ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟದಿಂದ ಕರೆ: ಪ್ರಧಾನಿ ಮೋದಿ ಮತ್ತೆ ದ್ವೇಷ ಭಾಷಣ

Date:

Advertisements

ರಾಜಸ್ಥಾನದಲ್ಲಿ ಮುಸಲ್ಮಾನರ ವಿರುದ್ಧ ದ್ವೇಷ ಭಾಷಣಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವಂತೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮತ್ತೊಮ್ಮೆ ದ್ವೇಷ ಭಾಷಣಗೈದಿದ್ದಾರೆ.

“ಇಂಡಿಯಾ ಮೈತ್ರಿಕೂಟದ ಇನ್ನೊಂದು ರಣ ನೀತಿ ಹೊರಗಡೆ ಬಂದಿದೆ. ಅದರ ನಾಯಕರೇ ದೇಶದ ಮುಂದಿಟ್ಟಿದ್ದಾರೆ. ಇಂಡಿಯಾ ಒಕ್ಕೂಟವು ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಕರೆ ನೀಡಿದೆ‌.” ಎಂದು ಪ್ರಧಾನಿ ನರೇಂದ್ರ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ನಂತೆ ಇದೀಗ ವೋಟ್‌ ಜಿಹಾದ್‌ ಪ್ರಾರಂಭಿಸಲಿದ್ದಾರೆ. ಎಲ್ಲಾ ಮುಸಲ್ಮಾನರು ಒಗ್ಗಟ್ಟಾಗಿ ವೋಟ್ ಜಿಹಾದ್ ಮಾಡುವಂತೆ ಹೇಳಲಾಗಿದೆ. ವಿಪಕ್ಷಗಳ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ” ಎಂದು ಮೋದಿ ಹೇಳಿಕೆ ನೀಡಿದ್ದಾರೆ.

Advertisements

ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, “ಲವ್ ಜಿಹಾದ್ ಬಗ್ಗೆ ಕೇಳಿದ್ದೆವು, ಲ್ಯಾಂಡ್‌ ಜಿಹಾದ್‌ ಬಗ್ಗೆ ಕೇಳಿದ್ದೆವು. ಈಗ ವೋಟ್ ಜಿಹಾದ್ ಕೇಳುತ್ತಿದ್ದೇವೆ. ಅದು ಕೂಡ ಸುಶಿಕ್ಷಿತ ಮುಸ್ಲಿಂ ಕುಟುಂಬದ ಈ ಮಾತು ಹೊರಗೆ ಬಂದಿದೆ. ಸಾಮಾನ್ಯ ಮದ್ರಸಾದಿಂದ ಹೊರಬಂದ ಮಕ್ಕಳು ಇದನ್ನು ಹೇಳಿದ್ದಲ್ಲ. ಅತ್ಯಂತ ಸುಶಿಕ್ಷಿತ ಕುಟುಂಬ, ಕಾಂಗ್ರೆಸ್‌ನ ಉನ್ನತ ಸ್ಥಾನದಲ್ಲಿರುವ ಕುಟುಂಬದಿಂದ ಈ ಮಾತು ಕೇಳಿಬಂದಿದೆ. ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಕರೆ ನೀಡಲಾಗಿದೆ ಎಂದು ಈ ಮುಸಲ್ಮಾನ ಕುಟುಂಬವು ಹೇಳಿದೆ” ಎಂದು ಪ್ರಧಾನಿ ಹೇಳಿಕೆ ನೀಡಿದ್ದಾರೆ.

“ಜಿಹಾದ್ ಎಂದರೆ ಏನು ಎಂಬುದು ನಿಮಗೆ ಗೊತ್ತಲ್ಲವೇ? ಜಿಹಾದ್ ಯಾರ ವಿರುದ್ಧ ಮಾಡಲಾಗುತ್ತದೆ. ಎಲ್ಲ ಮುಸಲ್ಮಾನರು ಒಟ್ಟಾಗಿ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟವು ಕರೆ ನೀಡಿದೆ. ವೋಟ್ ಜಿಹಾದಿನ ಮಾತುಗಳನ್ನು ಆಡುವ ಮೂಲಕ ಇಂಡಿಯಾ ಮೈತ್ರಿಕೂಟವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅಪಮಾನ ಮಾಡಿದೆ. ಈವರೆಗೆ ಕಾಂಗ್ರೆಸ್‌ನ ಒಬ್ಬನೇ ಒಬ್ಬ ನಾಯಕ ಇದುವರೆಗೆ ಇದನ್ನು ವಿರೋಧಿಸಿಲ್ಲ. ಮೌನ ಸಮ್ಮತಿ ನೀಡಿದ್ದಾರೆ. ವೋಟ್ ಜಿಹಾದ್‌ನ ಮಾತುಗಳು ಕಾಂಗ್ರೆಸ್‌ನ ತುಷ್ಟೀಕರಣ ನೀತಿಯನ್ನು ಮುಂದುವರಿಸಿದೆ” ಎಂದು ಪ್ರಧಾನಿ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಒಂದು ಕಡೆ ಇಂಡಿಯಾ ಮೈತ್ರಿಕೂಟವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೊಂದು ಕಡೆ ವೋಟ್ ಜಿಹಾದ್ ನಡೆಸುವಂತೆ ಕರೆ ಕೊಡುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟದ ಉದ್ದೇಶ ಅದೆಷ್ಟು ಭಯಾನಕ ಎಂಬುದನ್ನು ಇದರಿಂದ ತಿಳಿಯಬಹುದು” ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X