ನಾನು ಬ್ರಾಹ್ಮಣ, ಮೀಸಲಾತಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಮ್ಮ ಸಮುದಾಯಕ್ಕಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

Date:

Advertisements

ಮಹಾರಾಷ್ಟ್ರದಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಆದರೆ, ಉತ್ತರ ಭಾರತದಲ್ಲಿ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನಾನು ಬ್ರಾಹ್ಮಣ ಸಮುದಾಯದವನು. ದೇವರ ದಯೆಯಿಂದಾಗಿ ಮೀಸಲಾತಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಮ್ಮ ಸಮುದಾಯಕ್ಕೆ ಬಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ತಮ್ಮ ಬ್ರಾಹ್ಮಣಿಕೆ ಮತ್ತು ಮೇಲ್ಪಂಕ್ತಿಯ ಅಹಂಅನ್ನು ಪ್ರದರ್ಶಿಸಿದ್ದಾರೆ.

ಮರಾಠಾ, ಒಬಿಸಿ ಮತ್ತು ಬಂಜಾರ ಮೀಸಲಾತಿ ವಿಚಾರವು ಮಹಾರಾಷ್ಟ್ರದಲ್ಲಿ ಭಾರೀ ಹೋರಾಟ, ಚರ್ಚೆಗಳು ನಡೆಯುತ್ತಿವೆ. ರಾಜಕೀಯ ಆಯಾಮವನ್ನು ಪಡೆದುಕೊಂಡಿವೆ. ಇದೇ ಸಮಯದಲ್ಲಿ, ನಿತಿನ್ ಗಡ್ಕರಿ ಅವರು ಬ್ರಾಹ್ಮಣ್ಯದ ಹೆಗ್ಗಳಿಕೆ ಮತ್ತು ಮೀಸಲಾತಿ ವಿರೋಧಿ ಧೋರಣೆಯನ್ನು ವ್ಯಕ್ತಪಡಿಸಿದ್ದಾರೆ.

ನಾಗ್‌ಪುರದಲ್ಲಿ ನಡೆದ ಹಲ್ಬಾ ಫೆಡರೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, “ಬ್ರಾಹ್ಮಣ ಸಮುದಾಯಕ್ಕೆ ಮೀಸಲಾತಿ ಸಿಗದೇ ಇರುವುದು ದೇವರ ಆಶೀರ್ವಾದವೆಂದು ಭಾವಿಸುತ್ತೇನೆ. ಯಾವುದೇ ವ್ಯಕ್ತಿಯ ಪ್ರಾಮುಖ್ಯತೆಯನ್ನು ಅವರ ಜಾತಿ, ಪಂಗಡ, ಧರ್ಮ ಅಥವಾ ಲಿಂಗದಿಂದ ನಿರ್ಧರಿಸಲಾಗುವುದಿಲ್ಲ. ಬದಲಾಗಿ, ಅವರ ಗುಣಗಳು ಮತ್ತು ಸಾಧನೆಗಳಿಂದ ನಿರ್ಧರಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

“ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯವು ಪ್ರಾಮುಖ್ಯತೆ ಹೊಂದಿದೆ. ಇಲ್ಲಿ, ಬ್ರಾಹ್ಮಣ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಆದರೆ, ಬಿಹಾರ, ಉತ್ತರ ಪ್ರದೇಶದಂತಹ ಉತ್ತರ ಭಾರತದ ರಾಜ್ಯಗಳಲ್ಲಿ ದುಬೆಗಳು, ತ್ರಿಪಾಠಿಗಳು ಹಾಗೂ ಮಿಶ್ರಾ ರೀತಿಯ ಬ್ರಾಹ್ಮಣ ಸಮುದಾಯಗಳು ಗಣನೀಯ ಸಾಮಾಜಿಕ ಮತ್ತು ರಾಜಕೀಯ ಪ್ರಭಾವ ಹೊಂದಿವೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X