‘ಸಾಕ್ಷಿ ಮಲಿಕ್‌ ಬಗ್ಗೆ ಹೆಮ್ಮೆ ಪಡುತ್ತೇನೆ’ : ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಮತ್ತೊಬ್ಬ ಕುಸ್ತಿಪಟು ಪ್ರಧಾನಿಗೆ ಪತ್ರ

Date:

Advertisements

ಪ್ರಮುಖ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ನಂತರ ಮತ್ತೊಬ್ಬ ಅಗ್ರಮಾನ್ಯ ಕುಸ್ತಿಪಟು ವೀರೇಂದ್ರ ಸಿಂಗ್‌ ಅವರು ತಾನು ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ವಾಪಸ್‌ ನೀಡುವುದಾಗಿ ಹೇಳಿ ಕ್ರೀಡೆಯನ್ನು ತ್ಯಜಿಸುವುದಾಗಿ ಘೋಷಿಸಿದ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್‌ ಅವರಿಗೆ ಬೆಂಬಲ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವೀರೇಂದ್ರ ಸಿಂಗ್‌, “ಪ್ರಧಾನಿ ನರೇಂದ್ರ ಮೋದಿ ಅವರೇ, ನನ್ನ ಸಹೋದರಿ ಮತ್ತು ದೇಶದ ಸುಪುತ್ರಿಯಾದ ಸಾಕ್ಷಿ ಮಲಿಕ್ ಅವರ ಬಗ್ಗೆ ಹೆಮ್ಮೆಪಡುತ್ತೇನೆ, ಪದ್ಮಶ್ರೀ ಪ್ರಶಸ್ತಿಯನ್ನು ನನ್ನ ಸಹೋದರಿ ಸಾಕ್ಷಿ ಮಲಿಕ್ ಅವರಿಗಾಗಿ ಹಿಂದಿರುಗಿಸುತ್ತೇನೆ. ದೇಶದ ಅಗ್ರ ಕ್ರೀಡಾಪಟುಗಳು ಈ ರೀತಿಯ ನಿರ್ಧಾರ ಕೈಗೊಳ್ಳುವಂತೆ ವಿನಂತಿಸುತ್ತೇನೆ” ಎಂದು ಒಲಿಂಪಿಕ್ ಪದಕ ವಿಜೇತ ನೀರಜ್‌ ಚೋಪ್ರಾ ಹಾಗೂ ಖ್ಯಾತ ಕ್ರಿಕೆಟ್ ಆಟಗಾರ ಸಚಿನ್‌ ತೆಂಡೂಲ್ಕರ್‌ ಅವರಿಗೆ ಟ್ಯಾಗ್‌ ಮಾಡಿದ್ದಾರೆ.

ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಬಜರಂಗ್‌ ಪೂನಿಯಾ ಪದ್ಮಶ್ರೀ ಪ್ರಶಸ್ತಿ ವಾಪಸ್‌ ಮಾಡುವುದಾಗಿ ಪ್ರಧಾನಿಗೆ ಪತ್ರ ಬರೆದ ನಂತರ ದೆಹಲಿಯ ಪ್ರಧಾನ ಮಂತ್ರಿ ಕಚೇರಿ ಮಾರ್ಗದ ಪಾದಚಾರಿ ರಸ್ತೆಯಲ್ಲಿ ಪದಕವನ್ನು ಇರಿಸಿದರು. ನಂತರ ಪೊಲೀಸರು ಅದನ್ನು ವಶಕ್ಕೆ ಪಡೆದರು.

Advertisements

”ಮಹಿಳಾ ಕುಸ್ತಿಪಟುಗಳಿಗೆ ಗೌರವ ಸಿಗದಿದ್ದಾಗ ನಾನು ಈ ಗೌರವಕ್ಕೆ ಅರ್ಹನಲ್ಲ, 40 ದಿನಗಳಿಂದ ರಸ್ತೆಗಿಳಿದಿದ್ದೇವೆ, ಆದರೆ ಸರ್ಕಾರ ನೀಡಿದ ಭರವಸೆ ಈಡೇರಿಲ್ಲ. ನಮ್ಮ ಹೋರಾಟ ಸರ್ಕಾರದ ವಿರುದ್ಧ ಅಲ್ಲ, ಒಬ್ಬ ವ್ಯಕ್ತಿ ವಿರುದ್ಧ. ನಾನು ನ್ಯಾಯಾಂಗವನ್ನು ನಂಬುತ್ತೇನೆ. ಆದರೆ ಇತ್ತೀಚಿಗೆ ನನಗೆ ವ್ಯವಸ್ಥೆಯಲ್ಲಿ ನಂಬಿಕೆಯಿಡಲು ಸಾಧ್ಯವಾಗುತ್ತಿಲ್ಲ” ಎಂದು ಬಜರಂಗ್‌ ಪೂನಿಯಾ ಪದಕವಿರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಮಡಿಲಿನಲ್ಲಿರುವ ಕುಸ್ತಿಪಟುಗಳು: ಬ್ರಿಜ್‌ ಭೂಷಣ್ ಸಿಂಗ್

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್ ಕೂಡ ನಿನ್ನೆ ಕುಸ್ತಿ ತ್ಯಜಿಸಿದ ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ.

“ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಏಕೆ ಸಂಭವಿಸಿತು ಎಂದು ಉತ್ತರಿಸಬೇಕು. ನ್ಯಾಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ರಚನೆಯ ಮೇಲೆ ಇದು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ” ಎಂದು ವಿಜೇಂದರ್ ಸಿಂಗ್ ತಿಳಿಸಿದ್ದಾರೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಭಾರತದ ಅಗ್ರಗಣ್ಯ ಕುಸ್ತಿಪಟುಗಳು ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಕುಸ್ತಿಪಟುಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಬಂಧನಕ್ಕೆ ಒತ್ತಾಯಿಸಿ ಹಲವು ತಿಂಗಳುಗಳ ಕಾಲ ನವದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ಅವರು ಜೂನ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X