ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಆಗುತ್ತದೆ: ಮಹಾರಾಷ್ಟ್ರ ಬಿಜೆಪಿ ಮಂತ್ರಿಯ ವಿವಾದಾತ್ಮಕ ಹೇಳಿಕೆ

Date:

Advertisements

ದಿನವೂ ಮೀನು ತಿನ್ನುವುದರಿಂದ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಹೊಳೆಯುತ್ತದೆ ಎಂದು ಮಹಾರಾಷ್ಟ್ರದ ಬುಡಕಟ್ಟು ಸಚಿವ ವಿಜಯ್‌ಕುಮಾರ್ ಗವಿತ್ ಹೇಳಿಕೆ ನೀಡಿದ್ದಾರೆ.  

ಉತ್ತರ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯ ಬುಡಕಟ್ಟು ಸಚಿವ ವಿಜಯಕುಮಾರ್ ಗವಿತ್ ನೀಡಿದ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

‘ಪ್ರತಿದಿನ ಮೀನು ಸೇವಿಸುವ ಜನರ ಚರ್ಮವು ನಯವಾಗುತ್ತದೆ ಮತ್ತು ಅವರ ಕಣ್ಣುಗಳು ಹೊಳೆಯುತ್ತವೆ. ಯಾರಾದರೂ ನಿಮ್ಮನ್ನು ನೋಡಿದರೆ, ಆ ವ್ಯಕ್ತಿಯು ನಿಮ್ಮತ್ತ ಆಕರ್ಷಿತನಾಗುತ್ತಾನೆ. ಐಶ್ವರ್ಯಾ ರೈ ಬಗ್ಗೆ ನಾನು ನಿಮಗೆ ಹೇಳಿದ್ದೆನಾ? ಅವರು ಮಂಗಳೂರಿನ ಸಮುದ್ರ ತೀರದ ಬಳಿ ವಾಸಿಸುತ್ತಿದ್ದರು. ಅವರು ಪ್ರತಿ ದಿನ ಮೀನು ತಿನ್ನುತ್ತಿದ್ದರು. ನೀವು ಅವರ ಕಣ್ಣು ನೋಡಿದ್ದೀರಾ. ನಿಮ್ಮ ಕಣ್ಣು ಕೂಡ ಅದೇ ಥರ ಆಗುತ್ತದೆ’ ಎಂದು ಸಚಿವರು ಬಾಯಿ ಹರಿಬಿಟ್ಟಿದ್ದಾರೆ.

Advertisements

‘ಮೀನಿನಲ್ಲಿ ಕೆಲವು ಎಣ್ಣೆಗಳಿವೆ, ಅದು ನಿಮ್ಮ ಚರ್ಮವನ್ನು ನಯವಾಗಿಸುತ್ತದೆ’ ಎಂದು 68 ವರ್ಷದ ಸಚಿವ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಅವರ ಹೇಳಿಕೆಯು ವಿವಾದಕ್ಕೆ ಈಡಾಗಿದ್ದು, ಹಲವರ ಟೀಕೆಗೆ ಗುರಿಯಾಗುತ್ತಿದೆ.

ಎನ್‌ಸಿಪಿ ಶಾಸಕ ಅಮೋಲ್ ಮಿತ್ಕರಿ ಮಾತನಾಡಿ, ‘ಸಚಿವರು ಇಂಥ ಕ್ಷುಲ್ಲಕ ವಿಚಾರಗಳನ್ನು ಬಿಟ್ಟು ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು’ ಎಂದಿದ್ದಾರೆ. ಬಿಜೆಪಿಯ ಶಾಸಕರಾದ ನಿತೇಶ್ ರಾಣೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ನಾನು ದಿನವೂ ಮೀನು ತಿನ್ನುತ್ತೇನೆ. ನನ್ನ ಕಣ್ಣುಗಳು ಐಶ್ವರ್ಯ ರೈ ಥರ ಆಗಬೇಕಿತ್ತಲ್ಲಾ. ಇದರ ಬಗ್ಗೆ ಏನಾದರೂ ಸಂಶೋಧನೆ ನಡೆದಿದೆಯೇ ಎಂದು ಗವಿತ್ ಸಾಹೇಬರನ್ನು ಕೇಳುತ್ತೇನೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ವಿಜಯ್‌ಕುಮಾರ್ ಗವಿತ್ ಅವರ ಮಗಳು ಹೀನಾ ಗವಿತ್ ಬಿಜೆಪಿಯ ಲೋಕಸಭಾ ಸದಸ್ಯರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅವಿವೇಕದ ನಡೆನುಡಿ
    ಈರೀತಿ ಒಬ್ಬರನ್ನು ಮತ್ತೊಬ್ಬರೊಂದಿಗಿನ ವ್ಯತ್ಯಾಸ ದೊಂದಿಗೆ ಸಮೀಕರಿಸುವ ಅಥವಾ ಭಿನ್ನತೆಯನ್ನು ಕಾಣುವ ನೀಚ ಮನಸ್ಥಿತಿ ಇರುವವರೆಗೂ ಒಂದೇ ಭಾರತ
    ಒಂದೇ ಕಾನೂನು ಮತ್ತು ಬೇರೆ ಬೇರೆ ನ್ಯಾಯ ಅಷ್ಟೇ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X