ಮುಸ್ಲಿಂ ಮಹಿಳೆಯರ ಮುಖ ತೋರಿಸಿ ಮತ ಹಾಕಲು ಸೂಚಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ವಿರುದ್ಧ ಎಫ್‌ಐಆರ್

Date:

Advertisements

ಹೈದರಾಬಾದ್‌ನ ಬಿಜೆಪಿ ಅಭ್ಯರ್ಥಿ, ವಿವಾದಿತ ನಾಯಕಿ ಕೊಂಪೆಲ್ಲಾ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ತಮ್ಮ ಮತದಾರರ ಗುರುತಿನ ಚೀಟಿಯಲ್ಲಿರುವ ಫೋಟೋಗಳೊಂದಿಗೆ ಹೊಂದಿಸಲು ತಮ್ಮ ಮುಖವನ್ನು ತೋರಿಸುವಂತೆ ಒತ್ತಾಯಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

ಇಂದು ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಚುನಾವಣೆಯಲ್ಲಿ ಹೆಚ್ಚು ಧಾರ್ಮಿಕ ದ್ವೇಷಪೂರಿತ ಭಾಷಣಕ್ಕೆ ಕುಖ್ಯಾತರಾದ ಅಭ್ಯರ್ಥಿಗಳ ಪೈಕಿ ಮಾಧವಿ ಲತಾ ಕೂಡ ಒಬ್ಬರು. ಅವರು ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಕಡಿಮೆಯಿದ್ದರೂ ಹೈದರಾಬಾದ್‌ನಿಂದ ನಾಲ್ಕು ಬಾರಿ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮಾಧವಿ ಲತಾ ಅವರ ಗುರುತನ್ನು ಪರಿಶೀಲಿಸಲು ಯಾರೊಬ್ಬರ ಮುಸುಕನ್ನು ಎತ್ತುವ ಹಕ್ಕು ಯಾವುದೇ ಅಭ್ಯರ್ಥಿಗೆ ಇಲ್ಲದಿರುವುದರಿಂದ ಅವರ ವಿರುದ್ಧ ಪೊಲೀಸರು, ಐಪಿಸಿ ಸೆಕ್ಷನ್ 171ಸಿ, 186,505(1) ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಎಫ್‌ಐಆರ್ ದಾಖಲಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ರೊನಾಲ್ಡ್ ರಾಸ್ ತಿಳಿಸಿದ್ದಾರೆ.

Advertisements

“ಒಂದು ವೇಳೆ ಅಭ್ಯರ್ಥಿಗಳಿಗೆ ಮತದಾರರ ಬಗ್ಗೆ ಏನೇ ಅನುಮಾನವಿದ್ದಲ್ಲಿ, ಮತದಾರರ ಗುರುತನ್ನು ಪರಿಶೀಲಿಸಲು ಚುನಾವಣಾಧಿಕಾರಿಯವರ ಬಳಿ ವಿನಂತಿಸಿಕೊಳ್ಳಬಹುದು. ಖುದ್ದು ಅವರಾಗಿಯೇ ಈ ರೀತಿ ಮಾಡುವಂತಿಲ್ಲ. ಹಾಗಾಗಿ, ತಮ್ಮಿಷ್ಟದಂತೆ ವರ್ತಿಸಿರುವ ಮಾಧವಿ ಲತಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X