ತನ್ನ ಸಹೋದರನಿಗೆ ಕಿಡ್ನಿ ದಾನ ಮಾಡಿದ್ದಕ್ಕೆ ಪತ್ನಿಗೆ ಫೋನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

Date:

Advertisements

ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರನಿಗೆ ಮಹಿಳೆ ಕಿಡ್ನಿ ದಾನ ಮಾಡಿದ್ದಾರೆ. ಇದರಿಂದ ಕೋಪಗೊಂಡ ಆಕೆಯ ಪತಿ ಆಕೆಗೆ ವಾಟ್ಸ್‌ಆಪ್ ಮೂಲಕ ತ್ರಿವಳಿ ತಲಾಖ್ ಹೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಹಿಳೆಯ ಪತಿ ಮೊಹಮ್ಮದ್ ರಶೀದ್ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ತರನ್ನುಮ್ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಬೈರಿಯಾಹಿ ಗ್ರಾಮದಲ್ಲಿ ತನ್ನ ತಾಯಿ ಮತ್ತು ಸಹೋದರ ಜತೆಗೆ ನೆಲೆಸಿದ್ದರು.

ಏನಿದು ಘಟನೆ?

Advertisements

ಕೆಲ ದಿನದ ಹಿಂದೆ ಮಹಿಳೆಯ ಸಹೋದರ ಮೊಹಮ್ಮದ್ ಶಾಕಿರ್‌ನಿಗೆ ಅನಾರೋಗ್ಯ ಉಂಟಾಗಿತ್ತು. ಈ ಹಿನ್ನೆಲೆ, ಸಹೋದರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯರು ಪರೀಕ್ಷೆ ನಡೆಸಿದ ವೇಳೆ ಕಿಡ್ನಿಯಲ್ಲಿ ಸಮಸ್ಯೆ ಇದೆ ಎಂದು ತಿಳಿಸಿದ್ದಾರೆ. ಸಹೋದರನ ಜೀವ ಉಳಿಯಬೇಕಾದರೇ, ಕಿಡ್ನಿ ಬದಲಾವಣೆ ಮಾಡಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ವೈದ್ಯರು ಹೇಳಿದ ನಂತರ ಹಿಂದೆಮುಂದೆ ಯೋಚನೆ ಮಾಡದ ಮಹಿಳೆ ತನ್ನ ಕಿಡ್ನಿ ಕೊಡುವುದಾಗಿ ವೈದ್ಯರ ಬಳಿ ತಿಳಿಸಿದ್ದಾಳೆ. ಅದರಂತೆಯೇ, ಆಸ್ಪತ್ರೆಯಲ್ಲಿ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ, ಮಹಿಳೆಯ ಒಂದು ಕಿಡ್ನಿಯನ್ನು ಆಕೆಯ ಸಹೋದರನಿಗೆ ಕಸಿ ಮಾಡಿದ್ದಾರೆ.

ಮಹಿಳೆ ಈ ಬಗ್ಗೆ ಗಂಡನಿಗೆ ತಿಳಿಸಿರಲಿಲ್ಲ. ಆತನ ಬಳಿ ಈ ವಿಚಾರವಾಗಿ ಚರ್ಚೆ ಸಹ ಮಾಡಿರಲಿಲ್ಲ. ಇದಾದ ಬಳಿಕ ಇಬ್ಬರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆ ಬಳಿಕ ಮಹಿಳೆ ನಡೆದ ಘಟನೆ ಬಗ್ಗೆ ತನ್ನ ಗಂಡನಿಗೆ ಕರೆ ಮಾಡಿ ತಿಳಿಸಿದ್ದಾಳೆ. ಈ ವಿಚಾರ ಕೇಳುತ್ತಲೇ ಕೋಪಗೊಂಡ ಆಕೆಯ ಪತಿ ಕಿಡ್ನಿ ಬದಲಾಗಿ ಆಕೆಯ ಸಹೋದರನ ಬಳಿ ₹40 ಲಕ್ಷ ಕೇಳುವಂತೆ ಒತ್ತಡ ಹೇರಿದ್ದಾನೆ. ಮಹಿಳೆ ಆತನ ಸಲಹೆಯನ್ನು ಪಾಲಿಸಲು ನಿರಾಕರಿಸಿದ್ದರಿಂದ, ವ್ಯಕ್ತಿ ವಾಟ್ಸಾಪ್ ಕರೆ ಮೂಲಕ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸಂಖ್ಯೆ ಮೂರು ಪಟ್ಟು ಏರಿಕೆ

ತ್ರಿವಳಿ ತಲಾಖ್ ನಂತರ, ತರನ್ನುಮ್ ಅನ್ನು ಆಕೆಯ ಗಂಡನ ಮನೆಯವರು ಹೊರಹಾಕಿದ್ದಾರೆ. ಈಗ ಆಕೆ ತನ್ನ ಹೆತ್ತವರೊಂದಿಗೆ ಉಳಿದುಕೊಂಡಿದ್ದಾಳೆ. ತರನ್ನುಮ್ ಅವರು ಜೈತಾಪುರ ಗ್ರಾಮದ ಮೊಹಮ್ಮದ್ ರಶೀದ್ ಅವರನ್ನು ಸುಮಾರು 25 ವರ್ಷಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾಗಿ ಐದು ವರ್ಷಗಳಾದರೂ ತರನ್ನುಮ್ ಅವರು ಗರ್ಭಿಣಿಯಾಗಿರಲಿಲ್ಲ. ಹೀಗಾಗಿ, ರಶೀದ್ ಎರಡನೇ ಮದುವೆಯಾಗಿ ಸೌದಿ ಅರೇಬಿಯಾಕ್ಕೆ ಸಂಪಾದಿಸಲು ತೆರಳಿದ್ದರು.

ತರನ್ನುಮ್ ಹಿರಿಯ ಸಹೋದರ ಮೊಹಮ್ಮದ್ ಶಾಕಿರ್ ಕಳೆದ ಒಂದೂವರೆ ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತರನ್ನುಮ್ ಹೇಳಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೊಹಮ್ಮದ್ ರಶೀದ್ ಭಾರತಕ್ಕೆ ಮರಳಿದ ಕೂಡಲೇ ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

2019ರಲ್ಲಿ ದೇಶದಲ್ಲಿ ತ್ರಿವಳಿ ತಲಾಖ್ ಪದ್ಧತಿಯನ್ನು ಕಾನೂನು ಬಾಹಿರ ಮತ್ತು ಅಸಂವಿಧಾನಿಕವೆಂದು ಘೋಷಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X