‘ನಿಮ್ಮ ಸೋದರ ಅತ್ಯಾಚಾರವೆಸಗಿದ’ ಎಂದು ಹೇಳಿದಕ್ಕೆ ಪತ್ನಿಯ ಕತ್ತು ಹಿಸುಕಿದ ಪತಿ

Date:

Advertisements

ನಿಮ್ಮ ಸೋದರ ಅತ್ಯಾಚಾರವೆಸಗಿದ ಎಂದು ಹೇಳಿದ್ದಕ್ಕೆ ಪತ್ನಿಯ ಎದೆಯ ಮೇಲೆ ಕುಳಿತುಕೊಂಡ ಪತಿ ಆಕೆಯ ಕತ್ತು ಹಿಸುಕಿದ ಆಘಾತಕಾರಿ ಘಟನೆ ಉತ್ತರ ಪ್ರದೇಶ ದ ಮುಜಾಫ್ಫರ್‌ನಗರದಲ್ಲಿ ನಡೆದಿದೆ.

ಮಹಿಳೆಯ ಪತಿಯ ಸಹೋದರ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಕೂಡ ಮಾಡಿಕೊಂಡಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ನೀವು ಮನೆಯಲ್ಲಿ ಇಲ್ಲದ ವೇಳೆ ನಿಮ್ಮ ಸೋದರ ನನ್ನ ಮೇಲೆ ಅತ್ಯಾಚಾರವೆಸಗಿದ’ ಎಂದು ಮಹಿಳೆಯು ತನ್ನ ಪತಿಗೆ ಹೇಳಿದ್ದಕ್ಕೆ ಅತ ಕೋಪಗೊಂಡಿದ್ದಾನೆ. ನಂತರ ನೀನು ನನ್ನ ಹೆಂಡತಿಯಲ್ಲ ಇನ್ನು ಮುಂದೆ ನೀನು ನನ್ನ ಅತ್ತಿಗೆ ಎಂದಿದ್ದಾನೆ.

Advertisements

ಮರುದಿನ ಪತಿ ಹಾಗೂ ಆತನ ಸೋದರ ಮಹಿಳೆ ಇದ್ದ ಕೊಠಡಿಗೆ ಆಗಮಿಸಿದ್ದಾರೆ. ಪತ್ನಿಯ ಎದೆಯ ಮೇಲೆ ಕುಳಿತ ಪತಿ ದುಪ್ಪಟದಿಂದ ಆಕೆಯ ಕುತ್ತಿಗೆ ಹಿಸುಗಿದ್ದಾನೆ. ಇದನ್ನು ಆಕೆಯ ಸೋದರ ವಿಡಿಯೋ ರೆಕಾರ್ಡ್‌ ಕೂಡ ಮಾಡಿಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ದಾಳಿಯಿಂದ ಬದುಕುಳಿದಿರುವ ಮಹಿಳೆಯು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹರಿದಾಡಿದ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

“ಮಹಿಳೆಯ ಪತಿ ಹಾಗೂ ಆಕೆಯ ಸಹೋದರನ ವಿರುದ್ಧ ಐಪಿಸಿ ಸೆಕ್ಷನ್ 376, 307 ಹಾಗೂ 328 ಸೆಕ್ಷನ್‌ಗಳಡಿಯಲ್ಲಿ ದೂರು ದಾಖಲಿಸಲಾಗಿದೆ”ಎಂದು ಪೊಲೀಸ್ ವರಿಷ್ಟಾಧಿಕಾರಿ ಸತ್ಯನಾರಾಯಣ ಪ್ರಜಾಪತ್ ತಿಳಿಸಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ತಿಳಿಸಿದ್ದಾರೆ.

ಈ ಘಟನೆ ಬೆಳಕಿಗೆ ಬರುವ ಮುನ್ನವೆ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ. ಈತನ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X