ಕೇರಳ | ಸಾರ್ವಜನಿಕ ಸ್ಥಳದಲ್ಲೇ ಪತ್ನಿಯನ್ನು ವಾಹನ ಸಮೇತ ಪೆಟ್ರೋಲ್ ಹಾಕಿ ಸುಟ್ಟು ಕೊಂದ ಪತಿ!

Date:

Advertisements

ಪತಿಯೊಬ್ಬ ಸಾರ್ವಜನಿಕ ಸ್ಥಳದಲ್ಲೇ ಪತ್ನಿಯನ್ನು ವಾಹನ ಸಮೇತ ಪೆಟ್ರೋಲ್ ಹಾಕಿ ಸುಟ್ಟು ಕೊಂದ ಭೀಕರ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೊಲ್ಲಂ ಜಿಲ್ಲೆಯ ಚೆಮ್ಮಾಮುಖ್ ಎಂಬಲ್ಲಿ ಪತಿರಾಯನೋರ್ವ ತನ್ನ ಪತ್ನಿಯನ್ನು ಪೆಟ್ರೋಲ್ ಹಾಕಿ ಕೊಂದಿದ್ದು, ಜನರು ಭಯಭೀತಗೊಳ್ಳುವಂತೆ ಮಾಡಿದ್ದಾನೆ.

ಪತ್ನಿ ಅನಿಲ ಎಂಬಾಕೆಯನ್ನು ಪತಿ ಪದ್ಮರಾಜ್ ವಾಹನ ಸಮೇತ ಪೆಟ್ರೋಲ್ ಸುರಿದು ಕೊಂದಿದ್ದು, ನಂತರ ಹತ್ತಿರದಲ್ಲೇ ಇದ್ದ ಪೋಲಿಸ್ ಠಾಣೆಗೆ ತೆರಳಿ ಶರಣಾಗತನಾಗಿದ್ದಾನೆ.

Advertisements

ಮಂಗಳವಾರ ರಾತ್ರಿ ಸುಮಾರು ರಾತ್ರಿ ಒಂಬತ್ತು ಗಂಟೆಯ ಸುಮಾರಿಗೆ ಪತ್ನಿಯ ಬೇಕರಿ ಉದ್ಯಮ ವ್ಯವಹಾರ ಹಾಗೂ ವಿವಾಹೇತರ ಸಂಬಂಧದ ಬಗ್ಗೆ ಶಂಕೆಗೊಂಡು ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಘಟನೆಯ ಸಂದರ್ಭದಲ್ಲಿ ಪತ್ನಿ ಅನಿಲ ಚಲಾಯಿಸುತ್ತಿದ್ದ ವಾಹನದಲ್ಲಿ ಮತ್ತೊಬ್ಬ ವ್ಯಕ್ತಿಯೂ ಇದ್ದು, ಆತನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಕಿ ಹಚ್ಚಿ ಕೊಂದ ಘಟನೆಯ ಹಿಂದೆ ಉದ್ಯಮ ಆರಂಭಿಸಿದ ವಿಚಾರವೇ ಕಾರಣ ಎಂಬ ಮಾಹಿತಿ ಹೊರಬಿದ್ದಿದೆ. ಸ್ನೇಹಿತ ಹನೀಶ್ ಎಂಬಾತನೊಂದಿಗೆ ಬೇಕರಿ ಆರಂಭಿಸಿದ್ದೇ ಅನಿಲಾಳ ಕೊಲೆಗೆ ಪ್ರಮುಖ ಕಾರಣ ಎಂದು ಸ್ಥಳೀಯ ನಿವಾಸಿಯೋರ್ವರು ಮಾಧ್ಯಮಗಳಿಗೆ ಬಹಿರಂಗಪಡಿಸಿದ್ದಾರೆ.

ಆರೋಪಿ ಪದ್ಮರಾಜ್, ತನ್ನ ಪತ್ನಿಯೊಂದಿಗೆ ಹನೀಶ್ ಆರಂಭಿಸಿದ್ದ ಬೇಕರಿ ಉದ್ಯಮದ ಪಾರ್ಟ್ನರ್ ಶಿಪ್ ಬಿಟ್ಟುಕೊಡುವಂತೆ ಒತ್ತಾಯಿಸಿದ್ದ. ಆದರೆ ಬೇಕರಿ ಆರಂಭಿಸಲು ವ್ಯಯಿಸಿದ್ದ 1.49 ಲಕ್ಷ ರೂಪಾಯಿ ವಾಪಸ್ ನೀಡಿದರೆ ತೊರೆಯುತ್ತೇನೆ ಎಂದು ಹನೀಶ್ ತಿಳಿಸಿದ್ದ. ಇದಕ್ಕೆ ಪ್ರತಿಕ್ರಿಯಿಸಿದ್ದ ಆರೋಪಿ ಪದ್ಮರಾಜನ್, ಡಿ. 10ರಂದು ಹಣ ನೀಡುವುದಾಗಿ ಭರವಸೆ ನೀಡಿದ್ದ ಎಂದು ತಿಳಿದು ಬಂದಿದೆ. ಇದಾದ ಬಳಿಕ ಪದ್ಮರಾಜ್, ಇಬ್ಬರನ್ನೂ ಕೊಲ್ಲಲು ಯತ್ನಿಸಿದ್ದಾನೆ ಎಂದು ಸ್ಥಳೀಯ ನಿವಾಸಿ ಮಾಹಿತಿ ನೀಡಿದ್ದಾನೆ.

ಸದ್ಯ ಆರೋಪಿ ಪದ್ಮರಾಜನ್ ಶರಣಾಗತನಾದ್ದರಿಂದ ಆತನನ್ನು ಪೊಲೀಸರು ಬಂಧಿಸಿದ್ದು, ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X