ಜನವರಿ 22 ರಂದು ಅಯೋಧ್ಯೆಯಲ್ಲಿ ‘ರಾಮ ಪ್ರಾಣ್ ಪ್ರತಿಷ್ಠಾ’ ಸಮಾರಂಭ ನಡೆಯುತ್ತಿರುವ ಹಿನ್ನೆಲೆ ದೇಶಾದ್ಯಂತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ಇದೀಗ, ಸಾರ್ವಜನಿಕ ಭಾವನೆಗೆ ಮನ್ನಣೆ ನೀಡಿ ಅರ್ಧ ದಿನ ರಜೆ ನೀಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗಿದೆ ಎಂದು ಜೀತೇಂದ್ರ ಸಿಂಗ್ ತಿಳಿಸಿದ್ದಾರೆ.
ಮಹತ್ವದ ಸಮಾರಂಭದಲ್ಲಿ ಭಾಗವಹಿಸಲು ಅಥವಾ ವೀಕ್ಷಿಸಲು ಅಧಿಕಾರಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ರಜೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಆರ್ಎಸ್ಎಸ್ಗೆ ಹಣ ನೀಡುವ ಎನ್ಆರ್ಐ ಬ್ರಾಹ್ಮಣರು ಮಾಂಸ ತಿನ್ನುತ್ತಿಲ್ಲವೇ? : ‘ಅನ್ನಪೂರ್ಣಿ’ ವಿವಾದದ ಬಗ್ಗೆ ಗಾಯಕ ಟಿ.ಎಂ.ಕೃಷ್ಣ
ಗುರುವಾರ ಬೆಳಗ್ಗೆ, ರಾಮಮಂದಿರದ ಸ್ಮರಣಾರ್ಥ ಬಿಡುಗಡೆ ಮಾಡಲಾಗಿರುವ ಅಂಚೆ ಚೀಟಿಗಳನ್ನು ಒಳಗೊಂಡಿರುವ ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ.