ಚಿಲ್ಲರೆ ಅಂಗಡಿ ಮಾಲೀಕನಿಗೆ 141 ಕೋಟಿ ರೂ. ತೆರಿಗೆ ನೋಟಿಸ್ ಕೊಟ್ಟ ಐಟಿ

Date:

Advertisements

ಚಿಲ್ಲರೆ ದಿನಸಿ ಅಂಗಡಿ ನಡೆಸುತ್ತಿದ್ದ ಮಾಲೀಕನಿಗೆ ಬರೋಬ್ಬರಿ 141 ಕೋಟಿ ರೂ.ಗಳ ತೆರಿಗೆ ನೋಟಿಸ್‌ಅನ್ನು ಆದಾಯ ತೆರಿಗೆ ಇಲಾಖೆ ನೀಡಿದೆ. ನೋಟಿಸ್‌ ನೋಡಿ ಅಂಗಡಿ ಮಾಲೀಗ ದಂಗಾಗಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ನಯಾಗಂಜ್ ನಿವಾಸಿ ಸುಧೀರ್‌ ಅವರಿಗೆ ಐಟಿ ಇಲಾಖೆ ನೋಟಿಸ್‌ ನೀಡಿದೆ. ಸುಧೀರ್ ಅವರು ತಮ್ಮ ಮನೆಯ ಭಾಗವೇ ಆಗಿರುವ ಸಣ್ಣ ಮಳಿಗೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು. ಆದರೆ, ಅವರು ದೆಹಲಿಯಲ್ಲಿ ಆರು ಸಂಸ್ಥೆಗಳನ್ನು ನಡೆಸುತ್ತಿದ್ದು, 141 ಕೋಟಿ ರೂ. ವಹಿವಾಟು ನಡೆಸಿದ್ದಾರೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ನೋಟಿಸ್‌ ಬಗ್ಗೆ ಪ್ರತಿಕ್ರಿಯಿಸಿರುವ ಅಂಗಡಿ ಮಾಲೀಕ ಸುಧೀರ್, “ದೆಹಲಿಯಲ್ಲಿ ಆರು ಸಂಸ್ಥೆಗಳನ್ನು ಸ್ಥಾಪಿಸಲು ನನ್ನ ಪಾನ್ ಕಾರ್ಡ್ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅವುಗಳ ವಹಿವಾಟಿಗೆ ನನ್ನ ಹೆಸರು ತೋರಿಸಲಾಗಿದೆ. ಆದರೆ, ಆ ಯಾವುದೇ ಕಂಪನಿಗಳೊಂದಿಗೆ ನನಗೆ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ ‘ಭಾಯಿ ಭಾಯಿ’ ಎನ್ನುತ್ತಿದ್ದಾರೆ ಮೋದಿ; ಇದು ಸಾಧ್ಯವೇ?

ಸುಧೀರ್ ಅವರು ಖುರ್ಜಾ ಪೊಲೀಸ್ ಠಾಣೆ ದೂರು ದಾಖಲಿಸಿದ್ದಾರೆ. ಅವರು ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಠಾಣಾ ಅಧಿಕಾರಿ ಪಂಕಜ್ ರಾಯ್ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲು, ಶೆಲ್ ಕಂಪನಿಗಳನ್ನು ಆರಂಭಿಸಲು, ಸಾಲ ಪಡೆಯಲು ಹಾಗೂ ಇತರ ಆರ್ಥಿಕ ವಂಚನೆಗಳಿಗಾಗಿ ಬೇರೆಯವರ ಪಾನ್‌ ಕಾರ್ಟ್‌ಗಳನ್ನು ಬಳಸಿಕೊಂಡು, ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಕ್ರೆಡಿಟ್ ವರದಿಗಳನ್ನು ಆಗ್ಗಾಗ್ಗೆ ಪರಿಶೀಲಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X