ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ನಿರ್ಧಾರ ತೆಗೆದುಕೊಳ್ಳಲು ಗಡುವು ವಿಧಿಸಿದ ಸುಪ್ರೀಂ ಕೋರ್ಟ್

Date:

Advertisements

ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಸೂದೆಗಳ ವಿಲೇವಾರಿ ಬಗ್ಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಗೆ ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದೆ.

ಬಾಕಿ ಉಳಿದಿರುವ ಮಸೂದೆಗಳಿಗೆ ಒಪ್ಪಿಗೆಯನ್ನು ತಡೆಹಿಡಿದ ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತ್ತು.

ರಾಜ್ಯ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗೆ ಅಂಕಿತ ಹಾಕದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿ ಕುರಿತು ತೀರ್ಪನ್ನು ನೀಡುವಾಗ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ಪೀಠವು, 201ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳ ಕಾರ್ಯನಿರ್ವಹಣೆಯು ನ್ಯಾಯಾಂಗ ಪರಿಶೀಲನೆಯ ವ್ಯಾಪ್ತಿಗೆ ಒಳಪಡುತ್ತದೆ ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

ವಿಧಿ 201ರ ಪ್ರಕಾರ, ರಾಜ್ಯಪಾಲರು ಮಸೂದೆಯನ್ನು ಕಾಯ್ದಿರಿಸಿದಾಗ, ರಾಷ್ಟ್ರಪತಿಗಳು ಮಸೂದೆಗೆ ಒಪ್ಪಿಗೆ ನೀಡಬೇಕು ಅಥವಾ ಒಪ್ಪಿಗೆ ನೀಡದೆ ತಡೆಹಿಡಿಯುವುದಾಗಿ ಘೋಷಿಸಬೇಕು. ಆದರೆ, ಸಂವಿಧಾನದಲ್ಲಿ ಯಾವುದೇ ಕಾಲಮಿತಿ ಒದಗಿಸಿಲ್ಲ.

ರಾಷ್ಟ್ರಪತಿಗಳು ಈ ವಿಚಾರದಲ್ಲಿ ʼಪಾಕೆಟ್ ವೀಟೋʼ ಅಧಿಕಾರವನ್ನು ಹೊಂದಿಲ್ಲ. ಅವರು ಮಸೂದೆಗೆ ಒಪ್ಪಿಗೆ ನೀಡಬೇಕು ಅಥವಾ ತಡೆಹಿಡಿಯಬೇಕು. ಕಾನೂನಿನ ಅಡಿಯಲ್ಲಿ ಯಾವುದೇ ಅಧಿಕಾರವನ್ನು ಚಲಾಯಿಸಲು ಯಾವುದೇ ಸಮಯದ ಮಿತಿಯನ್ನು ಸೂಚಿಸದಿದ್ದರೂ ಅದನ್ನು ಸಮಂಜಸವಾದ ಸಮಯದೊಳಗೆ ಚಲಾಯಿಸಬೇಕು ಎಂದು ಕಾನೂನಿನ ನಿಲುವಾಗಿದೆ. ಮೂರು ತಿಂಗಳ ಅವಧಿ ಮೀರಿ ವಿಳಂಬವಾದಲ್ಲಿ ಸೂಕ್ತ ಕಾರಣಗಳನ್ನು ದಾಖಲಿಸಿ ಸಂಬಂಧಪಟ್ಟ ರಾಜ್ಯಕ್ಕೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X