‘ಅಪರಾಧಿಯ ಆಸ್ತಿಯನ್ನು ಹೇಗೆ ಕೆಡವುತ್ತೀರಿ’; ಸರ್ಕಾರಗಳ ಬುಲ್ಡೋಜರ್ ನ್ಯಾಯದ ವಿರುದ್ಧ ಸುಪ್ರೀಂ ಕಿಡಿ

Date:

Advertisements

ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ ‘ಬುಲ್ಡೋಜರ್ ನ್ಯಾಯ’ದ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆ. “ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ” ಎಂದು ಹೇಳಿದ್ದು, ಸರ್ಕಾರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಕೆಲವು ಗಂಭೀರ ಪ್ರಕರಣಗಳಲ್ಲಿ ಅಪರಾಧಿಗಳ ಮನೆಗಳನ್ನು ಅಧಿಕಾರಿಗಳು ಕೆಡವುವುದು ದೇಶಾದ್ಯಂತ ವರದಿಯಾಗುತ್ತಿವೆ. ಅದರಲ್ಲೂ ಮಧ್ಯಪ್ರದೇಶದಲ್ಲಂತೂ ಅಪರಾಧಿಗಳ ನಿವಾಸಗಳನ್ನು ಧ್ವಂಸಗೊಳಿಸುವುದು ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಬುಲ್ಡೋಜರ್ ಕ್ರಮವನ್ನು ತಡೆಯಬೇಕೆಂದು ಹಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರಿದ್ದ ಪೀಠವು ಅರ್ಜಿಗಳ ವಿಚಾರಣೆ ನಡೆಸಿದೆ. ಸರ್ಕಾರಗಳು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

“ವ್ಯಕ್ತಿಯು ಅಪರಾಧಿಯೆಂದು ಘೋಷಿಸಲ್ಪಟ್ಟರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಆರೋಪಿಯಾಗಿರುವ ಮಾತ್ರಕ್ಕೆ ಅವರ ಮನೆಯನ್ನು ಹೇಗೆ ಕೆಡವುತ್ತೀರಿ” ಎಂದು ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ಕಾನೂನಿನಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಅನುಸರಿಸದೆ ಅಪರಾಧಿಗಳ ಮನೆಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿದೆ.

Advertisements

“ಓರ್ವ ವ್ಯಕ್ತಿ ದಂಗೆಕೋರ ಆಗಿರಬಹುದು. ಆ ಕಾರಣಕ್ಕೆ ಆತನ ತಂದೆಯ ಮನೆ ಕೆಡವಿದರೆ? ಅವರು ಎಲ್ಲಿ ಹೋಗಬೇಕು. ಏನು ಮಾಡಬೇಕು. ಇದು ಸರಿಯಾದ ನಡೆಯಲ್ಲ. ನಾವು ಪ್ಯಾನ್-ಇಂಡಿಯಾ ಆಧಾರದ ಮೇಲೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲು ಪ್ರಸ್ತಾಪಿಸುತ್ತೇವೆ” ಎಂದು ಪೀಠವು ಹೇಳಿದೆ.

“ಅಪರಾಧಿ ಅಥವಾ ಆರೋಪಿಗಳ ಕಟ್ಟಡವು ಕಾನೂನುಬಾಹಿರವಾಗಿದ್ದರೆ ಮಾತ್ರ ಅಂತಹ ಮನೆಗಳನ್ನು ನೆಲಸಮವನ್ನು ಮಾಡಬಹುದು. ಅಂತಹ ಪ್ರಕರಣಗಳಲ್ಲಿಯೂ ಮೊದಲ ನೋಟಿಸ್ ನೀಡಿ, ಉತ್ತರಿಸಲು ಸಮಯ ಕೊಡಬೇಕು. ನಂತರ ಕ್ರಮ ಕೈಗೊಳ್ಳಬೇಕು” ಎಂದು ಪೀಠ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X