‘ಮೋದಿಯನ್ನು ಹೊಗಳುವ ವಿವೇಕ್ ಒಬೆರಾಯ್, ಮಾಧವನ್ ಭಾರತ ಬಿಟ್ಟು ದುಬೈನಲ್ಲಿ ವಾಸವೇಕೆ’: ರಾಜ್ ಠಾಕ್ರೆ ವಾಗ್ದಾಳಿ

Date:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಾರತದಲ್ಲಿ “ಎಲ್ಲವನ್ನೂ ಅತ್ಯುತ್ತಮವಾಗಿ ಮಾಡಿದೆ” ಎಂದು ಭಾವಿಸುವುದಾದರೆ, ನಟರಾದ ವಿವೇಕ್ ಒಬೆರಾಯ್ ಮತ್ತು ಆರ್. ಮಾಧವನ್ ದುಬೈನಲ್ಲಿ ಏಕೆ ನೆಲೆಸಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಖಾರವಾಗಿ ಪ್ರಶ್ನಿಸಿದ್ದಾರೆ.

- Advertisement -

ಶನಿವಾರ ಮುಂಬೈನಲ್ಲಿ ಎಂಎನ್‌ಎಸ್‌ನ ವಿದ್ಯಾರ್ಥಿ ವಿಭಾಗವಾದ ‘ಮಹಾರಾಷ್ಟ್ರ ನವನಿರ್ಮಾಣ ವಿದ್ಯಾರ್ಥಿ ಸೇನೆ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಠಾಕ್ರೆ, ದೇಶದ ಸಾವಿರಾರು ಕೈಗಾರಿಕೋದ್ಯಮಿಗಳು “ತಮ್ಮ ಗಂಟುಮೂಟೆ ಕಟ್ಟಿಕೊಂಡು ದೇಶ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

2019ರಲ್ಲಿ ಬಿಡುಗಡೆಯಾದ ಮೋದಿಯವರ ಜೀವನಾಧಾರಿತ ಚಿತ್ರದಲ್ಲಿ ಪ್ರಧಾನಿ ಪಾತ್ರವನ್ನು ನಿರ್ವಹಿಸಿದ್ದ ವಿವೇಕ್ ಒಬೆರಾಯ್ ಅವರ ಕುರಿತು ಉಲ್ಲೇಖಿಸಿದ ಅವರು, “ಮೋದಿ ಕುರಿತು ಸಿನಿಮಾ ಮಾಡಿದ ವಿವೇಕ್ ಒಬೆರಾಯ್ ಕೂಡ ದುಬೈನಲ್ಲಿ ವಾಸಿಸಲು ಹೋಗಿದ್ದಾರೆ. ಇನ್ನು ಪ್ರಧಾನಿ ಮೋದಿಯವರನ್ನು ಹೊಗಳುವ ಆರ್. ಮಾಧವನ್ ಎಲ್ಲಿ ವಾಸಿಸುತ್ತಿದ್ದಾರೆ? ಅವರೂ ದುಬೈನಲ್ಲಿಯೇ ಇದ್ದಾರೆ. ನಿಮಗೆ ಭಾರತದ ಬಗ್ಗೆ ಅಷ್ಟೊಂದು ಪ್ರೀತಿಯಿದ್ದರೆ, ಪ್ರಧಾನಿ ಮೋದಿಯವರ ಮೇಲೆ ಅಭಿಮಾನವಿದ್ದರೆ, ಮತ್ತು ಪ್ರಧಾನಿ ಮೋದಿಯವರು ಭಾರತವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ನೀವು ನಂಬುವುದಾದರೆ, ನೀವೇಕೆ ವಿದೇಶದಲ್ಲಿ ನೆಲೆಸಿದ್ದೀರಿ? ನಿಮ್ಮ ಕುಟುಂಬದೊಂದಿಗೆ ದುಬೈನಲ್ಲಿ ಏಕೆ ವಾಸಿಸುತ್ತಿದ್ದೀರಿ?” ಎಂದು ಠಾಕ್ರೆ ಪ್ರಶ್ನಿಸಿದ್ದಾರೆ.

“ಅವರು ಇಲ್ಲಿಗೆ ಬರುತ್ತಾರೆ, ‘ಧುರಂಧರ್’ ನಂತಹ ಸರ್ಕಾರಿ ಪ್ರಾಯೋಜಿತ ಚಿತ್ರದಲ್ಲಿ ಕೆಲಸ ಮಾಡುತ್ತಾರೆ, ನಂತರ ಮತ್ತೆ ದುಬೈಗೆ ಹಿಂತಿರುಗುತ್ತಾರೆ” ಎಂದು ಅವರು ಟೀಕಿಸಿದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಬಳಸಿದ ಭಾಷೆ ಅಸಮಂಜಸವಾಗಿತ್ತು ಎಂದು ರಾಜ್ ಠಾಕ್ರೆ ಇದೇ ವೇಳೆ ಹೇಳಿದರು.

ಇಂತಹ “ದಾರಿತಪ್ಪಿದ ಮಕ್ಕಳನ್ನು” ಕ್ಷಮಿಸಿ, ಸರಿಯಾದ ಮಾರ್ಗದಲ್ಲಿ ಮುನ್ನಡೆಸಬೇಕು ಎಂಬ ಪ್ರಧಾನಿಯವರ ಹೇಳಿಕೆಯನ್ನು ಪ್ರಸ್ತಾಪಿಸಿದ ಠಾಕ್ರೆ, “ನಾನು ಪ್ರಧಾನಿಯವರ ಹೇಳಿಕೆಯನ್ನು ಒಪ್ಪುತ್ತೇನೆ. ಯಾರೊಬ್ಬರೂ ಇಂತಹ ಕೀಳುಮಟ್ಟದ ಭಾಷೆಯನ್ನು ಬಳಸಬಾರದು. ಆದರೆ, ಈ ಮಾತನ್ನು ಅವರು ತಮ್ಮದೇ ಪಕ್ಷದವರಿಗೂ (ಬಿಜೆಪಿ) ಹೇಳಬೇಕು” ಎಂದು ತಿರುಗೇಟು ನೀಡಿದರು.

ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಅವರಿಂದ ಹಿಡಿದು ಠಾಕ್ರೆ ಕುಟುಂಬದವರೆಗಿನ ಮಹಾನ್ ನಾಯಕರನ್ನು ಬಿಜೆಪಿ ಟ್ರೋಲ್‌ಗಳು ಗುರಿಯಾಗಿಸುತ್ತವೆ ಎಂದು ಅವರು ಆರೋಪಿಸಿದರು. ಟ್ರೋಲ್ ಆಗುವ ಭೀತಿಯಿಂದಲೇ ಅನೇಕ ನಟರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಹಿಂಜರಿಯುತ್ತಾರೆ ಎಂದರು.

“ಅವರಿಗೂ (ಬಿಜೆಪಿ ಬೆಂಬಲಿಗರು) ಅವಹೇಳನಕಾರಿ ಭಾಷೆ ಬಳಸುವುದನ್ನು ನಿಲ್ಲಿಸಲು ಹೇಳಬೇಕು. ಬಿಜೆಪಿ ಟ್ರೋಲ್ ತಂಡಗಳೇ ಈ ಸಂಸ್ಕೃತಿಯನ್ನು ಪ್ರಾರಂಭಿಸಿದ್ದು. ನೀವು ಏನನ್ನು ಬಿತ್ತುತ್ತೀರೋ, ಅದನ್ನೇ ಬೆಳೆಯುತ್ತೀರಿ” ಎಂದು ಠಾಕ್ರೆ ಎಚ್ಚರಿಸಿದರು. ಇತರರಿಗೂ ತಾಯಂದಿರುತ್ತಾರೆ, ಹಾಗಾಗಿ ಅವರನ್ನೂ ನಿಂದಿಸಬಾರದು ಎಂದು ಅವರು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...