ಒಂಬತ್ತು ದಿನ ಮುನ್ನವೇ ದೇಶವನ್ನು ಆವರಿಸಿದ ಮುಂಗಾರು ಮಳೆ: ಹಠಾತ್ ಪ್ರವಾಹದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

Advertisements

ಸಾಮಾನ್ಯ ಸಮಯಕ್ಕಿಂತ ಒಂಬತ್ತು ದಿನ ಮುನ್ನವೇ ದೇಶವನ್ನು ಮುಂಗಾರು ಮಳೆ ಆವರಿಸಿದೆ. ಜುಲೈ 8ರ ಬದಲಾಗಿ ಜೂನ್ 29ರಂದೇ ದೇಶದ್ಯಾಂತ ಮುಂಗಾರು ಆವರಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ, ಈ ಮುಂಗಾರಿನಲ್ಲಿ ಭಾರಿ ಮಳೆ ಮತ್ತು ಹಠಾತ್ ಪ್ರವಾಹದ ಎಚ್ಚರಿಕೆಯನ್ನು ನೀಡಿದೆ.

ಈ ಬಾರಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ ಶೇಕಡ 108ರಷ್ಟು ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಕೇರಳ ಕರಾವಳಿಗೆ ಮುಂಗಾರು ಪ್ರವೇಶ; ಮೂರು ದಿನ ಮುನ್ನವೇ ಮಳೆಗಾಲ ಆರಂಭ

Advertisements

ಕಳೆದ 26 ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಮುಂಗಾರು ಅವಧಿಗೂ ಮುನ್ನ ದೇಶವನ್ನು ಆವರಿಸಿದೆ. ಕಳೆದ ವರ್ಷ, ಜುಲೈ 2ರಂದು ಮಾನ್ಸೂನ್ ಇಡೀ ದೇಶವನ್ನು ಆವರಿಸಿತ್ತು. ಈ ವರ್ಷ ಜೂನ್ 1ರ ಬದಲಾಗಿ ಮೇ 24ರಂದೇ ಕೇರಳವನ್ನು ಮುಂಗಾರು ಪ್ರವೇಶಿಸಿದೆ. ಇಡೀ ದೇಶವನ್ನೂ ಅವಧಿಗೂ ಮುನ್ನವೇ ಆವರಿಸಿದೆ.

ಕಳೆದ 26 ವರ್ಷಗಳಲ್ಲಿ, 2013 ಮತ್ತು 2016 (ಜೂನ್ 16), 2018 (ಜೂನ್ 29), ಮತ್ತು 2005 (ಜೂನ್ 30) ವರ್ಷಗಳಲ್ಲಿ ಜೂನ್‌ನಲ್ಲಿ ಮಾನ್ಸೂನ್ ಇಡೀ ದೇಶವನ್ನು ಆವರಿಸಿದೆ ಎಂದು ಐಎಂಡಿ ಡೇಟಾ ಹೇಳುತ್ತದೆ.

ಮುಂದಿನ ಏಳು ದಿನಗಳಲ್ಲಿ ವಾಯುವ್ಯ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಜೂನ್ 29 ಮತ್ತು 30ರಂದು ಜಾರ್ಖಂಡ್, ಜೂನ್ 29ರಂದು ಒಡಿಶಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಮತ್ತು ಪೂರ್ವ ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ, ಉತ್ತರಾಖಂಡದಾದ್ಯಂತ ಮತ್ತು ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಕೆಲವು ಭಾಗಗಳಲ್ಲಿ, ಯಮುನಾನಗರ ಜಿಲ್ಲೆ ಸೇರಿದಂತೆ ಕೆಲವೆಡೆ ಹಠಾತ್ ಪ್ರವಾಹ ಉಂಟಾಗುವ ಅಪಾಯವಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದಲ್ಲದೆ, ಉತ್ತರ ಒಡಿಶಾ, ದಕ್ಷಿಣ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ ಸಮೀಪದ ಪ್ರದೇಶಗಳಲ್ಲಿಯೂ ದಿಢೀರ್ ಪ್ರವಾಹದ ಎಚ್ಚರಿಕೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X