲೀಸರು ತಿಳಿಸಿದ್ದಾರೆ.

ದೆಹಲಿಯ ಹೈದರ್ಪುರ ಪ್ರದೇಶದಲ್ಲಿ ಘಟನೆ ನಡೆದಿದೆ. ಬಾಲಕ ಮೃತದೇಹವು ಹೈದರ್ಪುರ ಹೊರವಲಯದಲ್ಲಿರುವ ಕಾಲುವೆಯಲ್ಲಿ ಪತ್ತೆಯಾಗಿದೆ. ಸಿರಾಸ್ಪುರದ ಜೀವನ್ ಪಾರ್ಕ್ ನಿವಾಸಿಯಾಗಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ, ವಿವಸ್ತ್ರಗೊಳಿಸಿ, ಕೊಂದಿದ್ದಾರೆ. ಇದು ಸೇಡಿನ ಕೃತ್ಯವಾಗಿದೆ ಎಂದು ಪೊಲಿಸರು ಶಂಕಿಸಿದ್ದಾರೆ.

ಕೃತ್ಯವು ಮೂರ್ನಾಲ್ಕು ದಿನಗಳ ಹಿಂದೆಯೇ ನಡೆದಿದ್ದು, ಈಗ ಮೃತದೇಹ ಪತ್ತೆಯಾಗಿದೆ. ದೇಹವು ಭಾಗಶಃ ಕೊಳೆತಿದ್ದು, ಪೊಲಿಸರು ಮರಣೋತ್ತರ ಪರೀಕ್ಷೆಗೆ ರವಾಹಿಸಿದ್ದಾರೆ.

Advertisements

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಅವರ ಬಂಧನಕ್ಕಾಗಿ ಪೊಲೀಸ್‌ ತಂಡಗಳನ್ನು ರಚಿಸಿದ್ದಾರೆ.

“ತಾಂತ್ರಿಕ ಕಣ್ಗಾವಲು ಬಳಸಿ, ಇಬ್ಬರು ಪ್ರಮುಖ ಆರೋಪಿಗಳಾದ ಕೃಷ್ಣ ಅಲಿಯಾಸ್ ಭೋಲಾ (19) ಮತ್ತು ಇನ್ನೊಬ್ಬ ಬಾಲಾಪರಾಧಿಯನ್ನು ಮೊದಲಿಗೆ ಗುರುತಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಹರೇಶ್ವರ್ ವಿ ಸ್ವಾಮಿ ಹೇಳಿದ್ದಾರೆ.

ಕಳೆದ ವರ್ಷ ಮೋನು ಮತ್ತು ಸೋನು ಎಂಬವರು ಆರೋಪಿ ಕೃಷ್ಣನ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಬಗ್ಗೆ ಸಾಕ್ಷಿ ಹೇಳಲು ಮೃತ ಬಾಲಕ ನಿರಾಕರಿಸಿದ್ದನು. ಈ ಕಾರಣಕ್ಕೆ, ಆರೋಪಿ ಕೃಷ್ಣ ಮೃತ ಬಾಲಕನ ಮೇಲೆ ದ್ವೇಷ ಸಾಧಿಸಿದ್ದ. ಆತನನ್ನು ಕೊಲ್ಲಲು ತನ್ನ ಇತರ ಏಳು ಮಂದಿ ಆರೋಪಿ ಸ್ನೇಹಿತರೊಂದಿಗೆ ಸಂಚು ರೂಪಿಸಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಜೂನ್ 29-30ರ ನಡುರಾತ್ರಿ ಕೃಷ್ಣ ಮತ್ತು ಇತರ ಆರೋಪಿಗಳು ವೀರ್ ಚೌಕ್ ಬಜಾರ್ ಬಳಿ ಮೃತ ಬಾಲಕನನ್ನು ಅಡ್ಡಗಟ್ಟಿದ್ದಾರೆ. ಆತನ ಸ್ನೇಹಿತನ ಎದುರೇ ಅಪಹರಿಸಿ, ಎಳೆದೊಯ್ದಿದ್ದಾರೆ. ಅಲ್ಲಿ, ಆತನ ಬಾಯಿಗೆ ಸ್ಕಾರ್ಫ್‌ ಕಟ್ಟಿ, ಆತನನ್ನು ವಿವಸ್ತ್ರಗೊಳಿಸಿ, ಆರೋಪಿಗಳು ಸರದಿಯಲ್ಲಿ ಆತನಿಗೆ ಇರಿದಿದ್ದಾರೆ. ಮೃತದೇಹವನ್ನು ನೀರಿಗೆ ಎಸೆದಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಗಳ ಬಳಿಕ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X