ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್‌

Date:

  • ಪುಣೆಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್
  • ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಸಾವರ್ಕರ್‌ ವಿಚಾರ ಲಂಡನ್‌ನಲ್ಲಿ ಪ್ರಸ್ತಾಪಿಸಿದ್ದ ರಾಹುಲ್

ವಿನಾಯಕ ದಾಮೋದರ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್, ರಾಹುಲ್ ಗಾಂಧಿ ವಿರುದ್ಧ ಪುಣೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 

- Advertisement -

ರಾಹುಲ್ ಗಾಂಧಿ ತಮ್ಮ ಲಂಡನ್ ಭಾಷಣದಲ್ಲಿ ಸಾವರ್ಕರ್ ವಿರುದ್ಧ ತಪ್ಪಾಗಿ ಆರೋಪಿಸಿದ್ದಕ್ಕೆ ಈ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವರ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಹಾಗೂ 500ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಾನು ನ್ಯಾಯಾಲಯದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ನ್ಯಾಯಾಲಯದ ಅಧಿಕಾರಿ ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ. ಇನ್ನೂ ಪ್ರಕರಣ ಸಂಖ್ಯೆ ದೊರಕಿಲ್ಲ” ಎಂದು ಸಾವರ್ಕರ್ ಹೇಳಿದ್ದಾರೆ. 

40 ವರ್ಷ ವಯಸ್ಸಿನ ಸತ್ಯಕಿ ಅವರು ವಿ ಡಿ ಸಾವರ್ಕರ್‌ ಅವರ ಸಹೋದರ, ನಾರಾಯಣ ದಾಮೋದರ್‌ ಸಾವರ್ಕರ್‌ ಅವರ ಮೊಮ್ಮಗ.

ಲಂಡನ್‌ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಸಾವರ್ಕರ್ ವಿಷಯವನ್ನು ಪ್ರಸ್ತಾಪಿಸಿದ್ದರು. “ತಾವು ಹಾಗೂ ತಮ್ಮ ಐದಾರು ಮಂದಿ ಸ್ನೇಹಿತರು ಸೇರಿ ಓರ್ವ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದೆವು. ಆಗ ತಮಗೆ ಸಂತೋಷವಾಗಿತ್ತು” ಎಂದು ಸಾವರ್ಕರ್ ತಮ್ಮ ಪುಸ್ತಕದಲ್ಲಿ ಬರೆದಿರುವುದಾಗಿ ರಾಹುಲ್ ಗಾಂಧಿ ಸಭೆಗೆ ತಿಳಿಸಿದ್ದರು.

ಈ ಘಟನೆಯನ್ನು ಉಲ್ಲೇಖಿಸಿದ್ದ ರಾಹುಲ್ ಗಾಂಧಿ, ಇದು ಹೇಡಿತನವಲ್ಲವೇ ಎಂದು ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಉಲ್ಲೇಖಿಸಿದ್ದ ಈ ಪ್ರಕರಣ ಕಲ್ಪಿತವಾದದ್ದು, ಸಾವರ್ಕರ್ ಜೀವನದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಸಾವರ್ಕರ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರು. ಮುಸ್ಲಿಮರಿಗೆ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳುವಂತೆ ಸಾವರ್ಕರ್ ಸಲಹೆ ನೀಡುತ್ತಿದ್ದರು ಎಂದು ಸತ್ಯಕಿ ಹೇಳಿದ್ದಾರೆ. 

ಮೋದಿ ಉಪನಾಮದ ಮಾನನಷ್ಟ ಪ್ರಕರಣ

ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಏಪ್ರಿಲ್ 3ರಂದು ಶಿಕ್ಷೆ ಆದೇಶ ಪ್ರಶ್ನಿಸಿ ಸೂರತ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ಮಾರ್ಚ್ 23ರಂದು ಸೂರತ್‌ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ನ್ಯಾಯಾಲಯ ಪ್ರಕರಣದಲ್ಲಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ಜಾಮೀನು ನೀಡಿ 30 ದಿನಗಳವರೆಗೆ ಕಾಲಾವಕಾಶ ಒದಗಿಸಿತು. ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಸಂಸದ ಸ್ಥಾನದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿದ ಕೆಲವು ದಿನಗಳ ನಂತರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ದೆಹಲಿ ಬಂಗಲೆಯನ್ನು ತೆರವು ಮಾಡುವಂತೆ ಲೋಕಸಭೆ ನೋಟಿಸ್ ನೀಡಿದೆ.

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲುಧಿಯಾನ ಏರಿಯಾದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಸರಕಾರದ ವತಿಯಿಂದ ನೀಡಲಾಗಿತ್ತು. ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...