ʼಆಜ್ ತಕ್ʼನ ನಿರೂಪಕ ಸುಧೀರ್ ಚೌಧರಿ ಕಾರ್ಯಕ್ರಮ ರದ್ದುಗೊಳಿಸಿದ ಐಐಟಿ-ಬಾಂಬೆ

Date:

Advertisements

ಆಜ್‌ ತಕ್‌ ನ ನಿರೂಪಕ ಸುಧೀರ್‌ ಚೌಧರಿ ಅವರನ್ನು ಇ-ಸಮ್ಮಿಟ್‌ 2024 ರಲ್ಲಿ ರವಿವಾರ ಭಾಷಣ ನೀಡಲು ಅಹ್ವಾನಿಸಿದ್ದ ಐಐಟಿ-ಬಾಂಬೆ, ಆದಿವಾಸಿಗಳು ಮತ್ತು ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಕುರಿತಂತೆ ಚೌಧರಿ ಅವರ ಹೇಳಿಕೆಗಳಿಗೆ ವಿದ್ಯಾರ್ಥಿಗಳ ಆಕ್ಷೇಪದ ಹಿನ್ನೆಲೆಯಲ್ಲಿ ಅವರ ಭಾಷಣವನ್ನು ಸಂಸ್ಥೆ ರದ್ದುಗೊಳಿಸಿದೆ.

ಸಂಸ್ಥೆಯ ಸಭಾಂಗಣದಲ್ಲಿ ಚೌಧರಿ ಭಾಷಣ ನೀಡಬೇಕಿತ್ತು, ಆದರೆ ಅವರ ಸ್ಥಾನದಲ್ಲಿ ಶಾಪ್‌ಕ್ಲೂಸ್‌ ಸ್ಥಾಪಕಿ ರಾಧಿಕಾ ಅಗರ್ವಾಲ್‌ ಅವರನ್ನು ಸಂಸ್ಥೆ ಆಹ್ವಾನಿಸಿದ ಕಾರಣ ಅವರು ಭಾಷಣ ನೀಡಿದ್ದಾರೆ.

ಕಳೆದ ಶನಿವಾರ ಆರಂಭಗೊಂಡ ಈ ಕಾರ್ಯಕ್ರಮವನ್ನು ವಿದ್ಯಾರ್ಥಿ ಸಂಘಟನೆ ಇ-ಸೆಲ್‌ ಆಯೋಜಿಸಿತ್ತು. ಆದರೆ ಕಾರ್ಯಕ್ರಮದ ಭಾಷಣಕಾರರ ಕುರಿತ ಅಂತಿಮ ನಿರ್ಧಾರವನ್ನು ಸಂಸ್ಥೆಯ ಆಡಳಿತ ತೆಗೆದುಕೊಳ್ಳುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಚೌಧರಿ ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಉದ್ಯಮಶೀಲತೆಯ ಕುರಿತು ಮಾತನಾಡಬೇಕಿತ್ತು. ಆದರೆ ಅವರ ಭಾಷಣ ಕೈಬಿಡಲಾಗಿರುವ ಕುರಿತು ಅವರಿಗೆ ಶನಿವಾರ ರಾತ್ರಿ ಮಾಹಿತಿ ನೀಡಲಾಯಿತು.

ಜನವರಿ 31ರ ತಮ್ಮ ಪ್ರೈಮ್‌ ಟೈಮ್‌ ಶೋ “ಬ್ಲ್ಯಾಕ್‌ ಎಂಡ್‌ ವೈಟ್‌”ನಲ್ಲಿ ಈಡಿಯಿಂದ ಬಂಧಿತ ಹೇಮಂತ್‌ ಸೊರೇನ್‌ ಕುರಿತು ಪ್ರತಿಕ್ರಿಯಿಸಿದ್ದ ಚೌಧರಿ, ಸೊರೇನ್‌ ಮತ್ತವರ ಕುಟುಂಬ “ಆದಿವಾಸಿಗಳಲ್ಲ” ಏಕೆಂದರೆ ಅವರು ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಾರೆ ಎಂದಿದ್ದರು.

ಸೊರೇನ್‌ ಜೈಲಿನಲ್ಲಿ ದಿನದೂಡಬೇಕಾದ ಕುರಿತು ಪ್ರತಿಕ್ರಿಯಿಸಿದ್ದ ಅವರು “ಕಾಡಿನಲ್ಲಿ ವಾಸಿಸುವ ಆದಿವಾಸಿಯಂತೆ 20, 30, 40 ವರ್ಷ ಹಿಂದೆ ಹೋಗುವುದು,” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X