ಇಡುಕ್ಕಿ | ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

Date:

ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ನಿಖರ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.

- Advertisement -

ಶುಕ್ರವಾರ ಇಡೀ ದಿನ ಮನೆಯ ಬಾಗಿಲು ಮುಚ್ಚಿದಂತೆಯೇ ಇತ್ತು. ಮನೆಯಲ್ಲಿದ್ದ ಯಾರೊಬ್ಬರೂ ಹೊರಗೆ ಸುಳಿದಿರಲಿಲ್ಲ. ಇದನ್ನು ಗಮನಿಸಿದ ನೆರೆಹೊರೆಯವರು ಅನುಮಾನಗೊಂಡು ಮನೆಯ ಬಳಿ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ, ಅವರ ಮೃತದೇಹಗಳು ಪತ್ತೆಯಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮೃತರನ್ನು ಸಂಜೀವ್ ಮೋಹನನ್ (34), ಅವರ ಪತ್ನಿ ರೇಷ್ಮಾ (30) ಹಾಗೂ ಅವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

ಇಡುಕ್ಕಿಯ ಉಪ್ಪುತರಾದ ಪಟ್ಟತಂಬಲಂ ಪ್ರದೇಶದಲ್ಲಿ ಕುಟುಂಬವು ವಾಸವಾಗಿತ್ತು. ಸಂಜೀವ್ ಅವರು ಆಟೋ ಚಾಲಕರಾಗಿ ದುಡಿಮೆ ಮಾಡುತ್ತಿದ್ದರು. ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು ಎಂದು ಹೇಳಲಾಗಿದೆ.

ಪೋಷಕರು ತಮ್ಮ ಮಕ್ಕಳನ್ನು ಕೊಂದು, ಬಳಿಕ ಅವರೂ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯಗಳಿವೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...