ಗೋಮೂತ್ರ ಕುಡಿಯಿರಿ ಎಂದ ಐಐಟಿ ನಿರ್ದೇಶಕ; ವಿಡಿಯೋ ವೈರಲ್ – ವ್ಯಾಪಕ ಟೀಕೆ

Date:

Advertisements

ಗೋಮೂತ್ರದಲ್ಲಿ ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಹಾಗೂ ಜೀರ್ಣಕಾರಿ ಗುಣಲಕ್ಷಣಗಳು ಇವೆ. ಗೋಮೂತ್ರ ಕುಡಿಯುವುದು ಒಳ್ಳೆಯೆದು ಎಂದು ಮದ್ರಾನ್‌ನ ಐಐಟಿ ನಿರ್ದೇಶಕ ವಿ ಕಾಮಕೋಟಿ ಹೇಳಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಕಾಮಕೋಟಿ ಅವರನ್ನು ಟೀಕಿಸಿದ್ದಾರೆ.

‘ಮಾಟು ಪೊಂಗಲ್’ ಆಚರಣೆಯ ಸಮಯದಲ್ಲಿ ಚೆನ್ನೈನ ಗೋ ಸಂರಕ್ಷಣಾ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಮಕೋಟಿ ಭಾಗವಹಿಸಿ, ಮಾತನಾಡಿದ್ದರು. “ಗೋಮೂತ್ರವು ‘ಔಷಧೀಯ’ ಗುಣಗಳನ್ನು ಹೊಂದಿದೆ. ಅದನ್ನು ಸೇವನೆ ಮಾಡುವುದರಿಂದ ಇರಿಟೇಬಲ್ ಬೊವೆಲ್‌ ಸಿಂಡ್ರೋಮ್‌ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ” ಎಂದು ಹೇಳಿದ್ದಾರೆ.

ಅವರ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕ ಕಾರ್ತಿ ಪಿ ಚಿದಂಬರಂ, ‘ಐಐಟಿ ಮದ್ರಾಸ್ ನಿರ್ದೇಶಕರು ಹುಸಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಆಘಾತಕಾರಿ”ಯಾಗಿದೆ’” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ಈ ರೀತಿಯಲ್ಲಿ ಪ್ರಚಾರ ಮಾಡುವುದು, ಗೋಮೂತ್ರ ಸೇವನೆಯನ್ನು ಉತ್ತೇಜಿಸುವುದು ನಿಜಕ್ಕೂ ಕಾನೂನುಬಾಹಿರ ಮತ್ತು ಅನೈತಿಕ. ಇವರು ತಮ್ಮ ಕುಟುಂಬ ಅನಾರೋಗ್ಯಕ್ಕೆ ಒಳಗಾದಾಗ ಆಧುನಿಕ ಔಷಧಿಗಳ ಮೊರೆ ಹೋಗುತ್ತಾರೆ. ಬಡ ಜನರು ಕಳಪೆ ವೈದ್ಯಕೀಯ ಮೂಲಸೌಕರ್ಯದಲ್ಲೇ ಇರಬೇಕೆಂದು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ನೆಟ್ಟಿಗರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X